AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿರುವ ಪ್ರಕರಣ ಮುನ್ನೆಲೆಗೆ ಬಂದಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಿದ ಯುವಕರು; ಅದು ಇಂಕ್ ಅಲ್ಲ ಆ್ಯಸಿಡ್ ಎಂದು ಕೈ ನಾಯಕರು
ಕನ್ಹಯ್ಯ ಕುಮಾರ್
TV9 Web
| Edited By: |

Updated on:Feb 01, 2022 | 4:12 PM

Share

ಲಕ್ನೋ: ಲಕ್ನೋದ ಕಾಂಗ್ರೆಸ್ ಕಚೇರಿಯಲ್ಲಿ ಜೆಎನ್​ಯು (JNU) ಮಾಜಿ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಮೇಲೆ ಮಸಿ ಎರಚಲಾಗಿದೆ. ಆದರೆ, ಅದು ಇಂಕ್ ಅಲ್ಲ, ಒಂದು ರೀತಿಯ ಆಸಿಡ್ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆರೋಪಿಗಳು ಕನ್ಹಯ್ಯಾ ಕುಮಾರ್ (Kanhaiya Kumar) ಅವರ ಮೇಲೆ ಆಸಿಡ್ ಎಸೆಯಲು ಪ್ರಯತ್ನಿಸಿದರು. ಆದರೆ ಅದು ವಿಫಲವಾಯಿತು. ಆ ಆಸಿಡ್​ನ ಕೆಲವು ಹನಿಗಳು ಹತ್ತಿರದಲ್ಲಿ ನಿಂತಿದ್ದ 3ರಿಂದ 4 ಯುವಕರ ಮೇಲೆ ಬಿದ್ದವು. ಪ್ರಸ್ತುತ, ಆರೋಪಿಗಳ ಬಗ್ಗೆ ಯಾರೂ ಏನನ್ನೂ ಹೇಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು (Congress Leaders) ಆಪಾದಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಲಕ್ನೋದ ಕಾಂಗ್ರೆಸ್ ಕಚೇರಿಯಲ್ಲಿ ಕನ್ಹಯ್ಯಾ ಕುಮಾರ್ ಮೇಲೆ ಈ ಮಸಿ ಎರಚಲಾಗಿದೆ ಎಂದು ಹೇಳಲಾಗುತ್ತಿದೆ. ಮಸಿ ಎಂದು ಎಲ್ಲರನ್ನೂ ನಂಬಿಸಲಾಗುತ್ತದೆ. ಆದರೆ, ಅದು ಒಂದು ರೀತಿಯ ಆಸಿಡ್ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.

ಕಾಂಗ್ರೆಸ್ ಯುವ ಮುಖಂಡ ಕನ್ಹಯ್ಯಾ ಕುಮಾರ್ ಲಕ್ನೋದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದರು. ಇಂದು ಅವರು ಲಕ್ನೋದ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಾಗಿ ಕೈ ಜೋಡಿಸಿ ಮತ ಕೇಳಿದರು. ಈ ವೇಳೆ ಸಂವಾದದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಸಾರ್ವಜನಿಕರ ಹಾದಿ ಹಿಡಿದಿದ್ದು, ಉಳಿದವರೆಲ್ಲರೂ ವರ್ಚುವಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪಕ್ಷ ತೊರೆಯುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕನ್ಹಯ್ಯ ಕುಮಾರ್, ಕೆಲವು ನಾಯಕರು ವಯಸ್ಸಾದ ಕಾರಣದಿಂದ ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಮ್ಮಂಥವರು ಕಾಂಗ್ರೆಸ್ ಸೇರಲು ಮುಂದೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ಹಯ್ಯ ಕುಮಾರ್ ಇಂದು ಹೇಳಿದ್ದರು. ದೇಶವನ್ನು ಸೃಷ್ಟಿಸದವರು ದೇಶವನ್ನು ಮಾರುತ್ತಿದ್ದಾರೆ, ಕಾಂಗ್ರೆಸ್ ದೇಶವನ್ನು ಸೃಷ್ಟಿಸಿದೆ, ಆದ್ದರಿಂದ ಕಾಂಗ್ರೆಸ್ ಈ ದೇಶವನ್ನು ಉಳಿಸುತ್ತಿದೆ ಎಂದು ಚುನಾವಣಾ ಪ್ರಚಾರದ ವೇಳೆ ಕನ್ಹಯ್ಯ ಕುಮಾರ್ ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ವಿರುದ್ಧ ಕನ್ಹಯ್ಯ ಕುಮಾರ್ ಹೇಳಿಕೆ: ಇವರ ತಾತ-ಮುತ್ತಾತ ಹೀಗೆ ಹೇಳಿ ಕಳೆದು ಹೋಗಿದ್ದಾರೆ ಎಂದ ಸಿಟಿ ರವಿ

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

Published On - 4:11 pm, Tue, 1 February 22

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ