AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ ಎಂದಿದ್ದರು.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Dec 21, 2021 | 3:33 PM

Share

ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ (​Instagram Accounts Hacked) ಆಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಇಂದು ಆರೋಪ ಮಾಡಿದ್ದಾರೆ. ಇತ್ತೀಚೆಗೆಷ್ಟೇ ಸಮಾಜವಾದಿ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​, ತಮ್ಮ ಫೋನ್​ನ್ನು ಯೋಗಿ ಆದಿತ್ಯನಾಥ್​ ಕದ್ದಾಲಿಕೆ ಮಾಡುತ್ತಿದ್ದಾರೆ. ನನ್ನ ಕಚೇರಿ, ನನ್ನ ಸುತ್ತಲಿನ ಜನರ ಫೋನ್​ಗಳೆಲ್ಲ ಟ್ಯಾಪ್​ ಆಗಿವೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ, ತಮ್ಮ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.  ಇನ್ನು ಅಖಿಲೇಶ್ ಯಾದವ್​ ಫೋನ್​ ಟ್ಯಾಪ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್​, ಅಖಿಲೇಶ್ ಯಾದವ್​ ತಾವು ಮುಖ್ಯಮಂತ್ರಿಯಾಗಿದ್ದಾಗ ಹೀಗೆ ಫೋನ್ ಕದ್ದಾಲಿಕೆ ಮಾಡಿದ್ದಿರಬೇಕು. ಅದಕ್ಕೆ ಈಗ ಉಳಿದವರೂ ಅದೇ ರೀತಿ ಮಾಡುತ್ತಾರೆ ಎಂದು ನ್ಕೊಂ​ ಡು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ನಿರಂಕುಶಾಧಿಕಾರಿಗಳನ್ನು ನಿಯಂತ್ರಿಸುತ್ತಿಲ್ಲ. ಇವೆಲ್ಲವನ್ನೂ ಬಿಟ್ಟು ಪ್ರತಿಪಕ್ಷಗಳ ಫೋನ್​ ಕದ್ದಾಲಿಕೆಯಂತ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದ್ದರು.  ಹಾಗೇ, ಇಂದು ಪ್ರಯಾಗ್​ ರಾಜ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಪ್ರಿಯಾಂಕಾ ಗಾಂಧಿ, ನಾನೊಬ್ಬಳು ಹುಡುಗಿಯಾಗಿ ಹುಟ್ಟಿದ್ದೇನೆ..ನಾನು ಹೋರಾಟವನ್ನೂ ಮಾಡಬಲ್ಲೆ. ಇಂದು ಪ್ರಧಾನಮಂತ್ರಿ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸ್ತ್ರೀಯರಲ್ಲೂ ಅರಿವು ಮೂಡಿದೆ. ಈ ದೇಶದ ಶಕ್ತಿಯಾಗಿರುವ ಮಹಿಳೆಯರ ಎದುರು ಪ್ರಧಾನಮಂತ್ರಿ ನರೇಂದ್ರ ಮೋದಿ ತಲೆ ಬಾಗಿದ್ದಾರೆ. ಉತ್ತರ ಪ್ರದೇಶದ ಮಹಿಳೆಯರಿಗೆ ಸಿಕ್ಕ ಜಯ ಇದಾಗಿದೆ. ನನಗೆ ತುಂಬ ಸಂತೋಷವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಅನುಪಯೋಗಿ ಸಿಎಂ ನನ್ನ ಫೋನ್ ಟ್ಯಾಪ್​ ಮಾಡಿಸುತ್ತಿದ್ದಾರೆ, ದಿನಾ ಸಂಜೆ ಅವರು ರೆಕಾರ್ಡಿಂಗ್​ ಕೇಳುತ್ತಾರೆ: ಅಖಿಲೇಶ್​ ಯಾದವ್ ಆರೋಪ

Published On - 3:33 pm, Tue, 21 December 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ