AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ ಎಂದಿದ್ದರು.

ನನ್ನ ಇಬ್ಬರು ಮಕ್ಕಳ ಇನ್​ಸ್ಟಾಗ್ರಾಂ ಖಾತೆಗಳು ಹ್ಯಾಕ್​ ಆಗಿವೆ: ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Dec 21, 2021 | 3:33 PM

Share

ನನ್ನ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ (​Instagram Accounts Hacked) ಆಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಇಂದು ಆರೋಪ ಮಾಡಿದ್ದಾರೆ. ಇತ್ತೀಚೆಗೆಷ್ಟೇ ಸಮಾಜವಾದಿ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್​, ತಮ್ಮ ಫೋನ್​ನ್ನು ಯೋಗಿ ಆದಿತ್ಯನಾಥ್​ ಕದ್ದಾಲಿಕೆ ಮಾಡುತ್ತಿದ್ದಾರೆ. ನನ್ನ ಕಚೇರಿ, ನನ್ನ ಸುತ್ತಲಿನ ಜನರ ಫೋನ್​ಗಳೆಲ್ಲ ಟ್ಯಾಪ್​ ಆಗಿವೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ, ತಮ್ಮ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.  ಇನ್ನು ಅಖಿಲೇಶ್ ಯಾದವ್​ ಫೋನ್​ ಟ್ಯಾಪ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್​, ಅಖಿಲೇಶ್ ಯಾದವ್​ ತಾವು ಮುಖ್ಯಮಂತ್ರಿಯಾಗಿದ್ದಾಗ ಹೀಗೆ ಫೋನ್ ಕದ್ದಾಲಿಕೆ ಮಾಡಿದ್ದಿರಬೇಕು. ಅದಕ್ಕೆ ಈಗ ಉಳಿದವರೂ ಅದೇ ರೀತಿ ಮಾಡುತ್ತಾರೆ ಎಂದು ನ್ಕೊಂ​ ಡು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಖಿಲೇಶ್​ ಯಾದವ್​ ಫೋನ್​ ಟ್ಯಾಪಿಂಗ್​ ಆರೋಪ ಮಾಡುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ನಿರಂಕುಶಾಧಿಕಾರಿಗಳನ್ನು ನಿಯಂತ್ರಿಸುತ್ತಿಲ್ಲ. ಇವೆಲ್ಲವನ್ನೂ ಬಿಟ್ಟು ಪ್ರತಿಪಕ್ಷಗಳ ಫೋನ್​ ಕದ್ದಾಲಿಕೆಯಂತ ಕೆಲಸದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿದ್ದರು.  ಹಾಗೇ, ಇಂದು ಪ್ರಯಾಗ್​ ರಾಜ್​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಪ್ರಿಯಾಂಕಾ ಗಾಂಧಿ, ನಾನೊಬ್ಬಳು ಹುಡುಗಿಯಾಗಿ ಹುಟ್ಟಿದ್ದೇನೆ..ನಾನು ಹೋರಾಟವನ್ನೂ ಮಾಡಬಲ್ಲೆ. ಇಂದು ಪ್ರಧಾನಮಂತ್ರಿ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸ್ತ್ರೀಯರಲ್ಲೂ ಅರಿವು ಮೂಡಿದೆ. ಈ ದೇಶದ ಶಕ್ತಿಯಾಗಿರುವ ಮಹಿಳೆಯರ ಎದುರು ಪ್ರಧಾನಮಂತ್ರಿ ನರೇಂದ್ರ ಮೋದಿ ತಲೆ ಬಾಗಿದ್ದಾರೆ. ಉತ್ತರ ಪ್ರದೇಶದ ಮಹಿಳೆಯರಿಗೆ ಸಿಕ್ಕ ಜಯ ಇದಾಗಿದೆ. ನನಗೆ ತುಂಬ ಸಂತೋಷವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಅನುಪಯೋಗಿ ಸಿಎಂ ನನ್ನ ಫೋನ್ ಟ್ಯಾಪ್​ ಮಾಡಿಸುತ್ತಿದ್ದಾರೆ, ದಿನಾ ಸಂಜೆ ಅವರು ರೆಕಾರ್ಡಿಂಗ್​ ಕೇಳುತ್ತಾರೆ: ಅಖಿಲೇಶ್​ ಯಾದವ್ ಆರೋಪ

Published On - 3:33 pm, Tue, 21 December 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ