AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್ ಹಿಂಸಾಚಾರ: ಘಟನೆ ನಡೆದ ಸ್ಥಳಗಳಲ್ಲಿ ಕೂಡಲೇ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಘಟನೆಗೆ ಸಂಬಂಧಪಟ್ಟಂತೆ ಒಂದೂ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವುದು ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಹೊಣೆ ಎಂದು ಹೇಳಿರುವ ಕೋಲ್ಕತ್ತ ಹೈಕೋರ್ಟ್​, ಯಾವುದೇ ರೀತಿಯ ವಿಳಂಬ ಮಾಡದೆ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೇಳಿದೆ.

ಬಿರ್ಭೂಮ್ ಹಿಂಸಾಚಾರ: ಘಟನೆ ನಡೆದ ಸ್ಥಳಗಳಲ್ಲಿ ಕೂಡಲೇ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಕೋಲ್ಕತ್ತ ಹೈಕೋರ್ಟ್​
TV9 Web
| Updated By: Lakshmi Hegde|

Updated on:Mar 23, 2022 | 4:23 PM

Share

ಪಶ್ಚಿಮ ಬಂಗಾಳದ (West Bengal) ಬಿರ್ಭೂಮ್​​ ಜಿಲ್ಲೆಯ (Birbhum Massacre)  ರಾಂಪುರಹತ್​​ನ ಬರೋಸಾಲ್ ಗ್ರಾಮ ಪಂಚಾಯಿತಿ ಉಪಪ್ರಧಾನ್​ (ಉಪಾಧ್ಯಕ್ಷ) ಭಡು ಶೇಖ್​ ಎಂಬುವರ ಹತ್ಯೆ ನಡೆದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ, 12ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಟ್ಟ ಮತ್ತು ಇಬ್ಬರು ಮಕ್ಕಳು ಸೇರಿ 8 ಮಂದಿ ಸಜೀವ ದಹನಗೊಂಡ ಪ್ರಕರಣವನ್ನು ಇಂದು ಕೋಲ್ಕತ್ತ ಹೈಕೋರ್ಟ್ ಸುಮೊಟೊ (ಸ್ವಯಂಪ್ರೇರಿತ) ವಿಚಾರಣೆ ನಡೆಸಿತು. ಸೂಕ್ತ ವಿಚಾರಣೆ ನಡೆದು, ತೀರ್ಪು ಹೊರಬರಬೇಕು ಎಂದರೆ ಸಾಕ್ಷಿಗಳನ್ನು ಸಂರಕ್ಷಿಸಬೇಕು. ಹೀಗಾಗಿ ಕ್ರೈಂ-ಹಿಂಸಾಚಾರ ನಡೆದ ಸ್ಥಳಗಳನ್ನು ಎಲ್ಲ ಆಯಾಮಗಳಿಂದಲೂ ತೋರಿಸುವ ರೀತಿಯಲ್ಲಿ ಆ ಜಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು. ಸಿಸಿಟಿವಿಯಲ್ಲಿ ಸಾಕಷ್ಟು ಸ್ಟೋರೇಜ್​​ಗೆ ಅವಕಾಶ ಇರಬೇಕು. ಸಾಕ್ಷಿ ನಾಶಕ್ಕೆ ಅವಕಾಶ ಕೊಡಬಾರದು ಮತ್ತು ಈ ಕೆಲಸವನ್ನು ಜಿಲ್ಲಾ ನ್ಯಾಯಾಧೀಶರಾದ ಪುರ್ಬಾ ಭುರ್ದಾವನ್ ಸಮ್ಮುಖದಲ್ಲಿಯೇ ನಡೆಸಬೇಕು ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಘಟನೆಗೆ ಸಂಬಂಧಪಟ್ಟಂತೆ ಒಂದೂ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವುದು ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಹೊಣೆ ಎಂದು ಹೇಳಿರುವ ಕೋಲ್ಕತ್ತ ಹೈಕೋರ್ಟ್​, ಯಾವುದೇ ರೀತಿಯ ವಿಳಂಬ ಮಾಡದೆ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ. ವಿಧಿವಿಜ್ಞಾನ ಪರೀಕ್ಷೆಗೆ ಏನೆಲ್ಲ ವಸ್ತುಗಳ ಸಂಗ್ರಹ ಅಗತ್ಯವೋ ಅದನ್ನು ಕೂಡಲೇ ಮಾಡಿ ಎಂದು  ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಸಿಎಫ್‌ಎಸ್‌ಎಲ್)  ಸೂಚನೆ ನೀಡಿದೆ.

ರಾಷ್ಟ್ರೀಯ ಹೆದ್ದಾರಿಯ ಅಂಗಡಿಯೊಂದರಲ್ಲಿ ನಿಂತಿದ್ದ ಉಪಾಧ್ಯಕ್ಷ ಭಡು ಶೇಖ್​ ಅವರನ್ನು, ಬೈಕ್​ನಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಕಚ್ಚಾ  ಬಾಂಬ್​ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಆದರೆ ಭಡು ಶೇಖ್​ ಬೆಂಬಲಿಗರು ಮಾತ್ರ ತಾಳ್ಮೆ ಕಳೆದುಕೊಂಡು 12 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಟ್ಟಿದ್ದಾರೆ.  ಇಲ್ಲಿಯವರೆಗೆ ಘಟನೆಗೆ ಸಂಬಂಧಪಟ್ಟಂತೆ ಸುಮಾರು 20 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಶೇಷ ತನಿಖಾ ತಂಡವೂ ರಚನೆಯಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಕೂಡ ಘಟನೆ ಬಗ್ಗೆ ಸಮಗ್ರ ವರದಿ ನೀಡುವಂತೆ ಪಶ್ಚಿಮ ಬಂಗಾಳ ರಾಜ್ಯ ಗೃಹ ಸಚಿವಾಲಯವನ್ನು ಕೇಳಿದೆ. ಇಷ್ಟರ ಮಧ್ಯೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾತ್ಸವ್​ ಮತ್ತು ನ್ಯಾ. ರಾಜರ್ಷಿ ಭಾರದ್ವಾಜ್​ ನೇತೃತ್ವದ ಪೀಠ ಈ ಸೂಚನೆಗಳನ್ನು ನೀಡಿದೆ.

ಇದನ್ನೂ ಓದಿ: ಗಲಾಟೆ ಮಾಡುತ್ತಿದ್ದ ಬಿಜೆಪಿ ಶಾಸಕರನ್ನು ಸುಮ್ಮನಾಗಿಸಲು ಪ್ರಯತ್ನಿಸದ ಸತೀಶ್ ರೆಡ್ಡಿಯನ್ನು ಸ್ಪೀಕರ್ ಕಾಗೇರಿ ತರಾಟೆಗೆ ತೆಗೆದುಕೊಂಡರು

Published On - 4:03 pm, Wed, 23 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?