ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಎಐಎಂಐಎಂ ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ
ಮುದ್ದಿನ ನಾಯಿಮರಿ ಜೊತೆ ರಾಹುಲ್ ಗಾಂಧಿ- ಸೋನಿಯಾ ಗಾಂಧಿ
Follow us
|

Updated on: Oct 05, 2023 | 7:36 PM

ನವದೆಹಲಿ: ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಮರಿಗೆ ನೂರಿ ಎಂದು ಹೆಸರಿಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋವಾದ ವಿಶೇಷ ತಳಿಯಾದ 3 ತಿಂಗಳ ವಯಸ್ಸಿನ ಜಾಕ್ ರಸೆಲ್ ಟೆರಿಯರ್ ನಾಯಿಮರಿಯನ್ನು ರಾಹುಲ್ ಗಾಂಧಿ ತಮ್ಮ ಮನೆಗೆ ತಂದಿದ್ದರು. ಈ ‘ನೂರಿ’ಯನ್ನು ನೋಡಿ ಸೋನಿಯಾ ಗಾಂಧಿ ಕೂಡ ಅಚ್ಚರಿಯಿಂದ, ಎತ್ತಿ ಮುದ್ದಾಡಿದ ವಿಡಿಯೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿಗೆ ಕ್ಯೂಟ್ ಗಿಫ್ಟ್; ಕುಟುಂಬದ ಹೊಸ ಸದಸ್ಯೆಯನ್ನು ಪರಿಚಯಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ತಮ್ಮ ಮನೆಯ ನಾಯಿಮರಿಗೆ ‘ನೂರಿ’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್, ‘ರಾಹುಲ್ ಗಾಂಧಿ ತಮ್ಮ ಮುದ್ದಿನ ನಾಯಿಗೆ ‘ನೂರಿ’ ಎಂದು ಹೆಸರಿಟ್ಟಿರುವುದು ಸರಿಯಲ್ಲ. ರಾಹುಲ್ ಗಾಂಧಿ ಕ್ರಮ ಖಂಡನೀಯ ಮತ್ತು ನಾಚಿಕೆಗೇಡಿನ ಸಂಗತಿ. ಅದೇ ಹೆಸರನ್ನು ಹೊಂದಿರುವ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾಡಿದ ಅವಮಾನವಿದು. ಇದು ಮುಸ್ಲಿಂ ಹೆಣ್ಣುಮಕ್ಕಳು ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಗಾಂಧಿ ಕುಟುಂಬ ಯಾವ ರೀತಿಯ ಗೌರವ ಹೊಂದಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​