AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಎಐಎಂಐಎಂ ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ
ಮುದ್ದಿನ ನಾಯಿಮರಿ ಜೊತೆ ರಾಹುಲ್ ಗಾಂಧಿ- ಸೋನಿಯಾ ಗಾಂಧಿ
ಸುಷ್ಮಾ ಚಕ್ರೆ
|

Updated on: Oct 05, 2023 | 7:36 PM

Share

ನವದೆಹಲಿ: ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಮರಿಗೆ ನೂರಿ ಎಂದು ಹೆಸರಿಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋವಾದ ವಿಶೇಷ ತಳಿಯಾದ 3 ತಿಂಗಳ ವಯಸ್ಸಿನ ಜಾಕ್ ರಸೆಲ್ ಟೆರಿಯರ್ ನಾಯಿಮರಿಯನ್ನು ರಾಹುಲ್ ಗಾಂಧಿ ತಮ್ಮ ಮನೆಗೆ ತಂದಿದ್ದರು. ಈ ‘ನೂರಿ’ಯನ್ನು ನೋಡಿ ಸೋನಿಯಾ ಗಾಂಧಿ ಕೂಡ ಅಚ್ಚರಿಯಿಂದ, ಎತ್ತಿ ಮುದ್ದಾಡಿದ ವಿಡಿಯೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿಗೆ ಕ್ಯೂಟ್ ಗಿಫ್ಟ್; ಕುಟುಂಬದ ಹೊಸ ಸದಸ್ಯೆಯನ್ನು ಪರಿಚಯಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ತಮ್ಮ ಮನೆಯ ನಾಯಿಮರಿಗೆ ‘ನೂರಿ’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್, ‘ರಾಹುಲ್ ಗಾಂಧಿ ತಮ್ಮ ಮುದ್ದಿನ ನಾಯಿಗೆ ‘ನೂರಿ’ ಎಂದು ಹೆಸರಿಟ್ಟಿರುವುದು ಸರಿಯಲ್ಲ. ರಾಹುಲ್ ಗಾಂಧಿ ಕ್ರಮ ಖಂಡನೀಯ ಮತ್ತು ನಾಚಿಕೆಗೇಡಿನ ಸಂಗತಿ. ಅದೇ ಹೆಸರನ್ನು ಹೊಂದಿರುವ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾಡಿದ ಅವಮಾನವಿದು. ಇದು ಮುಸ್ಲಿಂ ಹೆಣ್ಣುಮಕ್ಕಳು ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಗಾಂಧಿ ಕುಟುಂಬ ಯಾವ ರೀತಿಯ ಗೌರವ ಹೊಂದಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ