AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಎಐಎಂಐಎಂ ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ; ನಾಯಿಮರಿಗೆ ನೂರಿ ಎಂದು ಹೆಸರಿಟ್ಟ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ
ಮುದ್ದಿನ ನಾಯಿಮರಿ ಜೊತೆ ರಾಹುಲ್ ಗಾಂಧಿ- ಸೋನಿಯಾ ಗಾಂಧಿ
ಸುಷ್ಮಾ ಚಕ್ರೆ
|

Updated on: Oct 05, 2023 | 7:36 PM

Share

ನವದೆಹಲಿ: ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್​ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಮರಿಗೆ ನೂರಿ ಎಂದು ಹೆಸರಿಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋವಾದ ವಿಶೇಷ ತಳಿಯಾದ 3 ತಿಂಗಳ ವಯಸ್ಸಿನ ಜಾಕ್ ರಸೆಲ್ ಟೆರಿಯರ್ ನಾಯಿಮರಿಯನ್ನು ರಾಹುಲ್ ಗಾಂಧಿ ತಮ್ಮ ಮನೆಗೆ ತಂದಿದ್ದರು. ಈ ‘ನೂರಿ’ಯನ್ನು ನೋಡಿ ಸೋನಿಯಾ ಗಾಂಧಿ ಕೂಡ ಅಚ್ಚರಿಯಿಂದ, ಎತ್ತಿ ಮುದ್ದಾಡಿದ ವಿಡಿಯೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿಗೆ ಕ್ಯೂಟ್ ಗಿಫ್ಟ್; ಕುಟುಂಬದ ಹೊಸ ಸದಸ್ಯೆಯನ್ನು ಪರಿಚಯಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ತಮ್ಮ ಮನೆಯ ನಾಯಿಮರಿಗೆ ‘ನೂರಿ’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್, ‘ರಾಹುಲ್ ಗಾಂಧಿ ತಮ್ಮ ಮುದ್ದಿನ ನಾಯಿಗೆ ‘ನೂರಿ’ ಎಂದು ಹೆಸರಿಟ್ಟಿರುವುದು ಸರಿಯಲ್ಲ. ರಾಹುಲ್ ಗಾಂಧಿ ಕ್ರಮ ಖಂಡನೀಯ ಮತ್ತು ನಾಚಿಕೆಗೇಡಿನ ಸಂಗತಿ. ಅದೇ ಹೆಸರನ್ನು ಹೊಂದಿರುವ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾಡಿದ ಅವಮಾನವಿದು. ಇದು ಮುಸ್ಲಿಂ ಹೆಣ್ಣುಮಕ್ಕಳು ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಗಾಂಧಿ ಕುಟುಂಬ ಯಾವ ರೀತಿಯ ಗೌರವ ಹೊಂದಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ