AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Mar 16, 2023 | 11:53 AM

Share

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಜಂಟಿ ಸೇನಾ ಕಮಾಂಡರ್‌ಗಳಿಗೆ ಅಧಿಕಾರ ನೀಡುವ ಇಂಟರ್-ಸರ್ವೀಸಸ್ ಆರ್ಗನೈಸೇಶನ್ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ರಕ್ಷಣಾ ಸಚಿವಾಲಯವು ಲೋಕಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ್ದು ಮೂರು ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಮಾಂಡರ್‌ಗಳಿಗೆ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಒದಗಿಸುವುದು ಈ ವಿಧೇಯಕದ ಉದ್ದೇಶವಾಗಿದೆ.

ಅಂತರ-ಸೇವೆಗಳ ಸಂಸ್ಥೆಗಳ (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ, 2023 ರ ಪ್ರಕಾರ, ಕೇಂದ್ರ ಸರ್ಕಾರವು ಅಧಿಸೂಚನೆಯ ಮೂಲಕ ಅಂತರ-ಸೇವೆಗಳ ಸಂಸ್ಥೆಯನ್ನು ರಚಿಸಬಹುದು. ಈ ವಿಧೇಯಕವನ್ನು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದರು.

ಪ್ರಸ್ತಾಪಿತ ವಿಧೇಯಕವು ಮೂಲಭೂತವಾಗಿ ಅಂತರ್-ಸೇವೆಗಳ ಸಂಸ್ಥೆಗಳ ಮುಖ್ಯಸ್ಥರಿಗೆ ನಿಯಮಿತ ವಾಯುಪಡೆ, ಸೇನೆ ಮತ್ತು ನೌಕಾಪಡೆಯ ಎಲ್ಲಾ ಸಿಬ್ಬಂದಿಗಳ ಮೇಲೆ ಪರಿಣಾಮಕಾರಿ ಆಜ್ಞೆ, ನಿಯಂತ್ರಣ ಮತ್ತು ಶಿಸ್ತುಗಳನ್ನು ಚಲಾಯಿಸಲು ಅಧಿಕಾರ ನೀಡುತ್ತದೆ.

ಪ್ರಸ್ತುತ, ಭಾರತೀಯ ವಾಯುಪಡೆ, ಸೇನೆ ಮತ್ತು ನೌಕಾಪಡೆಗಳನ್ನು ಕ್ರಮವಾಗಿ ಏರ್ ಫೋರ್ಸ್ ಆಕ್ಟ್, 1950, ಆರ್ಮಿ ಆಕ್ಟ್ ಮತ್ತು ನೇವಿ ಆಕ್ಟ್, 1957 ರಿಂದ ನಿಯಂತ್ರಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಮೂರು ಸಶಸ್ತ್ರ ಪಡೆಗಳ ಅಧಿಕಾರಿಗಳಿಗೆ ಮಾತ್ರ ಶಿಸ್ತಿನ ಅಧಿಕಾರವನ್ನು ನೀಡಲಾಗುತ್ತದೆ. ಇದು ಸೇನೆಗಳ ಅಂತರ-ಸೇವಾ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಅವರನ್ನು ಇತರೆ ಸೇವೆಗಳಿಗೆ ಹಾಕಿದಾಗ ಮಿಲಿಟರಿ ಸಂಸ್ಥೆಗಳ ಕಮಾಂಡ್-ಇನ್-ಚೀಫ್ ಅಥವಾ ಆಫೀಸರ್-ಇನ್-ಕಮಾಂಡ್ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಪಡೆಯುವುದಿಲ್ಲ. ಈ ನಿರ್ದಿಷ್ಟ ಉದ್ದೇಶಗಳಿಗಾಗಿ ರಚಿಸಲಾದ ಮಿಲಿಟರಿ ಸಂಸ್ಥೆಗಳ ಕಮಾಂಡರ್‌ಗಳು ಯಾವುದೇ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರಗಳನ್ನು ಹೊಂದಿರುವುದಿಲ್ಲ.

ಅಂತಹ ಪರಿಸ್ಥಿತಿಯಲ್ಲಿ, ಅಂತರ್-ಸೇವಾ ಸಂಸ್ಥೆಯಲ್ಲಿನ ಜವಾನರ ವಿರುದ್ಧ ಶಿಸ್ತು ಮತ್ತು ಆಡಳಿತಾತ್ಮಕ ಕ್ರಮಕ್ಕಾಗಿ, ಅವರನ್ನು ಅವರ ಮಾತೃ ಘಟಕಗಳಿಗೆ ಹಿಂತಿರುಗಿಸಬೇಕಾಗುತ್ತದೆ, ಆದರೆ ಈ ಸಮಸ್ಯೆಯನ್ನು ಹೊಸ ವಿಧೇಯಕದಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ.

ಈಗ, ಹೊಸ ಮಸೂದೆಯಿಂದಾಗಿ, ಇಂಟರ್ ಸರ್ವಿಸಸ್ ಆರ್ಗನೈಸೇಶನ್‌ನ ಕಮಾಂಡರ್‌ಗಳು ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ