AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Mar 16, 2023 | 11:53 AM

Share

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಜಂಟಿ ಸೇನಾ ಕಮಾಂಡರ್‌ಗಳಿಗೆ ಅಧಿಕಾರ ನೀಡುವ ಇಂಟರ್-ಸರ್ವೀಸಸ್ ಆರ್ಗನೈಸೇಶನ್ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ರಕ್ಷಣಾ ಸಚಿವಾಲಯವು ಲೋಕಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ್ದು ಮೂರು ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಮಾಂಡರ್‌ಗಳಿಗೆ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಒದಗಿಸುವುದು ಈ ವಿಧೇಯಕದ ಉದ್ದೇಶವಾಗಿದೆ.

ಅಂತರ-ಸೇವೆಗಳ ಸಂಸ್ಥೆಗಳ (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ, 2023 ರ ಪ್ರಕಾರ, ಕೇಂದ್ರ ಸರ್ಕಾರವು ಅಧಿಸೂಚನೆಯ ಮೂಲಕ ಅಂತರ-ಸೇವೆಗಳ ಸಂಸ್ಥೆಯನ್ನು ರಚಿಸಬಹುದು. ಈ ವಿಧೇಯಕವನ್ನು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದರು.

ಪ್ರಸ್ತಾಪಿತ ವಿಧೇಯಕವು ಮೂಲಭೂತವಾಗಿ ಅಂತರ್-ಸೇವೆಗಳ ಸಂಸ್ಥೆಗಳ ಮುಖ್ಯಸ್ಥರಿಗೆ ನಿಯಮಿತ ವಾಯುಪಡೆ, ಸೇನೆ ಮತ್ತು ನೌಕಾಪಡೆಯ ಎಲ್ಲಾ ಸಿಬ್ಬಂದಿಗಳ ಮೇಲೆ ಪರಿಣಾಮಕಾರಿ ಆಜ್ಞೆ, ನಿಯಂತ್ರಣ ಮತ್ತು ಶಿಸ್ತುಗಳನ್ನು ಚಲಾಯಿಸಲು ಅಧಿಕಾರ ನೀಡುತ್ತದೆ.

ಪ್ರಸ್ತುತ, ಭಾರತೀಯ ವಾಯುಪಡೆ, ಸೇನೆ ಮತ್ತು ನೌಕಾಪಡೆಗಳನ್ನು ಕ್ರಮವಾಗಿ ಏರ್ ಫೋರ್ಸ್ ಆಕ್ಟ್, 1950, ಆರ್ಮಿ ಆಕ್ಟ್ ಮತ್ತು ನೇವಿ ಆಕ್ಟ್, 1957 ರಿಂದ ನಿಯಂತ್ರಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಮೂರು ಸಶಸ್ತ್ರ ಪಡೆಗಳ ಅಧಿಕಾರಿಗಳಿಗೆ ಮಾತ್ರ ಶಿಸ್ತಿನ ಅಧಿಕಾರವನ್ನು ನೀಡಲಾಗುತ್ತದೆ. ಇದು ಸೇನೆಗಳ ಅಂತರ-ಸೇವಾ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಅವರನ್ನು ಇತರೆ ಸೇವೆಗಳಿಗೆ ಹಾಕಿದಾಗ ಮಿಲಿಟರಿ ಸಂಸ್ಥೆಗಳ ಕಮಾಂಡ್-ಇನ್-ಚೀಫ್ ಅಥವಾ ಆಫೀಸರ್-ಇನ್-ಕಮಾಂಡ್ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಪಡೆಯುವುದಿಲ್ಲ. ಈ ನಿರ್ದಿಷ್ಟ ಉದ್ದೇಶಗಳಿಗಾಗಿ ರಚಿಸಲಾದ ಮಿಲಿಟರಿ ಸಂಸ್ಥೆಗಳ ಕಮಾಂಡರ್‌ಗಳು ಯಾವುದೇ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರಗಳನ್ನು ಹೊಂದಿರುವುದಿಲ್ಲ.

ಅಂತಹ ಪರಿಸ್ಥಿತಿಯಲ್ಲಿ, ಅಂತರ್-ಸೇವಾ ಸಂಸ್ಥೆಯಲ್ಲಿನ ಜವಾನರ ವಿರುದ್ಧ ಶಿಸ್ತು ಮತ್ತು ಆಡಳಿತಾತ್ಮಕ ಕ್ರಮಕ್ಕಾಗಿ, ಅವರನ್ನು ಅವರ ಮಾತೃ ಘಟಕಗಳಿಗೆ ಹಿಂತಿರುಗಿಸಬೇಕಾಗುತ್ತದೆ, ಆದರೆ ಈ ಸಮಸ್ಯೆಯನ್ನು ಹೊಸ ವಿಧೇಯಕದಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ.

ಈಗ, ಹೊಸ ಮಸೂದೆಯಿಂದಾಗಿ, ಇಂಟರ್ ಸರ್ವಿಸಸ್ ಆರ್ಗನೈಸೇಶನ್‌ನ ಕಮಾಂಡರ್‌ಗಳು ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ