AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ

ಭಾರತೀಯ ಸೇನೆಯ 3 ಮುಖ್ಯಸ್ಥರ ಅಧಿಕಾರ ಹೆಚ್ಚಿಸುವ ವಿಧೇಯಕ ಲೋಕಸಭೆಯಲ್ಲಿ ಮಂಡನೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Mar 16, 2023 | 11:53 AM

Share

ಭಾರತೀಯ ಸೇನೆ(Indian Army)ಯ 3 ಮುಖ್ಯಸ್ಥರ  ಅಧಿಕಾರವನ್ನು ಮತ್ತಷ್ಟು ಭದ್ರಗೊಳಿಸುವ ವಿಧೇಯಕವನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಜಂಟಿ ಸೇನಾ ಕಮಾಂಡರ್‌ಗಳಿಗೆ ಅಧಿಕಾರ ನೀಡುವ ಇಂಟರ್-ಸರ್ವೀಸಸ್ ಆರ್ಗನೈಸೇಶನ್ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ರಕ್ಷಣಾ ಸಚಿವಾಲಯವು ಲೋಕಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ್ದು ಮೂರು ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಮಾಂಡರ್‌ಗಳಿಗೆ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಒದಗಿಸುವುದು ಈ ವಿಧೇಯಕದ ಉದ್ದೇಶವಾಗಿದೆ.

ಅಂತರ-ಸೇವೆಗಳ ಸಂಸ್ಥೆಗಳ (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ, 2023 ರ ಪ್ರಕಾರ, ಕೇಂದ್ರ ಸರ್ಕಾರವು ಅಧಿಸೂಚನೆಯ ಮೂಲಕ ಅಂತರ-ಸೇವೆಗಳ ಸಂಸ್ಥೆಯನ್ನು ರಚಿಸಬಹುದು. ಈ ವಿಧೇಯಕವನ್ನು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದರು.

ಪ್ರಸ್ತಾಪಿತ ವಿಧೇಯಕವು ಮೂಲಭೂತವಾಗಿ ಅಂತರ್-ಸೇವೆಗಳ ಸಂಸ್ಥೆಗಳ ಮುಖ್ಯಸ್ಥರಿಗೆ ನಿಯಮಿತ ವಾಯುಪಡೆ, ಸೇನೆ ಮತ್ತು ನೌಕಾಪಡೆಯ ಎಲ್ಲಾ ಸಿಬ್ಬಂದಿಗಳ ಮೇಲೆ ಪರಿಣಾಮಕಾರಿ ಆಜ್ಞೆ, ನಿಯಂತ್ರಣ ಮತ್ತು ಶಿಸ್ತುಗಳನ್ನು ಚಲಾಯಿಸಲು ಅಧಿಕಾರ ನೀಡುತ್ತದೆ.

ಪ್ರಸ್ತುತ, ಭಾರತೀಯ ವಾಯುಪಡೆ, ಸೇನೆ ಮತ್ತು ನೌಕಾಪಡೆಗಳನ್ನು ಕ್ರಮವಾಗಿ ಏರ್ ಫೋರ್ಸ್ ಆಕ್ಟ್, 1950, ಆರ್ಮಿ ಆಕ್ಟ್ ಮತ್ತು ನೇವಿ ಆಕ್ಟ್, 1957 ರಿಂದ ನಿಯಂತ್ರಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ಮೂರು ಸಶಸ್ತ್ರ ಪಡೆಗಳ ಅಧಿಕಾರಿಗಳಿಗೆ ಮಾತ್ರ ಶಿಸ್ತಿನ ಅಧಿಕಾರವನ್ನು ನೀಡಲಾಗುತ್ತದೆ. ಇದು ಸೇನೆಗಳ ಅಂತರ-ಸೇವಾ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಅವರನ್ನು ಇತರೆ ಸೇವೆಗಳಿಗೆ ಹಾಕಿದಾಗ ಮಿಲಿಟರಿ ಸಂಸ್ಥೆಗಳ ಕಮಾಂಡ್-ಇನ್-ಚೀಫ್ ಅಥವಾ ಆಫೀಸರ್-ಇನ್-ಕಮಾಂಡ್ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರವನ್ನು ಪಡೆಯುವುದಿಲ್ಲ. ಈ ನಿರ್ದಿಷ್ಟ ಉದ್ದೇಶಗಳಿಗಾಗಿ ರಚಿಸಲಾದ ಮಿಲಿಟರಿ ಸಂಸ್ಥೆಗಳ ಕಮಾಂಡರ್‌ಗಳು ಯಾವುದೇ ಶಿಸ್ತು ಮತ್ತು ಆಡಳಿತಾತ್ಮಕ ಅಧಿಕಾರಗಳನ್ನು ಹೊಂದಿರುವುದಿಲ್ಲ.

ಅಂತಹ ಪರಿಸ್ಥಿತಿಯಲ್ಲಿ, ಅಂತರ್-ಸೇವಾ ಸಂಸ್ಥೆಯಲ್ಲಿನ ಜವಾನರ ವಿರುದ್ಧ ಶಿಸ್ತು ಮತ್ತು ಆಡಳಿತಾತ್ಮಕ ಕ್ರಮಕ್ಕಾಗಿ, ಅವರನ್ನು ಅವರ ಮಾತೃ ಘಟಕಗಳಿಗೆ ಹಿಂತಿರುಗಿಸಬೇಕಾಗುತ್ತದೆ, ಆದರೆ ಈ ಸಮಸ್ಯೆಯನ್ನು ಹೊಸ ವಿಧೇಯಕದಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ.

ಈಗ, ಹೊಸ ಮಸೂದೆಯಿಂದಾಗಿ, ಇಂಟರ್ ಸರ್ವಿಸಸ್ ಆರ್ಗನೈಸೇಶನ್‌ನ ಕಮಾಂಡರ್‌ಗಳು ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ