AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗಳಿಗೆ ಬಡ್ಡಿ ಮನ್ನಾ ಹೊರೆ ಭರಿಸುವುದು ಅಸಾಧ್ಯ: ಸುಪ್ರೀಂಗೆ ವಿವರ ಸಲ್ಲಿಸಿದ ಕೇಂದ್ರ

ಸಾಲದ ಮೇಲಿನ ಕಂತಿನ ಪಾವತಿಗೆ ಮೊರಟೋರಿಯಂ ಹೇರಿದ್ದ ಆರು ತಿಂಗಳ ಅವಧಿಯ ಬಡ್ಡಿ ಮನ್ನಾ ಮಾಡುವುದರಿಂದ ಬ್ಯಾಂಕ್​ಗಳಿಗೆ ₹ 6 ಲಕ್ಷಕೋಟಿಗೂ ಹೆಚ್ಚು ನಷ್ಟವಾಗಲಿದೆ.

ಬ್ಯಾಂಕ್​ಗಳಿಗೆ ಬಡ್ಡಿ ಮನ್ನಾ ಹೊರೆ ಭರಿಸುವುದು ಅಸಾಧ್ಯ: ಸುಪ್ರೀಂಗೆ ವಿವರ ಸಲ್ಲಿಸಿದ ಕೇಂದ್ರ
ಸುಪ್ರೀಂಕೋರ್ಟ್​
Lakshmi Hegde
| Edited By: |

Updated on: Dec 09, 2020 | 5:45 PM

Share

ದೆಹಲಿ: ಆರ್​ಬಿಐ ಮೊರಟೋರಿಯಂ ಹೇರಿದ್ದ ಅವಧಿಯ ಬಡ್ಡಿ ಮನ್ನಾ ಸಾಧ್ಯವಿಲ್ಲ. ಹಾಗೆ ಎಲ್ಲ ಸಾಲಗಾರರ ಬಡ್ಡಿ ಮನ್ನಾ ಮಾಡುವುದು ರಾಷ್ಟ್ರೀಯ ಆರ್ಥಿಕ ಹಿತಾಸಕ್ತಿಗೆ ಮಾರಕ. ಇದರಿಂದ ಇಡೀ ಬ್ಯಾಂಕಿಂಗ್​ ವ್ಯವಸ್ಥೆ ಕುಸಿಯುವ ಸಾಧ್ಯತೆ ಇರುತ್ತದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್​ಗೆ ಹೇಳಿದೆ.

ಕೊವಿಡ್​-19ರ ಕಾರಣದಿಂದ ಸಾಲದ ಮೇಲಿನ ಕಂತಿನ ಪಾವತಿಯನ್ನು ಆರು ತಿಂಗಳ ಕಾಲ ಮುಂದೂಡಿ ಆರ್​ಬಿಐ ಮಾರ್ಚ್​​ನಲ್ಲಿ ಘೋಷಣೆ ಮಾಡಿತ್ತು. ಈ ಅವಧಿ ಸೆಪ್ಟೆಂಬರ್​ನಲ್ಲಿ ಮುಕ್ತಾಯವಾಗಿದೆ. ಆದರೆ ಆರ್​ಬಿಐ ಈ ಅವಧಿಯಲ್ಲಿ ಬಡ್ಡಿ ವಿನಾಯಿತಿಯನ್ನು ಕೊಟ್ಟಿರಲಿಲ್ಲ. ಅದರ ಜತೆಗೆ ಚಕ್ರಬಡ್ಡಿಯನ್ನೂ ಗ್ರಾಹಕರೇ ಭರಿಸುವುದು ಅನಿವಾರ್ಯ ಎಂದು ಹೇಳಿತ್ತು. ಈ ಸಂಬಂಧ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದು ಕೂಡ ಕೇಂದ್ರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ನ್ಯಾಯಮೂರ್ತಿಗಳಾದ ಅಶೋಕ್​ ಭೂಷಣ್​, ಆರ್. ಸುಭಾಷ್​ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ಪೀಠಕ್ಕೆ ಸಾಲಿಸಿಟರ್​ ಜನರಲ್​ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ಈ ವಿವರ ನೀಡಿದರು.

ಸಾಲದ ಮೇಲಿನ ಕಂತಿನ ಪಾವತಿಗೆ ಮೊರಟೋರಿಯಂ ಹೇರಿದ್ದ ಆರು ತಿಂಗಳ ಅವಧಿಯ ಬಡ್ಡಿ ಮನ್ನಾ ಮಾಡುವುದರಿಂದ ಬ್ಯಾಂಕ್​ಗಳಿಗೆ ₹ 6 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಲಿದೆ. ಈ ಮೊತ್ತವನ್ನು ಬ್ಯಾಂಕ್​ಗಳು ಭರಿಸಬೇಕು ಎಂದಾದರೆ ಖಂಡಿತವಾಗಿಯೂ ಅವುಗಳ ನಿವ್ವಳ ಮೌಲ್ಯದಲ್ಲಿ ಬಹುದೊಡ್ಡ ಭಾಗ ಖರ್ಚಾಗುತ್ತದೆ. ಇದರಿಂದ ಹಣಕಾಸು ಸಂಸ್ಥೆಗಳ ಉಳಿವಿನ ಬಗ್ಗೆಯೇ ಪ್ರಶ್ನೆ ಏಳುತ್ತದೆ. ಹಾಗಾಗಿ ಬಡ್ಡಿ ಮನ್ನಾ ನಿರೀಕ್ಷೆ ಮಾಡಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆರ್ಥಿಕ ಹೊರೆ ಒಟ್ಟಾರೆ ಬಡ್ಡಿ ಮನ್ನಾ ಮಾಡುವುದರಿಂದ ಬ್ಯಾಂಕ್​ಗಳ ಆರ್ಥಿಕ ಪರಿಸ್ಥಿತಿಯ ಮೇಲೆ ಬೀರುವ ಪ್ರತಿಕೂಲವನ್ನು ವಿವರಿಸಿದ ಕೇಂದ್ರ ಸರ್ಕಾರ, ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್​ ಬ್ಯಾಂಕ್​ ತನ್ನ ಸಾಲದ ಆರು ತಿಂಗಳ ಬಡ್ಡಿಯನ್ನು ಮನ್ನಾ ಮಾಡುವುದರಿಂದ ಅದರ ಅರ್ಧದಷ್ಟು ನಿವ್ವಳ ಮೌಲ್ಯ ಕಡಿಮೆ ಆಗುತ್ತದೆ ಎಂದು ವಿವರಿಸಿದೆ. ಅಷ್ಟೇ ಅಲ್ಲ, ಬ್ಯಾಂಕ್​ಗಳಿಗೆ ಚಕ್ರಬಡ್ಡಿ ಮನ್ನಾದ ಹೊರೆಯನ್ನೂ ಭರಿಸಲು ಸಾಧ್ಯವಿಲ್ಲ. ತನ್ನ ನಿವ್ವಳ ಮೌಲ್ಯಕ್ಕೆ ಪ್ರತಿಕೂಲ ಆಗದಂತೆ ನೋಡಿಕೊಂಡು, ಠೇವಣಿದಾರರಿಗೆ ಲಾಭ-ನಷ್ಟವನ್ನು ರವಾನಿಸುವುದು ಅನಿವಾರ್ಯವಾಗುತ್ತದೆ. ಹಾಗೊಮ್ಮೆ ಸರ್ಕಾರವೇ ಈ ಹೊರೆಯನ್ನು ಭರಿಸಿದರೆ, ಅದು ರಾಷ್ಟ್ರದ ಇತರ ಬದ್ಧತೆಗಳಾದ ಆರೋಗ್ಯ ವಲಯ, ಸಾಂಕ್ರಾಮಿಕ ನಿರ್ವಹಣೆ, ಸಾಮಾನ್ಯ ಜನರ ಮೂಲಭೂತ ಅಗತ್ಯಗಳ ಪೂರೈಕೆಗಳಂತಹ ವಿಚಾರದ ಮೇಲೆ ಸಹಜವಾಗಿಯೇ ಪರಿಣಾಮ ಬೀರುತ್ತದೆ ಎಂದು ಕೇಂದ್ರ ನ್ಯಾಯಾಲಯಕ್ಕೆ ಮನದಟ್ಟು ಮಾಡಿಕೊಟ್ಟಿತು.

ದುರ್ಬಲ ವರ್ಗಕ್ಕೆ ವಿನಾಯಿತಿ ಎಲ್ಲ ಸಾಲಗಾರರ ಆರು ತಿಂಗಳ ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡಲು ಸಾಧ್ಯವೇ ಇಲ್ಲ. ಹಾಗಾಗಿ ಅತ್ಯಂತ ದುರ್ಬಲ ವರ್ಗದ ಸಾಲಗಾರರ ಆರು ತಿಂಗಳ ಚಕ್ರಬಡ್ಡಿ ಮನ್ನಾದಲ್ಲಿ ಸ್ವಲ್ಪ ಮಟ್ಟಿನ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಅದರಲ್ಲೂ ₹ 2 ಕೋಟಿ ವರೆಗಿನ MSME (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ) ಹಾಗೂ ವೈಯಕ್ತಿಕ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!