AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಂದ ನಿರಂತರ ಕಿರುಕುಳ, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಿರುಕುಳದಿಂದ ಬೇಸತ್ತು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 12 ನೇ ತರಗತಿಯ ಬಾಲಕಿ ಮನೆಯಿಂದ ಶಾಲೆಯ ಹೋಗುವ ಮಾರ್ಗದಲ್ಲಿ ಇಬ್ಬರು ವ್ಯಕ್ತಿಗಳಿಂದ ಪದೇ ಪದೇ ಕಿರುಕುಳಕ್ಕೊಳಗಾಗಿದ್ದಳು. ಬಾಲಕಿ ಘಟನೆಯ ಬಗ್ಗೆ ತನ್ನ ಪೋಷಕರ ಬಳಿಯೂ ಈ ಬಗ್ಗೆ ಹೇಳಿಕೊಂಡಿದ್ದಳು. ಆದರೆ ಪೊಲೀಸ್ ದೂರು ದಾಖಲಿಸಲು ಹಿಂಜರಿದಿದ್ದಳು. ಆಕೆಯ ತಂದೆ ಪೊಲೀಸರ ಬಳಿಗೆ ಹೋಗುವ ಬದಲು ಆರೋಪಿಗಳ ಕುಟುಂಬದವರಿಗೆ ಈ ವಿಷಯ ಮುಟ್ಟಿಸಿದ್ದರು. ಆದರೆ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗಿತ್ತು.

ಇಬ್ಬರಿಂದ ನಿರಂತರ ಕಿರುಕುಳ, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಸಾವುImage Credit source: Shutterstock
ನಯನಾ ರಾಜೀವ್
|

Updated on: Apr 28, 2025 | 2:34 PM

Share

ಉತ್ತರ ಪ್ರದೇಶ, ಏಪ್ರಿಲ್ 28: ಇಬ್ಬರಿಂದ ನಿರಂತರವಾಗಿ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಔರಿಯಾದಲ್ಲಿ ನಡೆದಿದೆ. 12 ನೇ ತರಗತಿಯ ಬಾಲಕಿ ಮನೆಯಿಂದ ಶಾಲೆಯ ಹೋಗುವ ಮಾರ್ಗದಲ್ಲಿ ಇಬ್ಬರು ವ್ಯಕ್ತಿಗಳಿಂದ ಪದೇ ಪದೇ ಕಿರುಕುಳಕ್ಕೊಳಗಾಗಿದ್ದಳು. ಬಾಲಕಿ ಘಟನೆಯ ಬಗ್ಗೆ ತನ್ನ ಪೋಷಕರ ಬಳಿಯೂ ಈ ಬಗ್ಗೆ ಹೇಳಿಕೊಂಡಿದ್ದಳು. ಆದರೆ ಪೊಲೀಸ್ ದೂರು ದಾಖಲಿಸಲು ಹಿಂಜರಿದಿದ್ದಳು.

ಆಕೆಯ ತಂದೆ ಪೊಲೀಸರ ಬಳಿಗೆ ಹೋಗುವ ಬದಲು ಆರೋಪಿಗಳ ಕುಟುಂಬದವರಿಗೆ ಈ ವಿಷಯ ಮುಟ್ಟಿಸಿದ್ದರು. ಆದರೆ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗಿತ್ತು. ಏಪ್ರಿಲ್ 19 ರಂದು, ಅಖಿಲೇಶ್ ಮತ್ತು ರಾಮ್ ಎಂದು ಗುರುತಿಸಲಾದ ಆರೋಪಿಗಳು ಬೈಕ್​ನಲ್ಲಿ ಬಂದು ವಿದ್ಯಾರ್ಥಿನಿಯನ್ನು ಮತ್ತೆ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅವರು ಫೋನ್ ಮೂಲಕ ಆಕೆಯನ್ನು ಬೆದರಿಸುವುದನ್ನು ಮುಂದುವರೆಸಿದರು ಮತ್ತು ಆಕೆಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದರು. ನಿರಂತರ ಬೆದರಿಕೆಗಳಿಂದ ನೊಂದ ವಿದ್ಯಾರ್ಥಿನಿ ಪರೀಕ್ಷೆ ಮುಗಿದ ನಂತರ ಮನೆಯಲ್ಲಿಯೇ ಇದ್ದಳು.

ಏಪ್ರಿಲ್ 24 ರ ರಾತ್ರಿ ಅವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ತಂದೆ ಅವಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ, ಆದರೆ ಅಷ್ಟರಲ್ಲಾಗಲೇ ಆಕೆ ಉಸಿರು ಚೆಲ್ಲಿದ್ದಳು.

ಮತ್ತಷ್ಟು ಓದಿ:ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಪೊಲೀಸ್ ಬಲೆಗೆ

ಎರಡು ದಿನಗಳ ನಂತರ, ಏಪ್ರಿಲ್ 26 ರಂದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ಹೇಳಿಕೆಯ ಆಧಾರದ ಮೇಲೆ, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ. ಮಧ್ಯಂತರ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಒಂದು ದಿನ ಮೊದಲು ಈ ಕಠಿಣ ಹೆಜ್ಜೆ ಇಟ್ಟಿದ್ದ ಬಾಲಕಿ 500 ರಲ್ಲಿ 348 ಅಂಕಗಳನ್ನು ಪಡೆಯುವ ಮೂಲಕ ಫಸ್ಟ್​ಕ್ಲಾಸ್​ನಲ್ಲಿ ಪಾಸಾಗಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗು ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ