AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ

ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ 2021ರ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತು.

ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 29, 2021 | 1:27 PM

Share

ಅಂತಾರಾಷ್ಟ್ರೀಯ ವಿಮಾನ (International flight)ಗಳ ಹಾರಾಟದ ಮೇಲಿನ ನಿರ್ಬಂಧವನ್ನು ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಅದರ ಅನ್ವಯ, ಸೆಪ್ಟೆಂಬರ್​ 30ರವರೆಗೆ ಭಾರತದಿಂದ ಯಾವುದೇ ವಿಮಾನಗಳೂ ಬೇರೆ ರಾಷ್ಟ್ರಗಳಿಗೆ ಹಾರಾಟ ಮಾಡುವುದಿಲ್ಲ..ಹಾಗೇ, ಬೇರೆ ದೇಶಗಳ ವಿಮಾನಕ್ಕೂ ಭಾರತಕ್ಕೆ ಪ್ರವೇಶ ಇರುವುದಿಲ್ಲ. ಕೆಲವು ವಿಶೇಷ ವಿಮಾನಗಳನ್ನು ಹೊರತುಪಡಿಸಿದರೆ, ಉಳಿದಂತೆ ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ, ಪ್ರಯಾಣಿಕರ ವಿಮಾನಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ 2021ರ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತು. ಆದರೆ ಕೊವಿಡ್​ 19 (Covid 19) ಪರಿಸ್ಥಿತಿ ಇನ್ನೂ ಹಾಗೇ ಇರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಸುತ್ತೋಲೆ ಹೊರಡಿಸಿದೆ. ಅಂತಾರಾಷ್ಟ್ರೀಯ ಸರಕು ವಿಮಾನಗಳು ಮತ್ತು ಡಿಜಿಸಿಎಯಿಂದ ಅನುಮೋದನೆ ಪಡೆದ ವಿಶೇಷ ವಿಮಾನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೂ ಸೆಪ್ಟೆಂಬರ್​ 30ರವರೆಗೆ ನಿರ್ಬಂಧ ಇರುತ್ತದೆ ಎಂದು ಹೇಳಲಾಗಿದೆ.

ಭಾರತವು ಯುಎಸ್​, ಯುಕೆ, ಯುಎಇ, ಮಾಲ್ಡೀವ್ಸ್​, ನೆದರ್​ಲ್ಯಾಂಡ್​, ಫ್ರಾನ್ಸ್​, ಜರ್ಮನಿ, ಕತಾರ್​​, ಭೂತಾನ್​ ಸೇರಿ 28 ದೇಶಗಳೊಂದಿಗೆ ಏರ್​ ಬಬಲ್​ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಕೊವಿಡ್​ 19 ಸಂದರ್ಭದಲ್ಲೂ ಈ ದೇಶಗಳ ಮಧ್ಯೆ ವಿಶೇಷ ವಿಮಾನ ಸಂಚಾರ ನಡೆಯಲಿದೆ. ಈ ವಿಶೇಷ ವಿಮಾನಗಳ ಮೂಲಕ ಪ್ರಯಾಣಿಕರನ್ನು ಸಾಗಿಸಲಾಗುತ್ತಿದೆ.

ಇದನ್ನೂ ಓದಿ: ಶಾರುಖ್​ ಸ್ಟಾರ್​ ಆಗಲು ಕಾರಣವೇ ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ; ಇಲ್ಲಿದೆ ಪೂರ್ತಿ ಚರಿತ್ರೆ

ತ್ರಿವಳಿ ತಲಾಖ್​ ಮೂಲಕ ವಿಚ್ಛೇದನ ಕೊಟ್ಟು, ಪತ್ನಿಯ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಪತಿ

Published On - 1:12 pm, Sun, 29 August 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’