AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ

ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ 2021ರ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತು.

ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Aug 29, 2021 | 1:27 PM

Share

ಅಂತಾರಾಷ್ಟ್ರೀಯ ವಿಮಾನ (International flight)ಗಳ ಹಾರಾಟದ ಮೇಲಿನ ನಿರ್ಬಂಧವನ್ನು ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಅದರ ಅನ್ವಯ, ಸೆಪ್ಟೆಂಬರ್​ 30ರವರೆಗೆ ಭಾರತದಿಂದ ಯಾವುದೇ ವಿಮಾನಗಳೂ ಬೇರೆ ರಾಷ್ಟ್ರಗಳಿಗೆ ಹಾರಾಟ ಮಾಡುವುದಿಲ್ಲ..ಹಾಗೇ, ಬೇರೆ ದೇಶಗಳ ವಿಮಾನಕ್ಕೂ ಭಾರತಕ್ಕೆ ಪ್ರವೇಶ ಇರುವುದಿಲ್ಲ. ಕೆಲವು ವಿಶೇಷ ವಿಮಾನಗಳನ್ನು ಹೊರತುಪಡಿಸಿದರೆ, ಉಳಿದಂತೆ ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ, ಪ್ರಯಾಣಿಕರ ವಿಮಾನಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ 2021ರ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತು. ಆದರೆ ಕೊವಿಡ್​ 19 (Covid 19) ಪರಿಸ್ಥಿತಿ ಇನ್ನೂ ಹಾಗೇ ಇರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (DGCA) ಸುತ್ತೋಲೆ ಹೊರಡಿಸಿದೆ. ಅಂತಾರಾಷ್ಟ್ರೀಯ ಸರಕು ವಿಮಾನಗಳು ಮತ್ತು ಡಿಜಿಸಿಎಯಿಂದ ಅನುಮೋದನೆ ಪಡೆದ ವಿಶೇಷ ವಿಮಾನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೂ ಸೆಪ್ಟೆಂಬರ್​ 30ರವರೆಗೆ ನಿರ್ಬಂಧ ಇರುತ್ತದೆ ಎಂದು ಹೇಳಲಾಗಿದೆ.

ಭಾರತವು ಯುಎಸ್​, ಯುಕೆ, ಯುಎಇ, ಮಾಲ್ಡೀವ್ಸ್​, ನೆದರ್​ಲ್ಯಾಂಡ್​, ಫ್ರಾನ್ಸ್​, ಜರ್ಮನಿ, ಕತಾರ್​​, ಭೂತಾನ್​ ಸೇರಿ 28 ದೇಶಗಳೊಂದಿಗೆ ಏರ್​ ಬಬಲ್​ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಕೊವಿಡ್​ 19 ಸಂದರ್ಭದಲ್ಲೂ ಈ ದೇಶಗಳ ಮಧ್ಯೆ ವಿಶೇಷ ವಿಮಾನ ಸಂಚಾರ ನಡೆಯಲಿದೆ. ಈ ವಿಶೇಷ ವಿಮಾನಗಳ ಮೂಲಕ ಪ್ರಯಾಣಿಕರನ್ನು ಸಾಗಿಸಲಾಗುತ್ತಿದೆ.

ಇದನ್ನೂ ಓದಿ: ಶಾರುಖ್​ ಸ್ಟಾರ್​ ಆಗಲು ಕಾರಣವೇ ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ; ಇಲ್ಲಿದೆ ಪೂರ್ತಿ ಚರಿತ್ರೆ

ತ್ರಿವಳಿ ತಲಾಖ್​ ಮೂಲಕ ವಿಚ್ಛೇದನ ಕೊಟ್ಟು, ಪತ್ನಿಯ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ ಪತಿ

Published On - 1:12 pm, Sun, 29 August 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು