AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ದಿನದಂತೆ ‘ವಿಶ್ವ ಪುರುಷ ದಿನ’ವನ್ನೂ ಆಚರಿಸಬೇಕು: ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್

ವಿಶ್ವ ಮಹಿಳಾ ದಿನದಂತೆ (International Women‘s Day), ವಿಶ್ವ ಪುರುಷ ದಿನಾಚರಣೆಯನ್ನು ಕೂಡ (International Men‘s Day) ಆಚರಿಸಬೇಕು ಎಂದು ಸೋನಲ್ ಮಾನ್​ಸಿಂಗ್ ಆಶಯ ವ್ಯಕ್ತಪಡಿಸಿದ್ದಾರೆ.

ಮಹಿಳಾ ದಿನದಂತೆ ‘ವಿಶ್ವ ಪುರುಷ ದಿನ’ವನ್ನೂ ಆಚರಿಸಬೇಕು: ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್
ಬಿಜೆಪಿ ನಾಯಕಿ ಸೋನಲ್ ಮಾನ್​ಸಿಂಗ್
TV9 Web
| Updated By: ganapathi bhat|

Updated on:Apr 06, 2022 | 7:22 PM

Share

ದೆಹಲಿ: ಮಹಿಳಾ ದಿನಾಚರಣೆಯು (International Women’s Day) ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕೊಡುಗೆಗಳನ್ನು ಮತ್ತು ಸಾಧನೆಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲು, ಸಂಭ್ರಮಿಸಲು ಮತ್ತು ಗೌರವಿಸಲು ಇರುವ ದಿನವಾಗಿದೆ. ಸ್ತ್ರೀಯರ ದೃಢತೆ ಮತ್ತು ಪರಿಶ್ರಮ ಮುಖ್ಯವಾಗಿದೆ ಎಂದು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ತಿಳಿಸಿದರು. ವಿಶ್ವ ಮಹಿಳಾ ದಿನದ ಅಂಗವಾಗಿ ಅವರು ಶುಭಹಾರೈಸಿದರು.

ಬಜೆಟ್ ಅಧಿವೇಶನದ ಎರಡನೇ ಸೆಷನ್ ಇಂದಿನಿಂದ (ಮಾರ್ಚ್ 8) ಆರಂಭವಾಗಿದೆ. ಕರ್ನಾಟಕದ ರಾಜಕೀಯ ಧುರೀಣ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ. ಅಧಿವೇಷನದಲ್ಲಿ ಮಹಿಳಾ ದಿನದ ಅಂಗವಾಗಿ ಹಲವು ಸದಸ್ಯರು ಮಾತನಾಡಿದ್ದಾರೆ.

ಬಿಜೆಪಿ ನಾಯಕಿ, ಲೋಕಸಭಾ ಸದಸ್ಯೆ ಸೋನಲ್ ಮಾನ್​ಸಿಂಗ್ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ವಿಶ್ವ ಮಹಿಳಾ ದಿನದಂತೆ (International Women‘s Day), ವಿಶ್ವ ಪುರುಷ ದಿನಾಚರಣೆಯನ್ನು ಕೂಡ (International Men‘s Day) ಆಚರಿಸಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಅಂಕಿ ಅಂಶಗಳು ತೋರಿಸುವಂತೆ ಶೇ. 6ಕ್ಕಿಂತ ಹೆಚ್ಚು ಮಹಿಳೆಯರಿಗೆ ನಾಯಕತ್ವ ಲಭಿಸಿಲ್ಲ. ನಾವು ಈ ಬಗ್ಗೆ ಯೋಚಿಸಬೇಕು. ರಾಜ್ಯಸಭೆ ಮತ್ತು ಲೋಕಸಭೆಯ ಶೇ. 33 ಮಹಿಳಾ ಮೀಸಲಾತಿಯನ್ನು ಬಳಸಿಕೊಳ್ಳುವ ಮೂಲಕ ಈ ಬದಲಾವಣೆಗೆ ನಾಂದಿ ಹಾಡಬೇಕು ಎಂದು ಎನ್​ಸಿಪಿ ಸದಸ್ಯೆ ಡಾ. ಫೌಜಿಯಾ ಖಾನ್ ಹೇಳಿದ್ದಾರೆ. 24 ವರ್ಷಗಳ ಹಿಂದೆ ನಾವು ಸಂಸತ್ತಿನಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿಗಾಗಿ ಬೇಡಿಕೆ ಇಟ್ಟೆವು. ಇಂದು 24 ವರ್ಷಗಳ ಬಳಿಕ ಈ ಮೀಸಲಾತಿ ಪ್ರಮಾಣವನ್ನು ಶೇ. 50ಕ್ಕೆ ಏರಿಕೆ ಮಾಡಬೇಕು ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ.

ರೈತ ಚಳುವಳಿಯಲ್ಲಿ ಮಹಿಳಾ ಪ್ರಾಬಲ್ಯ ಕೇಂದ್ರದ ನೂತನ ಕೃಷಿ ಕಾಯ್ದೆ ತಿದ್ದುಪಡಿಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯು ನೂರು ದಿನಗಳ ಗಡಿ ದಾಟಿದೆ. ಮಹಿಳಾ ದಿನವಾದ ಇಂದು ರೈತ ಚಳುವಳಿಯಲ್ಲಿ ರೈತ ಮಹಿಳೆಯರು ಕೂಡ ಪಾಲ್ಗೊಂಡಿದ್ದಾರೆ. ಪಂಜಾಬ್​ನ ರೈತ ಮಹಿಳೆಯರು ದೆಹಲಿ ಹರ್ಯಾಣ ಗಡಿ ಪ್ರದೇಶವಾದ ಟಿಕ್ರಿಗೆ ತಲುಪಿದ್ದಾರೆ. ಕೇಂದ್ರ ಸರ್ಕಾರ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ವಿವಿಧೆಡೆ ಮಹಿಳಾ ದಿನಾಚರಣೆ ವಿಶ್ವ ಮಹಿಳಾ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಜಕೀಯ ನಾಯಕರು, ಸಿನಿಮಾ ಸೆಲೆಬ್ರಿಟಿಗಳು ಮಹಿಳಾ ದಿನದ ಶುಭಾಶಯ ಹೇಳಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳಾ ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭೋಪಾಲ್​ನ ನೆಹರೂ ನಗರದಲ್ಲಿ ಮಾತನಾಡಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಕಿರೆಣ್ ರಿಜಿಜು ಮಹಿಳಾ ದಿನದ ಅಂಗವಾಗಿ ದೆಹಲಿಯಲ್ಲಿ ವಾಕಥಾನ್​ಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವ ಮಹಿಳಾ ದಿನಾಚರಣೆ: ಟ್ವಿಟರ್​ನಲ್ಲಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ 

ಮಹಿಳಾ ದಿನಾಚರಣೆ 2021: ಬೆಳಕು ಹರಿಯದ ಮುಂಜಾನೆಯಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ಆಸರೆಯಾದ ಆಟೋ ಚಾಲಕಿ

Published On - 10:55 am, Mon, 8 March 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!