AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಇಂಟರ್‌ನೆಟ್ ನಿರ್ಬಂಧ ತೆರವು: ಸಿಎಂ ಬಿರೇನ್ ಸಿಂಗ್

Manipur violence: ಮಣಿಪುರ ಹಿಂಸಾಚಾರದಿಂದ ಅಲ್ಲಿನ ಇಂಟರ್ನೆಟ್​​​ ವ್ಯವಸ್ಥೆಯನ್ನು ನಿರ್ಬಂಧ ಮಾಡಲಾಗಿತ್ತು. ಇದೀಗ ರಾಜ್ಯ ಯಥಾಸ್ಥಿತಿಗೆ ಬಂದ ಕಾರಣ ಈ ನಿರ್ಬಂಧವನ್ನು ತೆರವು ಮಾಡಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂದು (ಸೆ.23) ಹೇಳಿದ್ದಾರೆ.

ಮಣಿಪುರದಲ್ಲಿ ಇಂಟರ್‌ನೆಟ್ ನಿರ್ಬಂಧ ತೆರವು: ಸಿಎಂ ಬಿರೇನ್ ಸಿಂಗ್
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Sep 23, 2023 | 12:40 PM

Share

ಇಂಫಾಲ್, ಸೆ.23: ಮಣಿಪುರ ಹಿಂಸಾಚಾರದಿಂದ (Manipur violence) ಅಲ್ಲಿನ ಇಂಟರ್ನೆಟ್​​​ ವ್ಯವಸ್ಥೆಯನ್ನು ನಿರ್ಬಂಧ ಮಾಡಲಾಗಿತ್ತು. ಇದೀಗ ರಾಜ್ಯ ಯಥಾಸ್ಥಿತಿಗೆ ಬಂದ ಕಾರಣ ಈ ನಿರ್ಬಂಧವನ್ನು ತೆರವು ಮಾಡಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (biren singh) ಅವರು ಇಂದು (ಸೆ.23) ಹೇಳಿದ್ದಾರೆ. ಮೇ 3ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದು, ನಂತರ ಅದು ವಿಕೋಪಕ್ಕೆ ಹೋಗಿ ಹಲವು ಅಹಿತಕರ ಘಟನೆಗಳು ನಡೆದು ಇಡೀ ರಾಜ್ಯವೇ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲಿನ ಅನೇಕರು ಮನೆ-ಪ್ರಾಣ ಎಲ್ಲವನ್ನು ಕಳೆದುಕೊಂಡಿದ್ದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಮಣಿಪುರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಮತ್ತೆ ಹಿಂಸಾಚಾರಕ್ಕೆ ಕಾರಣವಾಗುತ್ತಿತ್ತು. ಈ ಪುಕಾರುಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇಂಟರ್ನೆಟ್​​​ ವ್ಯವಸ್ಥೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಮಣಿಪುರ ಯಥಾಸ್ಥಿತಿಗೆ ಬಂದ ಕಾರಣ ಈ ಕ್ರಮವನ್ನು ತೆರವುಗೊಳಿಸಲಾಗಿದೆ.

ಸೆ.22ರಿಂದ 15 ದಿನಗಳೊಳಗೆ ತಮ್ಮಲ್ಲಿರುವ ಅಕ್ರಮ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸುವಂತೆ ಸೂಚನೆ ನೀಡಿದ ನಂತರ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ. ಶುಕ್ರವಾರದಂದು (ಸೆ.22) ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಲಾಗಿತ್ತು, ಯಾರೆಲ್ಲ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರ ಅವರು ತಕ್ಷಣ ಅದನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಈಗಾಗಲೇ ಯಾರೆಲ್ಲ ಅಕ್ರಮ ಶಸ್ತ್ರಾಸ್ತ್ರ ಹೊಂದಿದರೆ ಎಂಬುದನ್ನು ಗುರುತಿಸಲಾಗಿದೆ.

ಒಂದು ವೇಳೆ ಸರ್ಕಾರ ತಿಳಿಸಿದ 15 ದಿನಗಳೊಳಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸದಿದ್ದರೆ. ಕೇಂದ್ರ ಮತ್ತು ರಾಜ್ಯದ ಎರಡೂ ಭದ್ರತಾ ಪಡೆಗಳು ರಾಜ್ಯದಾದ್ಯಂತ ಕಾರ್ಯಚರಣೆ ನಡೆಸಲಾಗುವುದು. ಜತೆಗೆ ಕಾನೂನು ಪ್ರಕಾರ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಹೇಳಿದೆ. ಈ ಶಸ್ತ್ರಾಸ್ತ್ರ ಹಿಡಿದುಕೊಂಡು ಅನೇಕ ದುಷ್ಕರ್ಮಿಗಳು/ಗುಂಪುಗಳು ಜನರ ಮೇಲೆ ದಾಳಿ ಮಾಡುತ್ತಿದೆ. ರಾಜ್ಯದಲ್ಲಿ ಇದರಿಂದ ಸುಲಿಗೆ, ಬೆದರಿಕೆ ಮತ್ತು ಅಪಹರಣಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಘಟನೆಗಳು ಕಂಡು ಬಂದರೆ ಖಂಡಿತ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಇಲ್ಲಿಯವರೆಗೆ ಈ ಹಿಂಸಾಚಾರಕ್ಕೆ 175 ಜನರು ಬಲಿಯಾಗಿದ್ದು, 1,100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇನ್ನು ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಈ ನಾಲ್ಕು ತಿಂಗಳ ಹಿಂಸಾಚಾರದ ಸಂದರ್ಭದಲ್ಲಿ 4,786 ಮನೆಗಳು ಮತ್ತು 386 ಧಾರ್ಮಿಕ ಸ್ಥಳಗಳನ್ನು ಸುಟ್ಟು ಧ್ವಂಸಗೊಳಿಸಲಾಗಿದೆ, ಇದರಿಂದ 5,172 ಅಗ್ನಿಸ್ಪರ್ಶ ಪ್ರಕರಣಗಳಿವೆ. ರಾಜ್ಯಾದ್ಯಂತ ಒಟ್ಟು 5,668 ಶಸ್ತ್ರಾಸ್ತ್ರಗಳು ಕಳೆದು ಹೋಗಿವೆ. ಇಲ್ಲಿಯವರೆಗೆ ಭದ್ರತಾ ಪಡೆಗಳು 1,329 ಶಸ್ತ್ರಾಸ್ತ್ರಗಳನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ