AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಏರ್ ಇಂಡಿಯಾದ ಕಾಕ್‌ಪಿಟ್‌ ಒಳಗೆ ತನ್ನ ಸ್ನೇಹಿತೆಗೆ ಅವಕಾಶ ನೀಡಿದ ಪೈಲಟ್​​ ವಿರುದ್ಧ ತನಿಖೆಗೆ ಆದೇಶ

ಏರ್ ಇಂಡಿಯಾ ಪೈಲಟ್ ತನ್ನ ಸ್ನೇಹಿತರೊಬ್ಬರಿಗೆ ಕಾಕ್‌ಪಿಟ್‌ಗೆ ಪ್ರವೇಶಿಸಲು ಮತ್ತು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿ ಅವಕಾಶ ನೀಡಿದ ಘಟನೆಯ ಕುರಿತು ಭಾರತದ ವಾಯುಯಾನ ನಿಯಂತ್ರಕರು ವಿವರವಾದ ತನಿಖೆಗೆ ಆದೇಶಿಸಿದ್ದಾರೆ.

Air India: ಏರ್ ಇಂಡಿಯಾದ ಕಾಕ್‌ಪಿಟ್‌ ಒಳಗೆ ತನ್ನ ಸ್ನೇಹಿತೆಗೆ ಅವಕಾಶ ನೀಡಿದ ಪೈಲಟ್​​ ವಿರುದ್ಧ ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 21, 2023 | 1:08 PM

Share

ದೆಹಲಿ: ಫೆಬ್ರವರಿಯಲ್ಲಿ ದುಬೈನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದಾಗ ಏರ್ ಇಂಡಿಯಾ (Air India) ಪೈಲಟ್ ತನ್ನ ಸ್ನೇಹಿತರೊಬ್ಬರಿಗೆ ಕಾಕ್‌ಪಿಟ್‌ಗೆ ಪ್ರವೇಶಿಸಲು ಮತ್ತು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿ ಅವಕಾಶ ನೀಡಿದ ಘಟನೆಯ ಕುರಿತು ಭಾರತದ ವಾಯುಯಾನ ನಿಯಂತ್ರಕರು ವಿವರವಾದ ತನಿಖೆಗೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಶುಕ್ರವಾರ ವರದಿ ಮಾಡಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ ಮತ್ತು ಇದಕ್ಕೆ ಸಂಬಂಧಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ವಿಮಾನ ನಿಯಮದ ಪ್ರಕಾರ ವಾಯುಯಾನ ನಿಯಂತ್ರಕ ಡಿಜಿಸಿಎ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಹಿರಿಯ ಡಿಜಿಸಿಎ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಫೆಬ್ರವರಿ 27ರಂದು ದುಬೈನಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪೈಲಟ್​​ ಒಬ್ಬರ ಸ್ನೇಹಿತನನ್ನು ಕಾಕ್‌ಪಿಟ್‌ ಒಳಗೆ ಬರಲು ಅವಕಾಶ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೈಲಟ್​​ ಅವಕಾಶ ನೀಡಿ ವ್ಯಕ್ತಿ ವಿಮಾನ ಲ್ಯಾಂಡಿಂಗ್ ಆಗುವರೆಗೆ ಅಲ್ಲಿ ಇದ್ದರು ಎಂದು ಹೇಳಲಾಗಿದೆ. ಅಧಿಕೃತ ಮಾಹಿತಿಗಳ ಪ್ರಕಾರ ಸುಮಾರು ಮೂರು ಗಂಟೆಗಳ ಕಾಲ ಕಾಕ್‌ಪಿಟ್‌ನಲ್ಲಿ ಸಮಯ ಕಳೆದಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:Air India Flight : ಏರ್ ಇಂಡಿಯಾ ಪೈಲಟ್‌, ಕ್ಯಾಬಿನ್ ಸಿಬ್ಬಂದಿಗಳ ವೇತನ ಹೆಚ್ಚಳ

ಇದು ಭದ್ರತೆಯ ಉಲ್ಲಂಘನೆ ಮಾತ್ರವಲ್ಲ, ವಿಮಾನ ಮತ್ತು ಅದರ ಪ್ರಯಾಣಿಕರ ಸುರಕ್ಷತೆ ಪ್ರಶ್ನೆಯು ಕೂಡ ಹೌದು ಎಂದು ಅಧಿಕಾರಿ ಹೇಳಿದ್ದಾರೆ. ತನಿಖೆಯ ಆಧಾರದ ಮೇಲೆ ಪೈಲಟ್​​ನ ಪರವಾನಗಿಯನ್ನು ಅಮಾನತುಗೊಳಿಸುವುದು ಅಥವಾ ರದ್ದುಗೊಳಿಸುವುದು ಸೇರಿದಂತೆ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆ ಕುರಿತು ಏರ್ ಇಂಡಿಯಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏರ್ ಇಂಡಿಯಾ ವಿಮಾನದಲ್ಲಿ ಇತ್ತೀಚೆಗೆ, ಅನೇಕ ಇಂತಹ ಘಟನೆಗಳು ನಡೆದಿದೆ. ಏಪ್ರಿಲ್ 18 ರಂದು, ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ವಿಂಡ್ ಶೀಲ್ಡ್ ಬಿರುಕು ಬಿಟ್ಟಿದೆ ಎಂದು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದ್ಯತೆಯ ಮೇರೆಗೆ ಲ್ಯಾಂಡಿಂಗ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದಲ್ಲಿ ಇಂತಹ ಅನೇಕ ಘಟನೆಗಳ ಬಗ್ಗೆ ವರದಿಯಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 21 April 23

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?