PM Modi Oath Ceremony: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ

ಶನಿವಾರದಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಈ ಪ್ರಮಾಣ ವಚನ ಸಮಾರಂಭದಲ್ಲಿ ಅನೇಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಇದರಲ್ಲೂ ವಿಶ್ವದ ಬೇರೆ ಬೇರೆ ನಾಯಕರಿಗೆ ಆಹ್ವಾನ ನೀಡಲಾಗಿದೆ. ಯಾರಿಗೆಲ್ಲ ಆಹ್ವಾನ ನೀಡಲಾಗಿದೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

PM Modi Oath Ceremony: ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ, ಈ ಇಬ್ಬರು ಬರುವುದು ಪಕ್ಕಾ
Follow us
|

Updated on:Jun 06, 2024 | 12:19 PM

ದೆಹಲಿ, ಜೂ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುದ್ಧವಾರದಂದು (ಜೂ5) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದಾರೆ. ಇದರ ಜತೆಗೆ ಎನ್​​ಡಿಎ ಸಭೆಯನ್ನು ನಡೆಸಿ ಎನ್​​ಡಿಎ ನಾಯಕರ ಸರ್ವಾನುಮತದ ಮೂಲಕ ಎನ್​​ಡಿಎ ನಾಯಕನಾಗಿ ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್​​ ಕರೆ ಮೂಲಕ ತಿಳಿಸಿದ್ದಾರೆ. ಹಾಗೂ ಪ್ರಧಾನಿ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಇನ್ನು ಕಾರ್ಯಕ್ರಮಕ್ಕೂ ಮುನ್ನ ಅಂದರೆ ಜೂ. 7ಕ್ಕೆ ಭಾರತಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನು ಅವರು ದೃಢಪಡಿಸಿಲ್ಲ.

ಇದನ್ನೂ ಓದಿ:  ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಮುಂದೂಡಿಕೆ

ಬಿಜೆಪಿ ಈಗಾಗಲೇ 240 ಸ್ಥಾನಗಳನ್ನು ಪಡೆದುಕೊಂಡಿದೆ. ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಎನ್​ಡಿಎ ಮೈತ್ರಿಕೂಟ ಮ್ಯಾಜಿಕ್ ಸಂಖ್ಯೆಯನ್ನು ಆರಾಮವಾಗಿ ದಾಟಿದೆ. ಈಗಾಗಲೇ ಎನ್​​​ಡಿಎ ಲೋಕಸಭೆಯ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ ಎನ್‌ಡಿಎ ಪಾಲುದಾರರು ಜತೆಗೆ ನೆನ್ನೆ ಪ್ರಧಾನಿ ಮೋದಿ ಸಭೆಯನ್ನು ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Thu, 6 June 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?