AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ

ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 25, 2022 | 7:58 PM

Share

ಭೋಪಾಲ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್​​ನಲ್ಲಿ(Betting) ಮಧ್ಯಪ್ರದೇಶದ (Madhya Pradesh) ಪೋಸ್ಟ್ ಮಾಸ್ಟರ್ ಒಬ್ಬರು ₹1 ಕೋಟಿ ಕಳೆದು ಕೊಂಡಿದ್ದಾರೆ. ಈ ಒಂದು ಕೋಟಿ ರೂಪಾಯಿ 24 ಕುಟುಂಬಗಳ ಉಳಿತಾಯದ ಹಣವಾಗಿತ್ತು ಎಂದು ಆರೋಪಿಸಲಾಗಿದೆ. ಈ ಕುಟುಂಬಗಳು ಹಣವನ್ನು ಸಾಗರ ಜಿಲ್ಲೆಯ ಉಪ ಅಂಚೆ ಕಚೇರಿಯಲ್ಲಿ ಸ್ಥಿರ ಠೇವಣಿ (Fixed Deposits) ಇಟ್ಟಿದ್ದರು. ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಆರೋಪಿ ಪೋಸ್ಟ್‌ಮಾಸ್ಟರ್ ನಕಲಿ ಎಫ್‌ಡಿ ಖಾತೆಗಳಿಗಾಗಿ ಅಸಲಿ ಪಾಸ್‌ಬುಕ್‌ಗಳನ್ನು ನೀಡಿದ್ದಾನೆ. ಕಳೆದ ಎರಡು ವರ್ಷಗಳಿಂದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಪೂರ್ಣ ಹಣವನ್ನು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಂಧಿತ ಸಬ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ವಿರುದ್ಧ ಇದೀಗ u/s 420 IPC (ವಂಚನೆ) ಮತ್ತು 408 IPC (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳ ಫಲಿತಾಂಶದ ಆಧಾರದ ಮೇಲೆ ಪ್ರಕರಣದಲ್ಲಿ ಹೆಚ್ಚಿನ ಸೆಕ್ಷನ್‌ಗಳನ್ನು ಸೇರಿಸಬಹುದು” ಎಂದು ಬೀನಾ-ಜಿಆರ್ ಪಿ ಪೊಲೀಸ್ ಠಾಣೆ ಪ್ರಭಾರಿ ಅಜಯ್ ಧುರ್ವೆ ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್