AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ

ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 25, 2022 | 7:58 PM

Share

ಭೋಪಾಲ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್​​ನಲ್ಲಿ(Betting) ಮಧ್ಯಪ್ರದೇಶದ (Madhya Pradesh) ಪೋಸ್ಟ್ ಮಾಸ್ಟರ್ ಒಬ್ಬರು ₹1 ಕೋಟಿ ಕಳೆದು ಕೊಂಡಿದ್ದಾರೆ. ಈ ಒಂದು ಕೋಟಿ ರೂಪಾಯಿ 24 ಕುಟುಂಬಗಳ ಉಳಿತಾಯದ ಹಣವಾಗಿತ್ತು ಎಂದು ಆರೋಪಿಸಲಾಗಿದೆ. ಈ ಕುಟುಂಬಗಳು ಹಣವನ್ನು ಸಾಗರ ಜಿಲ್ಲೆಯ ಉಪ ಅಂಚೆ ಕಚೇರಿಯಲ್ಲಿ ಸ್ಥಿರ ಠೇವಣಿ (Fixed Deposits) ಇಟ್ಟಿದ್ದರು. ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಆರೋಪಿ ಪೋಸ್ಟ್‌ಮಾಸ್ಟರ್ ನಕಲಿ ಎಫ್‌ಡಿ ಖಾತೆಗಳಿಗಾಗಿ ಅಸಲಿ ಪಾಸ್‌ಬುಕ್‌ಗಳನ್ನು ನೀಡಿದ್ದಾನೆ. ಕಳೆದ ಎರಡು ವರ್ಷಗಳಿಂದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಪೂರ್ಣ ಹಣವನ್ನು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಂಧಿತ ಸಬ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ವಿರುದ್ಧ ಇದೀಗ u/s 420 IPC (ವಂಚನೆ) ಮತ್ತು 408 IPC (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳ ಫಲಿತಾಂಶದ ಆಧಾರದ ಮೇಲೆ ಪ್ರಕರಣದಲ್ಲಿ ಹೆಚ್ಚಿನ ಸೆಕ್ಷನ್‌ಗಳನ್ನು ಸೇರಿಸಬಹುದು” ಎಂದು ಬೀನಾ-ಜಿಆರ್ ಪಿ ಪೊಲೀಸ್ ಠಾಣೆ ಪ್ರಭಾರಿ ಅಜಯ್ ಧುರ್ವೆ ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್