AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ

ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಐಪಿಎಲ್ ಬೆಟ್ಟಿಂಗ್​​ನಲ್ಲಿ ₹1ಕೋಟಿ ಕಳೆದುಕೊಂಡ ಪೋಸ್ಟ್ ಮಾಸ್ಟರ್; ಬೆಟ್ಟಿಂಗ್​​ಗೆ ಬಳಸಿದ್ದು 24 ಕುಟುಂಬಗಳ ಸ್ಥಿರ ಠೇವಣಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: May 25, 2022 | 7:58 PM

Share

ಭೋಪಾಲ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್​​ನಲ್ಲಿ(Betting) ಮಧ್ಯಪ್ರದೇಶದ (Madhya Pradesh) ಪೋಸ್ಟ್ ಮಾಸ್ಟರ್ ಒಬ್ಬರು ₹1 ಕೋಟಿ ಕಳೆದು ಕೊಂಡಿದ್ದಾರೆ. ಈ ಒಂದು ಕೋಟಿ ರೂಪಾಯಿ 24 ಕುಟುಂಬಗಳ ಉಳಿತಾಯದ ಹಣವಾಗಿತ್ತು ಎಂದು ಆರೋಪಿಸಲಾಗಿದೆ. ಈ ಕುಟುಂಬಗಳು ಹಣವನ್ನು ಸಾಗರ ಜಿಲ್ಲೆಯ ಉಪ ಅಂಚೆ ಕಚೇರಿಯಲ್ಲಿ ಸ್ಥಿರ ಠೇವಣಿ (Fixed Deposits) ಇಟ್ಟಿದ್ದರು. ಬಿನಾ ಸಬ್ ಪೋಸ್ಟ್ ಆಫೀಸ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ಅವರನ್ನು ಮೇ 20 ರಂದು ಬಿನಾ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈತ ಪೊಲೀಸರ ಮುಂದೆ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಆರೋಪಿ ಪೋಸ್ಟ್‌ಮಾಸ್ಟರ್ ನಕಲಿ ಎಫ್‌ಡಿ ಖಾತೆಗಳಿಗಾಗಿ ಅಸಲಿ ಪಾಸ್‌ಬುಕ್‌ಗಳನ್ನು ನೀಡಿದ್ದಾನೆ. ಕಳೆದ ಎರಡು ವರ್ಷಗಳಿಂದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಪೂರ್ಣ ಹಣವನ್ನು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಂಧಿತ ಸಬ್ ಪೋಸ್ಟ್ ಮಾಸ್ಟರ್ ವಿಶಾಲ್ ಅಹಿರ್ವಾರ್ ವಿರುದ್ಧ ಇದೀಗ u/s 420 IPC (ವಂಚನೆ) ಮತ್ತು 408 IPC (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳ ಫಲಿತಾಂಶದ ಆಧಾರದ ಮೇಲೆ ಪ್ರಕರಣದಲ್ಲಿ ಹೆಚ್ಚಿನ ಸೆಕ್ಷನ್‌ಗಳನ್ನು ಸೇರಿಸಬಹುದು” ಎಂದು ಬೀನಾ-ಜಿಆರ್ ಪಿ ಪೊಲೀಸ್ ಠಾಣೆ ಪ್ರಭಾರಿ ಅಜಯ್ ಧುರ್ವೆ ತಿಳಿಸಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ