ತಿರುಪತಿಗೆ 3.63 ಕೋಟಿ ಮೌಲ್ಯದ ಚಿನ್ನದ ಆಭರಣ ನೀಡಿದ ಲಕ್ನೋ ಐಪಿಎಲ್ ಟೀಂ ಮಾಲೀಕ ಸಂಜೀವ್ ಗೋಯೆಂಕಾ
ಇಂದು ಸಂಜೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವೇಳೆ ಅವರು ವೆಂಕಟೇಶ್ವರ ಸ್ವಾಮಿಗೆ 5 ಕೆಜಿ ತೂಕದ, 3.63 ಕೋಟಿ ರೂ. ಬೆಲೆ ಬಾಳುವ ಚಿನ್ನದ ಆಭರಣಗಳನ್ನು ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಐಪಿಎಲ್ ಪಂದ್ಯವನ್ನು ಪುನರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ತಿರುಮಲ, ಮೇ 16: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿದ್ದರಿಂದ ಮತ್ತು ಭಾರತದ ಹಲವೆಡೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದ್ದರಿಂದ ಐಪಿಎಲ್ ಪಂದ್ಯವನ್ನು (IPL Match) ರದ್ದುಗೊಳಿಸಿ, ಆಟಗಾರರನ್ನು ವಿಶೇಷ ರೈಲಿನ ಮೂಲಕ ಸುರಕ್ಷಿತವಾಗಿ ಕಳುಹಿಸಲಾಗಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ ಘೋಷಣೆ ಆಗಿರುವುದರಿಂದ ಐಪಿಎಸ್ ಪಂದ್ಯಾವಳಿಗೆ ಮರುಚಾಲನೆ ಸಿಕ್ಕಿದೆ. ಈ ನಡುವೆ ಲಕ್ನೋ ಸೂಪರ್ ಜೈಂಟ್ಸ್ ತಂಡದ (Lucknow Super Giants Team) ಮಾಲೀಕ ಸಂಜೀವ್ ಗೋಯೆಂಕಾ ಇಂದು ಭಾರತದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ (Tirumala Tirupati Temple) ತಮ್ಮ ಕುಟುಂಬಸ್ಥರೊಂದಿಗೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿದ ಬಳಿಕ ಅವರು ವೆಂಕಟೇಶ್ವರ ಸ್ವಾಮಿಗೆ 3.63 ಕೋಟಿ ರೂ. ಬೆಲೆ ಬಾಳುವ ಸುಮಾರು 5 ಕೆಜಿ ತೂಕದ ಚಿನ್ನಾಭರಣಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ ಅಧ್ಯಕ್ಷ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಮತ್ತು ಅವರ ಕುಟುಂಬವು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿತು. ವಿಷ್ಣುವಿನ ಅವತಾರವೆಂದು ಪರಿಗಣಿಸಲಾದ ಭಗವಾನ್ ವೆಂಕಟೇಶ್ವರನಿಗೆ ಸಮರ್ಪಿತವಾದ ಈ ದೇವಾಲಯವು ಭಾರತದಲ್ಲಿ ಹೆಚ್ಚು ಭೇಟಿ ನೀಡುವ ಧಾರ್ಮಿಕ ಸ್ಥಳಗಳಲ್ಲಿ ಒಂದು. ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಪುನರಾರಂಭಕ್ಕೆ ಒಂದು ದಿನ ಮೊದಲು ಸಂಜೀವ್ ಗೋಯೆಂಕಾ ಮತ್ತು ಅವರ ಕುಟುಂಬದವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದರು.
Truly blessed to have a divine darshan at Tirupati Devasthanam today. pic.twitter.com/qgkngvJBrx
— Dr. Sanjiv Goenka (@DrSanjivGoenka) May 16, 2025
ಇದನ್ನೂ ಓದಿ: IPL 2025: ನಾಳೆಯಿಂದ ದ್ವಿತೀಯಾರ್ಧದ ಐಪಿಎಲ್ ಆರಂಭ; ಉಳಿದ ಪಂದ್ಯಗಳ ವೇಳಾಪಟ್ಟಿ ಹೀಗಿದೆ
ವಿಷ್ಣುವಿನ ಅವತಾರವಾದ ವೆಂಕಟೇಶ್ವರನಿಗೆ ಸಮರ್ಪಿತವಾದ ತಿರುಮಲ ದೇವಾಲಯವು ಒಂದು ಮಹತ್ವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಹೆಗ್ಗುರುತಾಗಿದೆ. ಭಾರತ ಮತ್ತು ವಿದೇಶಗಳಿಂದ ಭಕ್ತರು ಪ್ರತಿವರ್ಷ ಆಶೀರ್ವಾದ ಪಡೆಯಲು ಈ ದೇವಾಲಯಕ್ಕೆ ಬರುತ್ತಾರೆ. ಸಂಜೀವ್ ಗೋಯೆಂಕಾ ನೀಡಿದ ಚಿನ್ನಾಭರಣದ ಸೆಟ್ನಲ್ಲಿ ದೇವರ ಕೈಮುದ್ರೆಗಳು, ಚಿನ್ನಾಭರಣಗಳು ಸೇರಿವೆ. ಇವುಗಳನ್ನು ಸಂಕೀರ್ಣವಾಗಿ ವಿನ್ಯಾಸಗೊಳಿಸಲಾಗಿದೆ. ಈ ಆಭರಣಗಳು ಅಮೂಲ್ಯ ವಜ್ರಗಳು ಮತ್ತು ರತ್ನಗಳಿಂದ ಕೂಡಿದೆ. ಈ ಅಮೂಲ್ಯ ಕೊಡುಗೆಗಳನ್ನು ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಭಾರತದ ಅತ್ಯಂತ ಪೂಜ್ಯ ಯಾತ್ರಾ ಸ್ಥಳಗಳಲ್ಲಿ ಒಂದಾದ ತಿರುಮಲ ದೇವಾಲಯದ ಪ್ರಧಾನ ದೇವರು ವೆಂಕಟೇಶ್ವರನಿಗೆ ಅರ್ಪಿಸಲಾಯಿತು.
#WATCH | Andhra Pradesh: RP-Sanjiv Goenka Group chairman and owner of Lucknow Super Giants IPL team, Sanjiv Goenka and his family visit Tirupati Tirumala temple and offer prayers.
(Video: Tirumala Tirupati Devasthanams – TTD) pic.twitter.com/rHY85mURuL
— ANI (@ANI) May 16, 2025
ಈ ಆಭರಣಗಳ ಔಪಚಾರಿಕ ಹಸ್ತಾಂತರ ಸಮಾರಂಭವು ದೇವಾಲಯ ಸಂಕೀರ್ಣದೊಳಗಿನ ರಂಗನಾಯಕಕುಲ ಮಂಟಪದಲ್ಲಿ ನಡೆಯಿತು. ಅಲ್ಲಿ ಸಂಜೀವ್ ಗೋಯೆಂಕಾ ನೀಡಿದ ಚಿನ್ನವನ್ನು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಚಿ. ವೆಂಕಯ್ಯ ಚೌಧರಿ ಸ್ವೀಕರಿಸಿದರು. ಪ್ರತಿವರ್ಷ ಬೇರೆಲ್ಲ ದೇವಾಲಯಗಳಿಗೆ ಬರುವುದಕ್ಕಿಂತ ಹೆಚ್ಚಿನ ಚಿನ್ನಾಭರಣ ಮತ್ತು ಹಣದ ದೇಣಿಗೆ ತಿರುಪತಿ ವೆಂಕಟೇಶ್ವರ ಸ್ವಾಮಿಗೆ ಹರಿದುಬರುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
