AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿಯ 14ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ; ಐಪಿಎಸ್​ ಅಧಿಕಾರಿ ವಿರುದ್ಧ ಚಾರ್ಜ್​ಶೀಟ್​

ಆರೋಪಿ ಗೌರವ್​ ಉಪಾಧ್ಯಾಯ ಅವರು 2012ನೇ ಬ್ಯಾಚ್​​ನ ಐಪಿಎಸ್​ ಅಧಿಕಾರಿಯಾಗಿದ್ದು, ಮೂಲತಃ ಉತ್ತರಪ್ರದೇಶದವರು. 2019ರ ಡಿಸೆಂಬರ್​​ನಲ್ಲಿ ಕರ್ಬಿ ಅಂಗ್ಲಾಂಗ್​ ಪೊಲೀಸ್​ ಠಾಣೆಯಲ್ಲಿ ಸುಪರಿಂಟೆಂಡೆಂಟ್​ ಆಗಿದ್ದ ಸಂದರ್ಭದಲ್ಲಿ, ತನ್ನ ಸಹೋದ್ಯೋಗಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು.

ಸಹೋದ್ಯೋಗಿಯ 14ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ; ಐಪಿಎಸ್​ ಅಧಿಕಾರಿ ವಿರುದ್ಧ ಚಾರ್ಜ್​ಶೀಟ್​
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 19, 2021 | 5:49 PM

Share

ಸಹೋದ್ಯೋಗಿಯ 14 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಐಪಿಎಸ್ ಅಧಿಕಾರಿಯೊಬ್ಬರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿ, ಚಾರ್ಜ್​ಶೀಟ್​ ಹಾಕಿದ್ದಾರೆ. ಈ ಐಪಿಎಸ್​ ಅಧಿಕಾರಿಯ ಹೆಸರು ಗೌರವ್​ ಉಪಾಧ್ಯಾಯ ಎಂದಾಗಿದ್ದು, ಇವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ತನಿಖೆಯಲ್ಲಿ ಇವರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾರ್ಜ್​ಶೀಟ್ ಸಲ್ಲಿಸಲಾಗಿದೆ ಎಂದು ಅಪರಾಧ ತನಿಖಾ ವಿಭಾಗದ ಉಪಅಧೀಕ್ಷಕ ಪ್ರದೀಪ್​ ಕುಮಾರ್​ ದಾಸ್ ತಿಳಿಸಿದ್ದಾರೆ. ಭಾರತೀಯ ದಂಡಸಂಹಿತೆಯ 354, 354 ಎ ಮತ್ತು ಪೊಸ್ಕೊ ಕಾಯ್ದೆಯಡಿ ಮಾರ್ಚ್​ ತಿಂಗಳಲ್ಲಿಯೇ ಚಾರ್ಜ್​ಶೀಟ್ ಹಾಕಲಾಗಿದ್ದರೂ ಇನ್ನೂ ಅದರ ವಿಚಾರಣೆ ಶುರುವಾಗಿಲ್ಲ.

ಆರೋಪಿ ಗೌರವ್​ ಉಪಾಧ್ಯಾಯ ಅವರು 2012ನೇ ಬ್ಯಾಚ್​​ನ ಐಪಿಎಸ್​ ಅಧಿಕಾರಿಯಾಗಿದ್ದು, ಮೂಲತಃ ಉತ್ತರಪ್ರದೇಶದವರು. 2019ರ ಡಿಸೆಂಬರ್​​ನಲ್ಲಿ ಕರ್ಬಿ ಅಂಗ್ಲಾಂಗ್​ ಪೊಲೀಸ್​ ಠಾಣೆಯಲ್ಲಿ ಸುಪರಿಂಟೆಂಡೆಂಟ್​ ಆಗಿದ್ದ ಸಂದರ್ಭದಲ್ಲಿ, ತನ್ನ ಸಹೋದ್ಯೋಗಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಬಾಲಕಿಯ ತಾಯಿ ಹಿರಿಯ ಪೊಲೀಸ್​ ಅಧಿಕಾರಿಯಾಗಿದ್ದಾರೆ. 2019ರ ಡಿಸೆಂಬರ್​​ನಲ್ಲಿ ಇವರು ತಮ್ಮ 14ವರ್ಷದ ಮಗಳು ಮತ್ತು 9ವರ್ಷದ ಮಗನೊಂದಿಗೆ ಗೌರವ್​ ಉಪಾಧ್ಯಾಯ ಮಗನ ಹುಟ್ಟುಹಬ್ಬದ ಪಾರ್ಟಿಗಾಗಿ ಬಂದಿದ್ದರು. ಪಾರ್ಟಿಯೆಲ್ಲ ಮುಗಿದ ಬಳಿಕ ಮಹಿಳಾ ಅಧಿಕಾರಿ ವಾಶ್​ರೂಂಗೆ ಹೋದ ಸಂದರ್ಭದಲ್ಲಿ ಅವರ ಮಗಳ ತುಟಿಯ ಮೇಲೆ ಎರಡು ಬಾರಿ ಚುಂಬಿಸಿದ್ದರು. ಆ ಸಮಯದಲ್ಲಿ ಆಕೆಯ ಸಹೋದರ ಅಲ್ಲೇ ಇದ್ದ. ಅಂದು ಮಧ್ಯರಾತ್ರಿ ಸುಮಾರು 2.30ರಹೊತ್ತಿಗೆ ಉಪಾಧ್ಯಾಯನ ಆ ಮೂವರನ್ನೂ ಅವರು ಬುಕ್​ ಮಾಡಿದ್ದ ಹೋಟೆಲ್​ಗೆ ತಲುಪಿಸಿದ್ದರು. ಹೋಟೆಲ್​ಗೆ ಹೋದ ಬಳಿಕ ಮಹಿಳಾ ಅಧಿಕಾರಿ ಮತ್ತು ಆಕೆಯ ಪುತ್ರ ಬೆಡ್​ರೂಂನಲ್ಲಿ ಇದ್ದಾಗ, ಇವರು ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದರು. ಹಾಗೇ ಮತ್ತೊಮ್ಮೆ ಚುಂಬಿಸಲು ಮುಂದಾದಾಗ ತಪ್ಪಿಸಿಕೊಂಡು, ಬೆಡ್​ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ನಂತರ ಬಾಲಕಿ ತನ್ನ ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಳು. ಆಗ ಗೌರವ್​ ಉಪಾಧ್ಯಾಯ ಕ್ಷಮೆಯನ್ನೂ ಕೇಳಿದ್ದರು.

ಆದರೆ ಸ್ವತಃ ಪೊಲೀಸ್ ಅಧಿಕಾರಿಯಾಗಿರುವ ಮಹಿಳೆ 2020 ರ ಜನವರಿ 3ರಂದು ಗುವಾಹಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅದಾದ ಬಳಿಕ ಪ್ರಕರಣದ ತನಿಖೆಗಾಗಿ ಸಿಐಡಿಗೆ ವಹಿಸಲಾಗಿತ್ತು. ಗೌರವ್​ ಉಪಾಧ್ಯಾಯ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಕ್ಕೆ ಪುರಾವೆ ಸಿಕ್ಕ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಇನ್ನು ಈ ಘಟನೆಯ ಬಳಿಕ ಬಾಲಕಿ ಖಿನ್ನತೆಗೆ ಜಾರಿದ್ದಾಳೆ ಎಂದೂ ಹೇಳಲಾಗಿದೆ.\

ಇದನ್ನೂ ಓದಿ: WhatsApp privacy policy: ವಾಟ್ಸಾಪ್ ಖಾಸಗಿತನ ನೀತಿ ಯುರೋಪ್​ನಲ್ಲೊಂದು ಭಾರತದಲ್ಲೊಂದು ಏಕೆ ಎಂದ ಸರ್ಕಾರ

ಲಾಕ್​ಡೌನ್ ವೇಳೆ ಪೊಲೀಸರಿಂದ ಲಾಠಿಚಾರ್ಜ್ ಆರೋಪ; ಎಲ್ಲಾ ಪೊಲೀಸರ ಮೇಲೆ ವಿಚಾರಣೆ ಸಾಧ್ಯವಿಲ್ಲ: ಹೈಕೋರ್ಟ್

IPS officer charge sheeted for sexually assault In Assam

Published On - 5:47 pm, Wed, 19 May 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?