AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ

ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು.

Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 5:21 PM

Share

ಜನವರಿ 22ಕ್ಕೆ ಅಯೋಧ್ಯೆ ರಾಮಮಂದಿರ (Ayodhya Ram temple) ಲೋರ್ಕಾಪಣೆಗೊಳ್ಳಲಿದ್ದು, ಅನೇಕ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದೀಗ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದರು. ಹಾಗೂ ಹೊಸ ರೈಲುಗಳು ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮೆಗಾ ರೋಡ್ ಶೋ​​​​ ನಡೆಸಿದರು. ಮೋದಿ ಅವರನ್ನು ಸ್ವಾಗತಿಸಲು ಜನರು ರಸ್ತೆಗಳಲ್ಲಿ ನಿಂತು ಜಯಘೋಷಗಳು ಹಾಗೂ ಹೂವಿನ ಮಳೆಗರೆದರು. ಈ ಸಂದರ್ಭದಲ್ಲಿ ಒಂದು ವಿಶೇಷ ವಿಚಾರ ಕಂಡು ಬಂದಿದೆ ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಬರಿ ಮಸೀದಿಯ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್​​​​ ಅನ್ಸಾರಿ ಅವರು ಪ್ರಧಾನಿ ಮೋದಿ ಸ್ವಾಗತಕ್ಕೆ ಹೂವನ್ನು ಹಿಡಿದುಕೊಂಡು ಕಾಯುತ್ತಿರುವ ಹಾಗೂ ಹೂ ಚೆಲ್ಲಿ ಸ್ವಾಗತಿಸಿದ ವಿಡಿಯೋ  ಬಾರಿ ವೈರಲ್​​ ಆಗಿದೆ.

ಈ ಬಗ್ಗೆ ಇಕ್ಬಾಲ್​​​​ ಅನ್ಸಾರಿ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು. ಇನ್ನು ರಾಮ ಪ್ರಾಣ ಪ್ರತಿಷ್ಠೆಗೆ ಹೋಗುತ್ತೀರಾ ಎಂದು ಕೇಳಿದಕ್ಕೆ, ನನಗೆ ಆಹ್ವಾನ ಬಂದರೆ ಖಂಡಿತ ಹೋಗುತ್ತೇನೆ, ರಾಮ ಮಂದಿರದ ಕಾರ್ಯಕ್ರಮಕ್ಕೆ ಹೋಗಲು ತುಂಬಾ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ಇಲ್ಲಿದೆ ನೋಡಿ:

ಮೋದಿ ಅವರನ್ನು ಸ್ವಾಗತಿಸಲು ಬಂದಿರುವ ಬಗ್ಗೆ ಕೇಳಿದಾಗ, ಮೋದಿ ಅವರು ನಮ್ಮ ಊರಿಗೆ ಬಂದಿದ್ದಾರೆ ಅವರನ್ನು ಸ್ವಾಗತಿಸುವುದು ನಮ್ಮ ಕರ್ತವ್ಯವಾಗಿದೆ. ಇದೊಂದು ಹಬ್ಬವಾಗಿದೆ, ಇಡಿ ದೇಶವೆ ಇದನ್ನು ಆಚರಣೆ ಮಾಡಬೇಕು. ಇಂತಹ ಕ್ಷಣದಲ್ಲಿ ಎಲ್ಲರೂ ಒಟ್ಟಾಗಬೇಕು. ನಾವು ಒಟ್ಟಿಗೆ ಒಂದು ರಾಷ್ಟ್ರದಲ್ಲಿ ವಾಸಿಸುವವರು, ಹಾಗಾಗಿ ನಾವು ಧಾರ್ಮಿಕ ವಿಚಾರದಲ್ಲಿ ಒಗ್ಗಟಿನಲ್ಲಿದ್ದೇವೆ ಎಂಬುದನ್ನು ತೋರಿಸಬೇಕಿದೆ. ಈ ಅದ್ಧೂರಿ ಆಚರಣೆಗೆ ದೇಶದ ಪ್ರಧಾನಿ ಬಂದಿರುವುದನ್ನು ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 30 December 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!