Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ

ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು.

Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ
Follow us
|

Updated on:Dec 30, 2023 | 5:21 PM

ಜನವರಿ 22ಕ್ಕೆ ಅಯೋಧ್ಯೆ ರಾಮಮಂದಿರ (Ayodhya Ram temple) ಲೋರ್ಕಾಪಣೆಗೊಳ್ಳಲಿದ್ದು, ಅನೇಕ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದೀಗ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದರು. ಹಾಗೂ ಹೊಸ ರೈಲುಗಳು ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮೆಗಾ ರೋಡ್ ಶೋ​​​​ ನಡೆಸಿದರು. ಮೋದಿ ಅವರನ್ನು ಸ್ವಾಗತಿಸಲು ಜನರು ರಸ್ತೆಗಳಲ್ಲಿ ನಿಂತು ಜಯಘೋಷಗಳು ಹಾಗೂ ಹೂವಿನ ಮಳೆಗರೆದರು. ಈ ಸಂದರ್ಭದಲ್ಲಿ ಒಂದು ವಿಶೇಷ ವಿಚಾರ ಕಂಡು ಬಂದಿದೆ ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಬರಿ ಮಸೀದಿಯ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್​​​​ ಅನ್ಸಾರಿ ಅವರು ಪ್ರಧಾನಿ ಮೋದಿ ಸ್ವಾಗತಕ್ಕೆ ಹೂವನ್ನು ಹಿಡಿದುಕೊಂಡು ಕಾಯುತ್ತಿರುವ ಹಾಗೂ ಹೂ ಚೆಲ್ಲಿ ಸ್ವಾಗತಿಸಿದ ವಿಡಿಯೋ  ಬಾರಿ ವೈರಲ್​​ ಆಗಿದೆ.

ಈ ಬಗ್ಗೆ ಇಕ್ಬಾಲ್​​​​ ಅನ್ಸಾರಿ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು. ಇನ್ನು ರಾಮ ಪ್ರಾಣ ಪ್ರತಿಷ್ಠೆಗೆ ಹೋಗುತ್ತೀರಾ ಎಂದು ಕೇಳಿದಕ್ಕೆ, ನನಗೆ ಆಹ್ವಾನ ಬಂದರೆ ಖಂಡಿತ ಹೋಗುತ್ತೇನೆ, ರಾಮ ಮಂದಿರದ ಕಾರ್ಯಕ್ರಮಕ್ಕೆ ಹೋಗಲು ತುಂಬಾ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ಇಲ್ಲಿದೆ ನೋಡಿ:

ಮೋದಿ ಅವರನ್ನು ಸ್ವಾಗತಿಸಲು ಬಂದಿರುವ ಬಗ್ಗೆ ಕೇಳಿದಾಗ, ಮೋದಿ ಅವರು ನಮ್ಮ ಊರಿಗೆ ಬಂದಿದ್ದಾರೆ ಅವರನ್ನು ಸ್ವಾಗತಿಸುವುದು ನಮ್ಮ ಕರ್ತವ್ಯವಾಗಿದೆ. ಇದೊಂದು ಹಬ್ಬವಾಗಿದೆ, ಇಡಿ ದೇಶವೆ ಇದನ್ನು ಆಚರಣೆ ಮಾಡಬೇಕು. ಇಂತಹ ಕ್ಷಣದಲ್ಲಿ ಎಲ್ಲರೂ ಒಟ್ಟಾಗಬೇಕು. ನಾವು ಒಟ್ಟಿಗೆ ಒಂದು ರಾಷ್ಟ್ರದಲ್ಲಿ ವಾಸಿಸುವವರು, ಹಾಗಾಗಿ ನಾವು ಧಾರ್ಮಿಕ ವಿಚಾರದಲ್ಲಿ ಒಗ್ಗಟಿನಲ್ಲಿದ್ದೇವೆ ಎಂಬುದನ್ನು ತೋರಿಸಬೇಕಿದೆ. ಈ ಅದ್ಧೂರಿ ಆಚರಣೆಗೆ ದೇಶದ ಪ್ರಧಾನಿ ಬಂದಿರುವುದನ್ನು ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 30 December 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!