AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ

ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು.

Video Viral: ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿಯ ಮುಖ್ಯ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ
ಅಕ್ಷಯ್​ ಪಲ್ಲಮಜಲು​​
|

Updated on:Dec 30, 2023 | 5:21 PM

Share

ಜನವರಿ 22ಕ್ಕೆ ಅಯೋಧ್ಯೆ ರಾಮಮಂದಿರ (Ayodhya Ram temple) ಲೋರ್ಕಾಪಣೆಗೊಳ್ಳಲಿದ್ದು, ಅನೇಕ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದೀಗ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದರು. ಹಾಗೂ ಹೊಸ ರೈಲುಗಳು ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮೆಗಾ ರೋಡ್ ಶೋ​​​​ ನಡೆಸಿದರು. ಮೋದಿ ಅವರನ್ನು ಸ್ವಾಗತಿಸಲು ಜನರು ರಸ್ತೆಗಳಲ್ಲಿ ನಿಂತು ಜಯಘೋಷಗಳು ಹಾಗೂ ಹೂವಿನ ಮಳೆಗರೆದರು. ಈ ಸಂದರ್ಭದಲ್ಲಿ ಒಂದು ವಿಶೇಷ ವಿಚಾರ ಕಂಡು ಬಂದಿದೆ ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಬರಿ ಮಸೀದಿಯ ಮುಖ್ಯ ಅರ್ಜಿದಾರರಾಗಿದ್ದ ಇಕ್ಬಾಲ್​​​​ ಅನ್ಸಾರಿ ಅವರು ಪ್ರಧಾನಿ ಮೋದಿ ಸ್ವಾಗತಕ್ಕೆ ಹೂವನ್ನು ಹಿಡಿದುಕೊಂಡು ಕಾಯುತ್ತಿರುವ ಹಾಗೂ ಹೂ ಚೆಲ್ಲಿ ಸ್ವಾಗತಿಸಿದ ವಿಡಿಯೋ  ಬಾರಿ ವೈರಲ್​​ ಆಗಿದೆ.

ಈ ಬಗ್ಗೆ ಇಕ್ಬಾಲ್​​​​ ಅನ್ಸಾರಿ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲರಿಗೂ ಸೇರಿದವರು, ಅವರಿಂದ ಅಯೋಧ್ಯೆ ಬೇಕಾದಷ್ಟು ಅಭಿವೃದ್ಧಿಯಾಗಿದೆ. ಅಯೋಧ್ಯೆಯಲ್ಲಿ ಒಂದು ಸಣ್ಣ ರೈಲು ನಿಲ್ದಾಣ ಇತ್ತು. ಆದರೆ ಇಂದು ಅದರ ಮರುನಿರ್ಮಾಣ ಅದ್ಭುತವಾಗಿದೆ. ಅಯೋಧ್ಯೆಯಲ್ಲಿ ಒಂದು ವಿಮಾನ ನಿಲ್ದಾಣ ಇರಲಿಲ್ಲ. ಆದರೆ ಇದೀಗ ಸುಂದರ ಮತ್ತು ದೊಡ್ಡ ವಿಮಾನ ನಿಲ್ದಾಣ ಬಂದಿದೆ ಎಂದು ಹೇಳಿದರು. ಇನ್ನು ರಾಮ ಪ್ರಾಣ ಪ್ರತಿಷ್ಠೆಗೆ ಹೋಗುತ್ತೀರಾ ಎಂದು ಕೇಳಿದಕ್ಕೆ, ನನಗೆ ಆಹ್ವಾನ ಬಂದರೆ ಖಂಡಿತ ಹೋಗುತ್ತೇನೆ, ರಾಮ ಮಂದಿರದ ಕಾರ್ಯಕ್ರಮಕ್ಕೆ ಹೋಗಲು ತುಂಬಾ ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ವಿಡಿಯೋ ಇಲ್ಲಿದೆ ನೋಡಿ:

ಮೋದಿ ಅವರನ್ನು ಸ್ವಾಗತಿಸಲು ಬಂದಿರುವ ಬಗ್ಗೆ ಕೇಳಿದಾಗ, ಮೋದಿ ಅವರು ನಮ್ಮ ಊರಿಗೆ ಬಂದಿದ್ದಾರೆ ಅವರನ್ನು ಸ್ವಾಗತಿಸುವುದು ನಮ್ಮ ಕರ್ತವ್ಯವಾಗಿದೆ. ಇದೊಂದು ಹಬ್ಬವಾಗಿದೆ, ಇಡಿ ದೇಶವೆ ಇದನ್ನು ಆಚರಣೆ ಮಾಡಬೇಕು. ಇಂತಹ ಕ್ಷಣದಲ್ಲಿ ಎಲ್ಲರೂ ಒಟ್ಟಾಗಬೇಕು. ನಾವು ಒಟ್ಟಿಗೆ ಒಂದು ರಾಷ್ಟ್ರದಲ್ಲಿ ವಾಸಿಸುವವರು, ಹಾಗಾಗಿ ನಾವು ಧಾರ್ಮಿಕ ವಿಚಾರದಲ್ಲಿ ಒಗ್ಗಟಿನಲ್ಲಿದ್ದೇವೆ ಎಂಬುದನ್ನು ತೋರಿಸಬೇಕಿದೆ. ಈ ಅದ್ಧೂರಿ ಆಚರಣೆಗೆ ದೇಶದ ಪ್ರಧಾನಿ ಬಂದಿರುವುದನ್ನು ನಾವು ಹೆಮ್ಮೆಪಡುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 30 December 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್