AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಹಾರಾಟ ನಡೆಸಿದ್ದ ಏರ್​ ಇಂಡಿಯಾ ವಿಮಾನಗಳು

ಇಸ್ರೇಲ್​ ಮೇಲೆ ಇರಾನ್ ಪ್ರತೀಕಾರದ ದಾಳಿಯನ್ನು ನಡೆಸುವುದಕ್ಕೂ ಮುನ್ನ ಎರಡು ಏರ್​ ಇಂಡಿಯಾ ವಿಮಾನಗಳು ಇರಾನ್ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದರು, ಒಂದೊಮ್ಮೆ ಆ ಸಮಯದಲ್ಲಿ ವಿಮಾನಗಳು ಅಲ್ಲಿಗೆ ಹೋಗಿದ್ದರೆ ಪ್ರಯಾಣಿಕರ ಗತಿ ಏನಾಗುತ್ತಿತ್ತು ಎನ್ನುವ ಕಳವಳ ವ್ಯಕ್ತವಾಗಿದೆ. ಇರಾನ್ ಇಸ್ರೇಲ್ ಮೇಲೆ 300ಕ್ಕೂ ಅಧಿಕ ಕ್ಷಿಪಣಿಗಳಿಂದ ದಾಳಿ ನಡೆಸಿತ್ತು.

ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಹಾರಾಟ ನಡೆಸಿದ್ದ ಏರ್​ ಇಂಡಿಯಾ ವಿಮಾನಗಳು
ಏರ್ ಇಂಡಿಯಾ
ನಯನಾ ರಾಜೀವ್
|

Updated on: Apr 16, 2024 | 2:05 PM

Share

ಇಸ್ರೇಲ್(Israel)​ ಮೇಲೆ ಇರಾನ್​ ಕ್ಷಿಪಣಿ ದಾಳಿ ನಡೆಸುವುದಕ್ಕೂ ಕೆಲವು ಗಂಟೆಗಳ ಮುನ್ನ ಎರಡು ಏರ್​ ಇಂಡಿಯಾ(Air India) ವಿಮಾನಗಳು ಇರಾನ್​ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಎರಡು ವಿಮಾನಗಳು 116 ಹಾಗೂ 131 ಮಂದಿಯನ್ನು ಹೊತ್ತು ಪ್ರಯಾಣ ಬೆಳೆಸಿತ್ತು. ಒಂದು ವಿಮಾನವು ನ್ಯೂಯಾರ್ಕ್​ನಿಂದ ಮುಂಬೈಗೆ ಮತ್ತೊಂದು ಮುಂಬೈನಿಂದ ಲಂಡನ್​ಗೆ ಪ್ರಯಾಣ ಬೆಳಸಿದ್ದವು. ಒಂದೊಮ್ಮೆ ಆ ಸಮಯದಲ್ಲಿ ವಿಮಾನಗಳು ಅಲ್ಲಿದ್ದರೆ ಅಷ್ಟೊಂದು ಪ್ರಯಾಣಿಕರ ಗತಿ ಏನಾಗುತ್ತಿತ್ತು.

ಇರಾನ್ ಏಪ್ರಿಲ್​ 13ರಂದು ಕನಿಷ್ಠ 300 ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಹಾರಿಸಿತ್ತು. ಏಪ್ರಿಲ್ 1 ರಂದು ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಭಾಗವಾಗಿರುವ ಕಟ್ಟಡಕ್ಕೆ ಫೈಟರ್ ಜೆಟ್‌ಗಳು ಹೊಡೆದಾಗ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಂಟಾಗಿತ್ತು.

ಏರ್ ಇಂಡಿಯಾ ವಿಮಾನಗಳು, ಬೋಯಿಂಗ್ 777-232 ಮತ್ತು ಬೋಯಿಂಗ್ 777ER, ಸರಿಸುಮಾರು 280 ಮತ್ತು 330 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ. ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಡ್ರೋನ್​ಗಳು ಹಾಗೂ ಕ್ಷಿಪಣಿಗಳನ್ನು ಗಾಳಿಯಲ್ಲಿ ಹೊಡೆದುರುಳಿಸುವಲ್ಲಿ ಅಮೆರಿಕ ಹಾಗೂ ಬ್ರಿಟಿಷ್ ವಾಯುಪಡೆಗಳು ಇಸ್ರೇಲ್​ಗೆ ಸಹಾಯ ಮಾಡಿವೆ. ಇಸ್ರೇಲ್ ದಕ್ಷಿಣ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಸಣ್ಣಪುಟ್ಟ ಹಾನಿಗಳಾಗಿವೆ. ಈ ದಾಳಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಏರ್ ಇಂಡಿಯಾದ ವಕ್ತಾರರು ವಿಮಾನಯಾನವು ತನ್ನ ಪ್ರಯಾಣಿಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದರು.

ದಾಳಿಯ ದೃಷ್ಟಿಯಿಂದ ಮಧ್ಯಪ್ರಾಚ್ಯದ ಅನೇಕ ದೇಶಗಳು ತಮ್ಮ ವಾಯುನೆಲೆಯನ್ನು ಮುಚ್ಚಿವೆ. ಇಸ್ರೇಲ್​ಮ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಮತ್ತು ಯುಎಸ್​ ಸೆಕ್ರೆಟರಿ ಜನರಲ್ ಆಂಟೊನಿಯೊ ಗುಟೆರಸ್ ಇರಾನ್ ದಾಳಿಯನ್ನು ಖಂಡಿಸಿದ್ದಾರೆ. ಇರಾನ್ ದಾಳಿಯ ಕುರಿತು ಇಸ್ರೇಲ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ