Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಹಾರಾಟ ನಡೆಸಿದ್ದ ಏರ್​ ಇಂಡಿಯಾ ವಿಮಾನಗಳು

ಇಸ್ರೇಲ್​ ಮೇಲೆ ಇರಾನ್ ಪ್ರತೀಕಾರದ ದಾಳಿಯನ್ನು ನಡೆಸುವುದಕ್ಕೂ ಮುನ್ನ ಎರಡು ಏರ್​ ಇಂಡಿಯಾ ವಿಮಾನಗಳು ಇರಾನ್ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದರು, ಒಂದೊಮ್ಮೆ ಆ ಸಮಯದಲ್ಲಿ ವಿಮಾನಗಳು ಅಲ್ಲಿಗೆ ಹೋಗಿದ್ದರೆ ಪ್ರಯಾಣಿಕರ ಗತಿ ಏನಾಗುತ್ತಿತ್ತು ಎನ್ನುವ ಕಳವಳ ವ್ಯಕ್ತವಾಗಿದೆ. ಇರಾನ್ ಇಸ್ರೇಲ್ ಮೇಲೆ 300ಕ್ಕೂ ಅಧಿಕ ಕ್ಷಿಪಣಿಗಳಿಂದ ದಾಳಿ ನಡೆಸಿತ್ತು.

ಕ್ಷಿಪಣಿ ದಾಳಿಗೂ ಮುನ್ನ ಇರಾನ್ ವಾಯು ಪ್ರದೇಶದಲ್ಲಿ ಹಾರಾಟ ನಡೆಸಿದ್ದ ಏರ್​ ಇಂಡಿಯಾ ವಿಮಾನಗಳು
ಏರ್ ಇಂಡಿಯಾ
Follow us
ನಯನಾ ರಾಜೀವ್
|

Updated on: Apr 16, 2024 | 2:05 PM

ಇಸ್ರೇಲ್(Israel)​ ಮೇಲೆ ಇರಾನ್​ ಕ್ಷಿಪಣಿ ದಾಳಿ ನಡೆಸುವುದಕ್ಕೂ ಕೆಲವು ಗಂಟೆಗಳ ಮುನ್ನ ಎರಡು ಏರ್​ ಇಂಡಿಯಾ(Air India) ವಿಮಾನಗಳು ಇರಾನ್​ ವಾಯುನೆಲೆಯಲ್ಲಿ ಹಾರಾಟ ನಡೆಸಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಎರಡು ವಿಮಾನಗಳು 116 ಹಾಗೂ 131 ಮಂದಿಯನ್ನು ಹೊತ್ತು ಪ್ರಯಾಣ ಬೆಳೆಸಿತ್ತು. ಒಂದು ವಿಮಾನವು ನ್ಯೂಯಾರ್ಕ್​ನಿಂದ ಮುಂಬೈಗೆ ಮತ್ತೊಂದು ಮುಂಬೈನಿಂದ ಲಂಡನ್​ಗೆ ಪ್ರಯಾಣ ಬೆಳಸಿದ್ದವು. ಒಂದೊಮ್ಮೆ ಆ ಸಮಯದಲ್ಲಿ ವಿಮಾನಗಳು ಅಲ್ಲಿದ್ದರೆ ಅಷ್ಟೊಂದು ಪ್ರಯಾಣಿಕರ ಗತಿ ಏನಾಗುತ್ತಿತ್ತು.

ಇರಾನ್ ಏಪ್ರಿಲ್​ 13ರಂದು ಕನಿಷ್ಠ 300 ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಹಾರಿಸಿತ್ತು. ಏಪ್ರಿಲ್ 1 ರಂದು ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಭಾಗವಾಗಿರುವ ಕಟ್ಟಡಕ್ಕೆ ಫೈಟರ್ ಜೆಟ್‌ಗಳು ಹೊಡೆದಾಗ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉಂಟಾಗಿತ್ತು.

ಏರ್ ಇಂಡಿಯಾ ವಿಮಾನಗಳು, ಬೋಯಿಂಗ್ 777-232 ಮತ್ತು ಬೋಯಿಂಗ್ 777ER, ಸರಿಸುಮಾರು 280 ಮತ್ತು 330 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುತ್ತದೆ. ಇರಾನ್ ಇಸ್ರೇಲ್ ಮೇಲೆ 100ಕ್ಕೂಹೆಚ್ಚು ಡ್ರೋನ್​ಗಳನ್ನು ಹಾರಿಸಿದೆ. ಇರಾನ್ ದಾಳಿಯ ನಂತರ ಇಸ್ರೇಲ್ ರಕ್ಷಣಾ ಪಡೆ ತೀವ್ರ ಕಟ್ಟೆಚ್ಚರವಹಿಸಿದೆ. ಇಸ್ರೇಲಿ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಮತ್ತು ಕ್ಷಿಪಣಿದಾಳಿಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಡ್ರೋನ್​ಗಳು ಹಾಗೂ ಕ್ಷಿಪಣಿಗಳನ್ನು ಗಾಳಿಯಲ್ಲಿ ಹೊಡೆದುರುಳಿಸುವಲ್ಲಿ ಅಮೆರಿಕ ಹಾಗೂ ಬ್ರಿಟಿಷ್ ವಾಯುಪಡೆಗಳು ಇಸ್ರೇಲ್​ಗೆ ಸಹಾಯ ಮಾಡಿವೆ. ಇಸ್ರೇಲ್ ದಕ್ಷಿಣ ಭಾಗದಲ್ಲಿರುವ ಸೇನಾ ನೆಲೆಯಲ್ಲಿ ಸಣ್ಣಪುಟ್ಟ ಹಾನಿಗಳಾಗಿವೆ. ಈ ದಾಳಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಏರ್ ಇಂಡಿಯಾದ ವಕ್ತಾರರು ವಿಮಾನಯಾನವು ತನ್ನ ಪ್ರಯಾಣಿಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿದರು.

ದಾಳಿಯ ದೃಷ್ಟಿಯಿಂದ ಮಧ್ಯಪ್ರಾಚ್ಯದ ಅನೇಕ ದೇಶಗಳು ತಮ್ಮ ವಾಯುನೆಲೆಯನ್ನು ಮುಚ್ಚಿವೆ. ಇಸ್ರೇಲ್​ಮ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು ಮತ್ತು ಯುಎಸ್​ ಸೆಕ್ರೆಟರಿ ಜನರಲ್ ಆಂಟೊನಿಯೊ ಗುಟೆರಸ್ ಇರಾನ್ ದಾಳಿಯನ್ನು ಖಂಡಿಸಿದ್ದಾರೆ. ಇರಾನ್ ದಾಳಿಯ ಕುರಿತು ಇಸ್ರೇಲ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ