AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ ತಿಂಗಳಲ್ಲಿ ಚಾರ್​ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದ ರೈಲ್ವೆ: ಇಲ್ಲಿದೆ ಮಾಹಿತಿ

ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್​ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಿಚಯಿಸಿದೆ

ಮೇ ತಿಂಗಳಲ್ಲಿ ಚಾರ್​ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದ ರೈಲ್ವೆ: ಇಲ್ಲಿದೆ ಮಾಹಿತಿ
ಕೇದಾರನಾಥ್
TV9 Web
| Edited By: |

Updated on:Apr 02, 2022 | 1:08 PM

Share

ದೆಹಲಿ: ಉತ್ತರಾಖಂಡದಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಪ್ರವಾಸ ಹೊರಡುವ ಆಸೆ ಹೊಂದಿರುವವರಿಗೆ ಐಆರ್​ಸಿಟಿಸಿ ವಿಶೇಷ ರಿಯಾಯ್ತಿ ಘೋಷಿಸಿದೆ. ಹಲವು ಅಗತ್ಯ ಸೌಲಭ್ಯಗಳಿರುವ ಪ್ಯಾಕೇಜ್ ಟೂರ್​ಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ರಿಯಾಯ್ತಿಯೂ ಸಿಗುತ್ತಿದೆ. ಬದರಿನಾಥ್, ಕೇದಾರ್​ನಾಥ್, ಗಂಗೋತ್ರಿ ಮತ್ತು ಯಮುನೋತ್ರಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಈ ಪ್ಯಾಕೇಜ್​ನಲ್ಲಿದೆ. ಈ ನಾಲ್ಕು ತೀರ್ಥ ಕ್ಷೇತ್ರಗಳ ದರ್ಶನದಿಂದ ಪುಣ್ಯಪ್ರಾಪ್ತಿಯಾಗುತ್ತದೆ ಎಂದು ಹಿಂದೂಗಳು ನಂಬುತ್ತಾರೆ.

ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್​ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಿಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ.

ಹರಿದ್ವಾರ, ಬಾರ್​ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್​ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳನ್ನು ಸಂದರ್ಶಿಸಲಾಗುತ್ತದೆ. ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್​ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

ಒಬ್ಬರಿಗೆ ₹ 77,600 ಮತ್ತು ಇಬ್ಬರಿಗೆ ₹ 61,400 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಪ್ರಯಾಣದರದೊಂದಿಗೆ ವಸತಿ, ಊಟೋಪಚಾರ ವೆಚ್ಚಗಳನ್ನೂ ಒಳಗೊಂದಿದೆ. ಹೆಚ್ಚಿನ ಮಾಹಿತಿಗೆ www.irctctourism.com ಜಾಲತಾಣ ನೋಡಿ.

ಇದನ್ನೂ ಓದಿ: ಮೈಸೂರು: ಸಫಾರಿ ವೇಳೆ ಒಂದೆರಡಲ್ಲ, ಮೂರು ಹುಲಿಗಳ ದರ್ಶನ! ಪ್ರವಾಸಿಗರಿಗೆ ಧಮಾಕ; ವಿಡಿಯೋ ನೋಡಿ

ಇದನ್ನೂ ಓದಿ: Nandi Hills: ಕೋವಿಡ್​ಗೆ ಬೈ ಬೈ, ಪ್ರವಾಸಿಗರ ಭೇಟಿಗೆ ನಂದಿ ಬೆಟ್ಟ ಇನ್ಮುಂದೆ ಸದಾ ಮುಕ್ತ ಮುಕ್ತ ಮುಕ್ತಾ! ಟಿಕೆಟ್ ಬುಕ್ಕಿಂಗ್ ಹೇಗೆ?

Published On - 1:06 pm, Sat, 2 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ