AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ಕೇವಲ ಒಂದು ವರ್ಷದಲ್ಲೇ ಭಾರತೀಯ ರೈಲ್ವೆಗೆ ಬರೋಬ್ಬರಿ 2.40 ಲಕ್ಷ ಕೋಟಿ ರೂ, ಆದಾಯ

2022-23ನೇ ಹಣಕಾಸು ವರ್ಷದಲ್ಲಿ ಭಾರತೀಯ ರೈಲ್ವೆಯು 2.40 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಆದಾಯವನ್ನು ಗಳಿಸಿದೆ. 

Indian Railways: ಕೇವಲ ಒಂದು ವರ್ಷದಲ್ಲೇ ಭಾರತೀಯ ರೈಲ್ವೆಗೆ ಬರೋಬ್ಬರಿ 2.40 ಲಕ್ಷ ಕೋಟಿ ರೂ, ಆದಾಯ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Apr 18, 2023 | 1:05 PM

ದೆಹಲಿ: ಉತ್ತಮ ಸೇವೆ, ವಿಶೇಷವಾದ ಟೂರಿಂಗ್ ಪ್ಯಾಕೇಜ್​ಗಳಿಂದ ಹೆಸರು ಮಾಡಿರುವ ನಮ್ಮ ಭಾರತೀಯ ರೈಲ್ವೆ(Indian Railways) 2022 ಮತ್ತು 2023ನೇ ಸಾಲಿನಲ್ಲಿ ಭರ್ಜರಿ ಆದಾಯ ಗಳಿಸಿದೆ. 2022-23ನೇ ಹಣಕಾಸು ವರ್ಷದಲ್ಲಿ ಭಾರತೀಯ ರೈಲ್ವೆಯು 2.40 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಆದಾಯವನ್ನು ಗಳಿಸಿದೆ.  ಇದು ಹಿಂದಿನ ವರ್ಷಕ್ಕಿಂತ ಸುಮಾರು 49,000 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ ಎಂದು ಸೋಮವಾರ ಸಚಿವಾಲಯ ಮಾಹಿತಿ ನೀಡಿದೆ.

2022-23 ರಲ್ಲಿ, ಸರಕು ಸಾಗಣೆ ಆದಾಯ ಕೂಡ ರೂ 1.62 ಲಕ್ಷ ಕೋಟಿಗೆ ವೃದ್ಧಿಸಿದೆ. ಅಂದರೆ ಹಿಂದಿನ ವರ್ಷಕ್ಕೆ ಹೋಲಿಸಿದರೆ ಸುಮಾರು 15 ಪ್ರತಿಶತದಷ್ಟು ಏರಿಕೆಯಾಗಿದೆ. ಭಾರತೀಯ ರೈಲ್ವೇಯ ಪ್ರಯಾಣಿಕರ ಸಂಚಾರದಿಂದ ಬಂದ ಆದಾಯವು 61 ಶೇಕಡಾ ಏರಿಕೆಯಾಗಿದೆ. ಅಂದ್ರೆ 63,300 ಕೋಟಿ ರೂಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ.

ಇದನ್ನೂ ಓದಿ: IRCTC Tour: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್, ಒಂದೇ ದಿನದಲ್ಲಿ ಸ್ವಾಮಿಯ ದರ್ಶನ! ರೈಲ್ವೆ ಇಲಾಖೆಯ ಈ ಟೂರ್ ಪ್ಯಾಕೇಜ್ ಗಮನಿಸಿ

ಮೂರು ವರ್ಷಗಳ ನಂತರ, ಭಾರತೀಯ ರೈಲ್ವೆಯು ಪಿಂಚಣಿ ವೆಚ್ಚಗಳನ್ನು ಸಂಪೂರ್ಣವಾಗಿ ಪೂರೈಸಲು ಸಮರ್ಥವಾಗಿದೆ. ಆದಾಯದಲ್ಲಿನ ಹೆಚ್ಚಳ ಮತ್ತು ಬಿಗಿಯಾದ ವೆಚ್ಚ ನಿರ್ವಹಣೆಯ ಪರಿಣಾಮ RE ಗುರಿಯೊಳಗೆ 98.14 ಶೇಕಡಾ ಕಾರ್ಯಾಚರಣಾ ಅನುಪಾತವನ್ನು ಸಾಧಿಸಲು ಸಹಾಯ ಮಾಡಿದೆ. ಎಲ್ಲಾ ಆದಾಯ ವೆಚ್ಚಗಳನ್ನು ಪೂರೈಸಿದ ನಂತರ, ರೈಲ್ವೆ 3,200 ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಕೂಡ ಗಳಿಸಿದೆ. ರೈಲ್ವೇ ತನ್ನ ಪಿಂಚಣಿ ಹೊರೆಯ ಭಾಗಗಳನ್ನು ಭರಿಸುವಂತೆ ಹಲವು ವರ್ಷಗಳಿಂದ ಹಣಕಾಸು ಸಚಿವಾಲಯವನ್ನು ಸಂಪರ್ಕಿಸಿತ್ತು.

ಪ್ರಯಾಣಿಕರ ಮೂಲದಿಂದ ರೈಲ್ವೆ 2022-23ರಲ್ಲಿ 63,300 ಕೋಟಿ ರೂ, 2021-22ರಲ್ಲಿ 39,214 ಕೋಟಿ ರೂ. ಗಳಿಸಿದೆ. ಅಂದರೆ 61% ವೃದ್ಧಿಸಿದೆ. 2021-22ರಲ್ಲಿ ಒಟ್ಟಾರೆ ಆದಾಯ 1,91,278 ಕೋಟಿ ರೂ. ಇದ್ದರೆ 2022-23ರಲ್ಲಿ 2,39,803 ಕೋಟಿ ರೂ.ಗಳಾಗಿತ್ತು. ರೈಲ್ವೆ ಸೇಫ್ಟಿ ಫಂಡ್‌ನಲ್ಲಿ 2022-23ರಲ್ಲಿ 30,001 ಕೋಟಿ ರೂ. ವ್ಯಯಿಸಲಾಗಿತ್ತು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ