AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ, ವಾರಾಣಸಿ, ಪ್ರಯಾಗ್​ರಾಜ್​ಗೆ ಕೈಗೆಟುಕುವ ಬೆಲೆಯಲ್ಲಿ ವಿಮಾನ ಪ್ರವಾಸ; ಇಲ್ಲಿದೆ ಮಾಹಿತಿ

ಈ ಏರ್ ಟೂರ್ ಪ್ಯಾಕೇಜ್ ಕಾಶಿ ವಿಶ್ವನಾಥ ದೇವಸ್ಥಾನ, ಅನ್ನಪೂರ್ಣ ದೇವಸ್ಥಾನ, ಕಾಳ ಭೈರವ್ ಮಂದಿರ, ಸಾರನಾಥ ಮಂದಿರ, ಪಾತಾಳಪುರಿ ದೇವಸ್ಥಾನ ಸೇರಿದಂತೆ ಉತ್ತರ ಪ್ರದೇಶದ ಎಲ್ಲಾ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ.

ಅಯೋಧ್ಯೆ, ವಾರಾಣಸಿ, ಪ್ರಯಾಗ್​ರಾಜ್​ಗೆ ಕೈಗೆಟುಕುವ ಬೆಲೆಯಲ್ಲಿ ವಿಮಾನ ಪ್ರವಾಸ; ಇಲ್ಲಿದೆ ಮಾಹಿತಿ
ಅಯೋಧ್ಯೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 07, 2022 | 11:00 AM

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆ (Ayodhya), ಪ್ರಯಾಗ್‌ರಾಜ್ (Prayagraj) ಮತ್ತು ವಾರಾಣಸಿಯಂತಹ (Varanasi) ಭಾರತದ ಪವಿತ್ರ ನಗರಗಳಿಗೆ ತೆರಳುವ ಆಸಕ್ತಿ ಇರುವ ಭಕ್ತರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಕೈಗೆಟುಕುವ ದರದಲ್ಲಿ ವಿಮಾನ ಪ್ರವಾಸದ ಪ್ಯಾಕೇಜ್ ಘೋಷಿಸಿದೆ. ಈ ಏರ್ ಟೂರ್ ಪ್ಯಾಕೇಜ್ ಕಾಶಿ ವಿಶ್ವನಾಥ ದೇವಸ್ಥಾನ, ಅನ್ನಪೂರ್ಣ ದೇವಸ್ಥಾನ, ಸಂಕಟ ಮೋಚನ ಮಂದಿರ, ಕಾಳ ಭೈರವ್ ಮಂದಿರ, ಸಾರನಾಥ ಮಂದಿರ, ಪಾತಾಳಪುರಿ ದೇವಸ್ಥಾನ, ಬಡೇ ಹನುಮಾನ್ ಜಿ ಮಂದಿರ ಸೇರಿದಂತೆ ಉತ್ತರ ಪ್ರದೇಶದ ಎಲ್ಲಾ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ.

ಇವುಗಳ ಹೊರತಾಗಿ ಈ ಪ್ಯಾಕೇಜ್​ನಲ್ಲಿ ಕನಕ ಭವನ, ಹನುಮಾನ್ ಗರ್ಹಿ, ರಾಮ ಜನ್ಮಭೂಮಿ ಮತ್ತು ಶ್ರೀ ಕಾಳೆ ರಾಮ ದೇವಾಲಯಕ್ಕೆ ಭೇಟಿ ನೀಡಬಹುದು. ಈ ಏರ್ ಟೂರ್ ಪ್ಯಾಕೇಜ್ 4 ರಾತ್ರಿಗಳು, 5 ದಿನಗಳನ್ನು ಒಳಗೊಂಡಿರುತ್ತದೆ. ಈ ವಿಶೇಷ ವಿಮಾನ ಪ್ರವಾಸದ ಪ್ಯಾಕೇಜ್ ನವೆಂಬರ್ 19ರಂದು ಪ್ರಾರಂಭವಾಗುತ್ತದೆ.

ಇದನ್ನೂ ಓದಿ: Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 15 ಲಕ್ಷ ದೀಪಗಳು; ಹೊಸ ಗಿನ್ನಿಸ್ ವಿಶ್ವ ದಾಖಲೆ

ಈ ಏರ್ ಟೂರ್ ಪ್ಯಾಕೇಜ್ ಹೋಟೆಲ್ ವಾಸ್ತವ್ಯವನ್ನು ಕೂಡ ಒಳಗೊಂಡಿರುತ್ತದೆ. ಮುಂಚಿತವಾಗಿ ಬುಕ್ ಮಾಡಿದ ಹೋಟೆಲ್​ಗಳಲ್ಲಿ ಈ ಪ್ಯಾಕೇಜ್​ನ ಭಕ್ತರು ತಂಗುತ್ತಾರೆ. ಈ ಏರ್ ಟೂರ್ ಪ್ಯಾಕೇಜ್ 2 ಸ್ಲಾಟ್‌ಗಳನ್ನು ಹೊಂದಿದೆ. ನವೆಂಬರ್ 19ರಿಂದ 23ರವರೆಗೆ ಒಂದು ಪ್ಯಾಕೇಜ್ ಇದ್ದರೆ ಡಿಸೆಂಬರ್ 14ರಿಂದ 18ರವರೆಗೆ ಇನ್ನೊಂದು ಪ್ಯಾಕೇಜ್ ಇರಲಿದೆ.

ಅಯೋಧ್ಯೆ, ಪ್ರಯಾಗರಾಜ್ ಮತ್ತು ವಾರಾಣಸಿ ಏರ್ ಟೂರ್ ಪ್ಯಾಕೇಜ್ ಬುಕ್ ಮಾಡುವುದು ಹೇಗೆ?: ಆಸಕ್ತ ಪ್ರಯಾಣಿಕರು IRCTC ಯ ಅಧಿಕೃತ ವೆಬ್‌ಸೈಟ್ ಮೂಲಕ ಈ ಕೈಗೆಟುಕುವ ಏರ್ ಟೂರ್ ಪ್ಯಾಕೇಜ್ ಅನ್ನು ಬುಕ್ ಮಾಡಬಹುದು. ಈ ಪ್ಯಾಕೇಜ್ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Mon, 7 November 22

ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ