AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ, ವಾರಾಣಸಿ, ಪ್ರಯಾಗ್​ರಾಜ್​ಗೆ ಕೈಗೆಟುಕುವ ಬೆಲೆಯಲ್ಲಿ ವಿಮಾನ ಪ್ರವಾಸ; ಇಲ್ಲಿದೆ ಮಾಹಿತಿ

ಈ ಏರ್ ಟೂರ್ ಪ್ಯಾಕೇಜ್ ಕಾಶಿ ವಿಶ್ವನಾಥ ದೇವಸ್ಥಾನ, ಅನ್ನಪೂರ್ಣ ದೇವಸ್ಥಾನ, ಕಾಳ ಭೈರವ್ ಮಂದಿರ, ಸಾರನಾಥ ಮಂದಿರ, ಪಾತಾಳಪುರಿ ದೇವಸ್ಥಾನ ಸೇರಿದಂತೆ ಉತ್ತರ ಪ್ರದೇಶದ ಎಲ್ಲಾ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ.

ಅಯೋಧ್ಯೆ, ವಾರಾಣಸಿ, ಪ್ರಯಾಗ್​ರಾಜ್​ಗೆ ಕೈಗೆಟುಕುವ ಬೆಲೆಯಲ್ಲಿ ವಿಮಾನ ಪ್ರವಾಸ; ಇಲ್ಲಿದೆ ಮಾಹಿತಿ
ಅಯೋಧ್ಯೆ
TV9 Web
| Edited By: |

Updated on:Nov 07, 2022 | 11:00 AM

Share

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆ (Ayodhya), ಪ್ರಯಾಗ್‌ರಾಜ್ (Prayagraj) ಮತ್ತು ವಾರಾಣಸಿಯಂತಹ (Varanasi) ಭಾರತದ ಪವಿತ್ರ ನಗರಗಳಿಗೆ ತೆರಳುವ ಆಸಕ್ತಿ ಇರುವ ಭಕ್ತರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಕೈಗೆಟುಕುವ ದರದಲ್ಲಿ ವಿಮಾನ ಪ್ರವಾಸದ ಪ್ಯಾಕೇಜ್ ಘೋಷಿಸಿದೆ. ಈ ಏರ್ ಟೂರ್ ಪ್ಯಾಕೇಜ್ ಕಾಶಿ ವಿಶ್ವನಾಥ ದೇವಸ್ಥಾನ, ಅನ್ನಪೂರ್ಣ ದೇವಸ್ಥಾನ, ಸಂಕಟ ಮೋಚನ ಮಂದಿರ, ಕಾಳ ಭೈರವ್ ಮಂದಿರ, ಸಾರನಾಥ ಮಂದಿರ, ಪಾತಾಳಪುರಿ ದೇವಸ್ಥಾನ, ಬಡೇ ಹನುಮಾನ್ ಜಿ ಮಂದಿರ ಸೇರಿದಂತೆ ಉತ್ತರ ಪ್ರದೇಶದ ಎಲ್ಲಾ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ.

ಇವುಗಳ ಹೊರತಾಗಿ ಈ ಪ್ಯಾಕೇಜ್​ನಲ್ಲಿ ಕನಕ ಭವನ, ಹನುಮಾನ್ ಗರ್ಹಿ, ರಾಮ ಜನ್ಮಭೂಮಿ ಮತ್ತು ಶ್ರೀ ಕಾಳೆ ರಾಮ ದೇವಾಲಯಕ್ಕೆ ಭೇಟಿ ನೀಡಬಹುದು. ಈ ಏರ್ ಟೂರ್ ಪ್ಯಾಕೇಜ್ 4 ರಾತ್ರಿಗಳು, 5 ದಿನಗಳನ್ನು ಒಳಗೊಂಡಿರುತ್ತದೆ. ಈ ವಿಶೇಷ ವಿಮಾನ ಪ್ರವಾಸದ ಪ್ಯಾಕೇಜ್ ನವೆಂಬರ್ 19ರಂದು ಪ್ರಾರಂಭವಾಗುತ್ತದೆ.

ಇದನ್ನೂ ಓದಿ: Ayodhya Deepotsav: ಅಯೋಧ್ಯೆಯಲ್ಲಿ ಬೆಳಗಿದ 15 ಲಕ್ಷ ದೀಪಗಳು; ಹೊಸ ಗಿನ್ನಿಸ್ ವಿಶ್ವ ದಾಖಲೆ

ಈ ಏರ್ ಟೂರ್ ಪ್ಯಾಕೇಜ್ ಹೋಟೆಲ್ ವಾಸ್ತವ್ಯವನ್ನು ಕೂಡ ಒಳಗೊಂಡಿರುತ್ತದೆ. ಮುಂಚಿತವಾಗಿ ಬುಕ್ ಮಾಡಿದ ಹೋಟೆಲ್​ಗಳಲ್ಲಿ ಈ ಪ್ಯಾಕೇಜ್​ನ ಭಕ್ತರು ತಂಗುತ್ತಾರೆ. ಈ ಏರ್ ಟೂರ್ ಪ್ಯಾಕೇಜ್ 2 ಸ್ಲಾಟ್‌ಗಳನ್ನು ಹೊಂದಿದೆ. ನವೆಂಬರ್ 19ರಿಂದ 23ರವರೆಗೆ ಒಂದು ಪ್ಯಾಕೇಜ್ ಇದ್ದರೆ ಡಿಸೆಂಬರ್ 14ರಿಂದ 18ರವರೆಗೆ ಇನ್ನೊಂದು ಪ್ಯಾಕೇಜ್ ಇರಲಿದೆ.

ಅಯೋಧ್ಯೆ, ಪ್ರಯಾಗರಾಜ್ ಮತ್ತು ವಾರಾಣಸಿ ಏರ್ ಟೂರ್ ಪ್ಯಾಕೇಜ್ ಬುಕ್ ಮಾಡುವುದು ಹೇಗೆ?: ಆಸಕ್ತ ಪ್ರಯಾಣಿಕರು IRCTC ಯ ಅಧಿಕೃತ ವೆಬ್‌ಸೈಟ್ ಮೂಲಕ ಈ ಕೈಗೆಟುಕುವ ಏರ್ ಟೂರ್ ಪ್ಯಾಕೇಜ್ ಅನ್ನು ಬುಕ್ ಮಾಡಬಹುದು. ಈ ಪ್ಯಾಕೇಜ್ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Mon, 7 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ