AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCTC: ನವರಾತ್ರಿಗೆ IRCTCನಿಂದ ಆಫರ್, ಸೆ.30ರಿಂದ ವೈಷ್ಣೋ ದೇವಿ ದೇಗುಲಕ್ಕೆ ವಿಶೇಷ ರೈಲು ಸೇವೆ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಬುಧವಾರದಂದು ಕತ್ರಾ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಲು ಯೋಜನೆ ಹಾಕಿರುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ನವರಾತ್ರಿ ವಿಶೇಷ ಪ್ರವಾಸಿ ರೈಲು ಪ್ರಾರಂಭಿಸುವುದಾಗಿ ಘೋಷಿಸಿದೆ.

IRCTC: ನವರಾತ್ರಿಗೆ IRCTCನಿಂದ ಆಫರ್, ಸೆ.30ರಿಂದ ವೈಷ್ಣೋ ದೇವಿ ದೇಗುಲಕ್ಕೆ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2022 | 2:52 PM

Share

ದೆಹಲಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಬುಧವಾರದಂದು ಕತ್ರಾ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಲು ಯೋಜನೆ ಹಾಕಿರುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ನವರಾತ್ರಿ ವಿಶೇಷ ಪ್ರವಾಸಿ ರೈಲು ಪ್ರಾರಂಭಿಸುವುದಾಗಿ ಘೋಷಿಸಿದೆ. ಭಾರತ್ ಗೌರವ್ ಯೋಜನೆಯ ಅಡಿಯಲ್ಲಿ ಎರಡು ವಿಶೇಷ ಎಸಿ ರೈಲುಗಳು ಕಾರ್ಯನಿರ್ವಹಿಸಲಿವೆ, ಇದನ್ನು ಸೆಪ್ಟೆಂಬರ್ 30 ರಿಂದ IRCTC ನಡೆಸಲಿದೆ. ವರದಿಗಳ ಪ್ರಕಾರ, ಭಾರತೀಯ ರೈಲ್ವೇ ಈ ವಿಶೇಷ ಪ್ರವಾಸದ ಪ್ಯಾಕೇಜ್‌ನ ಭಾಗವಾಗಿ ಭಕ್ತರ ವಸತಿ, ಆಹಾರ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಹ ಮಾಡಿದೆ.

ರೈಲುಗಳು ಸೆಪ್ಟೆಂಬರ್ 25 – ಸೆಪ್ಟೆಂಬರ್ 29 ಮತ್ತು ಸೆಪ್ಟೆಂಬರ್ 30 – ಅಕ್ಟೋಬರ್ 4 ರ ನಡುವೆ ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಎರಡು ಟ್ರಿಪ್‌ಗಳನ್ನು ಯೋಜನೆ ಮಾಡಲಾಗಿದೆ. ಭಾರತೀಯ ರೈಲ್ವೇಯು ಭಕ್ತರಿಗಾಗಿ ಟೂರ್ ಪ್ಯಾಕೇಜ್ ಅನ್ನು ಪರಿಚಯಿಸಿದೆ, ಇದರಲ್ಲಿ ಭಕ್ತರಿಗೆ ಉಳಿದುಕೊಳ್ಳಲು, ಇದರ ಜೊತೆಗೆ ಆಹಾರ ಮತ್ತು ಇತರ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಪ್ರವಾಸದ ಪ್ಯಾಕೇಜ್ 5 ದಿನ ಕಾಲ ಯೋಜನೆ ಮಾಡಿಕೊಂಡಿದೆ.

ಐದು ದಿನಗಳ ಪ್ರಯಾಣದಲ್ಲಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಲ್ಲದೆ, ಆಧುನಿಕ ಕಿಚನ್ ಜೊತೆಗೆ ಕಾರಿನಲ್ಲಿ ಪ್ರಯಾಣಿಸುವವರಿಗೆ ಸಸ್ಯಾಹಾರಿ ಆಹಾರವನ್ನು ನೀಡಲಾಗುತ್ತದೆ.

ಭಕ್ತರಿಗೆ ಪ್ರವಾಸದ ಪ್ಯಾಕೇಜ್ ವಿವರಗಳು

IRCTC ಯ ಅಧಿಕೃತ ವೆಬ್‌ಸೈಟ್ ಪ್ರಕಾರ: ನವರಾತ್ರಿ ವಿಶೇಷ ಮಾತಾ ವೈಷ್ಣೋ ದೇವಿ ಯಾತ್ರಾ ಪ್ರವಾಸ ಪ್ಯಾಕೇಜ್ ನಾಲ್ಕು ರಾತ್ರಿ ಮತ್ತು ಐದು ಹಗಲು ಇರುತ್ತದೆ. ಹೊಸದಿಲ್ಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಲ್ಲಿ ಪ್ರಯಾಣ ಆರಂಭವಾಗಲಿದೆ. ಈ ಪ್ಯಾಕೇಜ್ ಅನ್ನು ಮೊದಲು ಬಂದವರಿಗೆ ಮೊದಲು ಸೇವೆಯ ಆಧಾರದ ಮೇಲೆ ಕಾಯ್ದಿರಿಸಲಾಗುತ್ತದೆ. ವೈಷ್ಣೋ ದೇವಿ ಪ್ರವಾಸ ಹೋಗುವವರಿಗೆ IRCTC ಪ್ರವಾಸೋದ್ಯಮದ ಅಧಿಕೃತ ವೆಬ್‌ಸೈಟ್ ಮೂಲಕ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ IRCTCನ www.irctctourism.com ಅಧಿಕೃತ ಪ್ರವಾಸೋದ್ಯಮ ವೆಬ್‌ಸೈಟ್‌ಗೆ ಭೇಟಿ ನೀಡಿ.

Published On - 2:52 pm, Wed, 14 September 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!