AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRCTC: ನವರಾತ್ರಿಗೆ IRCTCನಿಂದ ಆಫರ್, ಸೆ.30ರಿಂದ ವೈಷ್ಣೋ ದೇವಿ ದೇಗುಲಕ್ಕೆ ವಿಶೇಷ ರೈಲು ಸೇವೆ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಬುಧವಾರದಂದು ಕತ್ರಾ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಲು ಯೋಜನೆ ಹಾಕಿರುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ನವರಾತ್ರಿ ವಿಶೇಷ ಪ್ರವಾಸಿ ರೈಲು ಪ್ರಾರಂಭಿಸುವುದಾಗಿ ಘೋಷಿಸಿದೆ.

IRCTC: ನವರಾತ್ರಿಗೆ IRCTCನಿಂದ ಆಫರ್, ಸೆ.30ರಿಂದ ವೈಷ್ಣೋ ದೇವಿ ದೇಗುಲಕ್ಕೆ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2022 | 2:52 PM

Share

ದೆಹಲಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಬುಧವಾರದಂದು ಕತ್ರಾ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡಲು ಯೋಜನೆ ಹಾಕಿರುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ನವರಾತ್ರಿ ವಿಶೇಷ ಪ್ರವಾಸಿ ರೈಲು ಪ್ರಾರಂಭಿಸುವುದಾಗಿ ಘೋಷಿಸಿದೆ. ಭಾರತ್ ಗೌರವ್ ಯೋಜನೆಯ ಅಡಿಯಲ್ಲಿ ಎರಡು ವಿಶೇಷ ಎಸಿ ರೈಲುಗಳು ಕಾರ್ಯನಿರ್ವಹಿಸಲಿವೆ, ಇದನ್ನು ಸೆಪ್ಟೆಂಬರ್ 30 ರಿಂದ IRCTC ನಡೆಸಲಿದೆ. ವರದಿಗಳ ಪ್ರಕಾರ, ಭಾರತೀಯ ರೈಲ್ವೇ ಈ ವಿಶೇಷ ಪ್ರವಾಸದ ಪ್ಯಾಕೇಜ್‌ನ ಭಾಗವಾಗಿ ಭಕ್ತರ ವಸತಿ, ಆಹಾರ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಹ ಮಾಡಿದೆ.

ರೈಲುಗಳು ಸೆಪ್ಟೆಂಬರ್ 25 – ಸೆಪ್ಟೆಂಬರ್ 29 ಮತ್ತು ಸೆಪ್ಟೆಂಬರ್ 30 – ಅಕ್ಟೋಬರ್ 4 ರ ನಡುವೆ ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಎರಡು ಟ್ರಿಪ್‌ಗಳನ್ನು ಯೋಜನೆ ಮಾಡಲಾಗಿದೆ. ಭಾರತೀಯ ರೈಲ್ವೇಯು ಭಕ್ತರಿಗಾಗಿ ಟೂರ್ ಪ್ಯಾಕೇಜ್ ಅನ್ನು ಪರಿಚಯಿಸಿದೆ, ಇದರಲ್ಲಿ ಭಕ್ತರಿಗೆ ಉಳಿದುಕೊಳ್ಳಲು, ಇದರ ಜೊತೆಗೆ ಆಹಾರ ಮತ್ತು ಇತರ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಪ್ರವಾಸದ ಪ್ಯಾಕೇಜ್ 5 ದಿನ ಕಾಲ ಯೋಜನೆ ಮಾಡಿಕೊಂಡಿದೆ.

ಐದು ದಿನಗಳ ಪ್ರಯಾಣದಲ್ಲಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಲ್ಲದೆ, ಆಧುನಿಕ ಕಿಚನ್ ಜೊತೆಗೆ ಕಾರಿನಲ್ಲಿ ಪ್ರಯಾಣಿಸುವವರಿಗೆ ಸಸ್ಯಾಹಾರಿ ಆಹಾರವನ್ನು ನೀಡಲಾಗುತ್ತದೆ.

ಭಕ್ತರಿಗೆ ಪ್ರವಾಸದ ಪ್ಯಾಕೇಜ್ ವಿವರಗಳು

IRCTC ಯ ಅಧಿಕೃತ ವೆಬ್‌ಸೈಟ್ ಪ್ರಕಾರ: ನವರಾತ್ರಿ ವಿಶೇಷ ಮಾತಾ ವೈಷ್ಣೋ ದೇವಿ ಯಾತ್ರಾ ಪ್ರವಾಸ ಪ್ಯಾಕೇಜ್ ನಾಲ್ಕು ರಾತ್ರಿ ಮತ್ತು ಐದು ಹಗಲು ಇರುತ್ತದೆ. ಹೊಸದಿಲ್ಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಲ್ಲಿ ಪ್ರಯಾಣ ಆರಂಭವಾಗಲಿದೆ. ಈ ಪ್ಯಾಕೇಜ್ ಅನ್ನು ಮೊದಲು ಬಂದವರಿಗೆ ಮೊದಲು ಸೇವೆಯ ಆಧಾರದ ಮೇಲೆ ಕಾಯ್ದಿರಿಸಲಾಗುತ್ತದೆ. ವೈಷ್ಣೋ ದೇವಿ ಪ್ರವಾಸ ಹೋಗುವವರಿಗೆ IRCTC ಪ್ರವಾಸೋದ್ಯಮದ ಅಧಿಕೃತ ವೆಬ್‌ಸೈಟ್ ಮೂಲಕ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ IRCTCನ www.irctctourism.com ಅಧಿಕೃತ ಪ್ರವಾಸೋದ್ಯಮ ವೆಬ್‌ಸೈಟ್‌ಗೆ ಭೇಟಿ ನೀಡಿ.

Published On - 2:52 pm, Wed, 14 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ