AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು
ಶ್ರೀ ರಾಮಾಯಣ ಯಾತ್ರೆ
ನಯನಾ ರಾಜೀವ್
|

Updated on: Mar 16, 2023 | 11:04 AM

Share

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ಶ್ರೀ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ. ಈ ರೈಲು ದೆಹಲಿಯ ಸಫ್ದರ್​ಜಂಗ್ ನಿಲ್ದಾಣದಿಂದ ಪ್ರಾರಂಭವಾಗಲಿದೆ, ಪ್ರಯಾಣಿಕರು ಗಾಜಿಯಾಬಾದ್, ಅಲಿಗಢ, ತುಂಡ್ಲಾ, ಇಟಾವಾ, ಕಾನ್ಪುರ ಮತ್ತು ಲಕ್ನೋದಿಂದ ರೈಲಿನಲ್ಲಿ ಪ್ರಯಾಣವನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ.

ರೈಲು ಭೇಟಿ ನೀಡುವ ಸ್ಥಳ ಆಯೋಧ್ಯ: ರಾಮ ಜನ್ಮಭೂಮಿ ಮಂದಿರ, ಹನುಮಾನ್ ಗರ್ಹಿ, ಸರಯೂ ಘಾಟ್

ನಂದೀಗ್ರಾಮ:ಭಾರತ್ ಹನುಮಾನ್ ಮಂದಿರ,ಭಾರತ್ ಕುಂದ್

ಜನಕಪುರ: ರಾಮ ಜಾನಕಿ ಮಂದಿರ

ಸೀತಾಮರಾಹಿ: ಜಾನಕಿ ಮಂದಿರ ಹಾಗೂ ಪುನರ್ವ ಧಾಮ

ಬುಕ್ಸರ್ : ರಾಮ ರೇಖಾ ಘಾಟ್, ರಾಮೇಶ್ವರ ನಾಥ್ ದೇವಸ್ಥಾನ

ವಾರಾಣಸಿ : ತುಳಸಿ ಮಾನಸ ದೇವಸ್ಥಾನ, ಸಂಕಟ್ ಮೋಚನ್ ದೇವಸ್ಥಾನ, ವಿಶ್ವನಾಥ ದೇವಸ್ಥಾನ, ಗಂಗಾ ಆರತಿ

ಸೀತಾ ಸಮಾಹಿತಿ ಸ್ಥಳ್, ಸೀತಾಮರಾಹಿ: ಸೀತಾ ಮಾತಾ ದೇವಸ್ಥಾನ

ಪ್ರಯಾಗರಾಜ್ : ಭಾರದ್ವಾಜ ಆಶ್ರಮ, ಗಂಗಾ ಯಮುನಾ ಸಂಗಮ, ಹನುಮಾನ ದೇವಸ್ಥಾನ

ಶ್ರಿಂಗ್ವೆರ್ಪುರ್: ಶ್ರಿಂಗಿ ರಿಷಿ ಸಮಾಧಿ, ಶಾಂತಾ ದೇವಿ ದೇವಸ್ಥಾನ, ರಾಮಚೌರ

ಚಿತ್ರಕೂಟ: ಗುಪ್ತ ಗೋದಾವರಿ, ರಾಮ ಘಾಟ್, ಸತಿ ಅನಸೂಯ ದೇವಸ್ಥಾನ

ನಾಸಿಕ್ : ತ್ರಯಂಬಕೇಶ್ವರ ದೇವಸ್ಥಾನ, ಪಂಚವಟಿ, ಸೀತಾಗುಹ, ಕಲರಾಮ ಮಂದಿರ

ಹಂಪಿ: ಅಂಜನಾದ್ರಿ ಬೆಟ್ಟ, ವಿರೂಪಾಕ್ಷ ದೇವಸ್ಥಾನ, ವಿಠಲ ಮಂದಿರ

ರಾಮೇಶ್ವರಂ : ರಾಮನಾಥ ಸ್ವಾಮಿ ಮಂದಿರ, ಧನುಷ್ಕೋಡಿ

ಬದ್ರಾಚಲಂ: ಶ್ರೀ ಸೀತಾ ರಾಮಚಂದ್ರಸ್ವಾಮಿ ಮಂದಿರ, ಆಂಜನೇಯ ಸ್ವಾಮಿ ಮಂದಿರ

ನಾಗ್ಪುರ: ರಾಮತೇಕ್ ಕೋಟೆ ಹಾಗೂ ಮಂದಿರ

ಈ ರೈಲು ಎಸಿ ಫರ್ಸ್ಟ್​ ಹಾಗೂ ಎಸಿ ಸೆಕೆಂಡ್ ಕೋಚ್​ಗಳನ್ನು ಹೊಂದಿರುತ್ತದೆ. ಒಟ್ಟು 156 ಪ್ರಯಾಣಿಕರು ಶ್ರೀರಾಮಾಯಣ ಯಾತ್ರೆಗೆ ತೆರಳಲು ಸಾಧ್ಯವಾಗುತ್ತದೆ. ಈ ರೈಲುಗಳು ಎರಡು ರೈಲು ರೆಸ್ಟೋರೆಂಟ್​ಗಳನ್ನು ಸಹ ಒಳಗೊಂಡಿರುತ್ತದೆ. 7,500 ಕಿ,ಮೀ ನ ಪ್ರಯಾಣದಲ್ಲಿ ಹಲವು ಸೌಲಭ್ಯಗಳಿರುತ್ತವೆ. ಯಾತ್ರೆಯ ವೇಳೆ ಭಕ್ತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಎಸಿ ಫರ್ಸ್ಟ್​ ಕೋಚ್​ನ ಪ್ರತಿ ಪ್ರಯಾಣಿಕರಿಗೆ 1.68 ಲಕ್ಷ ರೂ, ಕ್ಯಾಬಿನ್​ಗೆ 1.46 ಲಕ್ಷ ರೂ, ಎಸಿ ಸೆಕೆಂಡ್ ಕೋಚ್​ಗೆ 1.14 ಲಕ್ಷ ರೂ ನೀಡಬೇಕಾಗುತ್ತದೆ. ಈ ಪ್ರಯಾಣದ ಬುಕಿಂಗ್​ ಅನ್ನು ಐಆರ್​ಸಿಟಿಸಿಯ ವೆಬ್​ಸೈಟ್​ನಲ್ಲಿ ಮಾಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ