AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು
ಶ್ರೀ ರಾಮಾಯಣ ಯಾತ್ರೆ
ನಯನಾ ರಾಜೀವ್
|

Updated on: Mar 16, 2023 | 11:04 AM

Share

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ಶ್ರೀ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ. ಈ ರೈಲು ದೆಹಲಿಯ ಸಫ್ದರ್​ಜಂಗ್ ನಿಲ್ದಾಣದಿಂದ ಪ್ರಾರಂಭವಾಗಲಿದೆ, ಪ್ರಯಾಣಿಕರು ಗಾಜಿಯಾಬಾದ್, ಅಲಿಗಢ, ತುಂಡ್ಲಾ, ಇಟಾವಾ, ಕಾನ್ಪುರ ಮತ್ತು ಲಕ್ನೋದಿಂದ ರೈಲಿನಲ್ಲಿ ಪ್ರಯಾಣವನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ.

ರೈಲು ಭೇಟಿ ನೀಡುವ ಸ್ಥಳ ಆಯೋಧ್ಯ: ರಾಮ ಜನ್ಮಭೂಮಿ ಮಂದಿರ, ಹನುಮಾನ್ ಗರ್ಹಿ, ಸರಯೂ ಘಾಟ್

ನಂದೀಗ್ರಾಮ:ಭಾರತ್ ಹನುಮಾನ್ ಮಂದಿರ,ಭಾರತ್ ಕುಂದ್

ಜನಕಪುರ: ರಾಮ ಜಾನಕಿ ಮಂದಿರ

ಸೀತಾಮರಾಹಿ: ಜಾನಕಿ ಮಂದಿರ ಹಾಗೂ ಪುನರ್ವ ಧಾಮ

ಬುಕ್ಸರ್ : ರಾಮ ರೇಖಾ ಘಾಟ್, ರಾಮೇಶ್ವರ ನಾಥ್ ದೇವಸ್ಥಾನ

ವಾರಾಣಸಿ : ತುಳಸಿ ಮಾನಸ ದೇವಸ್ಥಾನ, ಸಂಕಟ್ ಮೋಚನ್ ದೇವಸ್ಥಾನ, ವಿಶ್ವನಾಥ ದೇವಸ್ಥಾನ, ಗಂಗಾ ಆರತಿ

ಸೀತಾ ಸಮಾಹಿತಿ ಸ್ಥಳ್, ಸೀತಾಮರಾಹಿ: ಸೀತಾ ಮಾತಾ ದೇವಸ್ಥಾನ

ಪ್ರಯಾಗರಾಜ್ : ಭಾರದ್ವಾಜ ಆಶ್ರಮ, ಗಂಗಾ ಯಮುನಾ ಸಂಗಮ, ಹನುಮಾನ ದೇವಸ್ಥಾನ

ಶ್ರಿಂಗ್ವೆರ್ಪುರ್: ಶ್ರಿಂಗಿ ರಿಷಿ ಸಮಾಧಿ, ಶಾಂತಾ ದೇವಿ ದೇವಸ್ಥಾನ, ರಾಮಚೌರ

ಚಿತ್ರಕೂಟ: ಗುಪ್ತ ಗೋದಾವರಿ, ರಾಮ ಘಾಟ್, ಸತಿ ಅನಸೂಯ ದೇವಸ್ಥಾನ

ನಾಸಿಕ್ : ತ್ರಯಂಬಕೇಶ್ವರ ದೇವಸ್ಥಾನ, ಪಂಚವಟಿ, ಸೀತಾಗುಹ, ಕಲರಾಮ ಮಂದಿರ

ಹಂಪಿ: ಅಂಜನಾದ್ರಿ ಬೆಟ್ಟ, ವಿರೂಪಾಕ್ಷ ದೇವಸ್ಥಾನ, ವಿಠಲ ಮಂದಿರ

ರಾಮೇಶ್ವರಂ : ರಾಮನಾಥ ಸ್ವಾಮಿ ಮಂದಿರ, ಧನುಷ್ಕೋಡಿ

ಬದ್ರಾಚಲಂ: ಶ್ರೀ ಸೀತಾ ರಾಮಚಂದ್ರಸ್ವಾಮಿ ಮಂದಿರ, ಆಂಜನೇಯ ಸ್ವಾಮಿ ಮಂದಿರ

ನಾಗ್ಪುರ: ರಾಮತೇಕ್ ಕೋಟೆ ಹಾಗೂ ಮಂದಿರ

ಈ ರೈಲು ಎಸಿ ಫರ್ಸ್ಟ್​ ಹಾಗೂ ಎಸಿ ಸೆಕೆಂಡ್ ಕೋಚ್​ಗಳನ್ನು ಹೊಂದಿರುತ್ತದೆ. ಒಟ್ಟು 156 ಪ್ರಯಾಣಿಕರು ಶ್ರೀರಾಮಾಯಣ ಯಾತ್ರೆಗೆ ತೆರಳಲು ಸಾಧ್ಯವಾಗುತ್ತದೆ. ಈ ರೈಲುಗಳು ಎರಡು ರೈಲು ರೆಸ್ಟೋರೆಂಟ್​ಗಳನ್ನು ಸಹ ಒಳಗೊಂಡಿರುತ್ತದೆ. 7,500 ಕಿ,ಮೀ ನ ಪ್ರಯಾಣದಲ್ಲಿ ಹಲವು ಸೌಲಭ್ಯಗಳಿರುತ್ತವೆ. ಯಾತ್ರೆಯ ವೇಳೆ ಭಕ್ತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಎಸಿ ಫರ್ಸ್ಟ್​ ಕೋಚ್​ನ ಪ್ರತಿ ಪ್ರಯಾಣಿಕರಿಗೆ 1.68 ಲಕ್ಷ ರೂ, ಕ್ಯಾಬಿನ್​ಗೆ 1.46 ಲಕ್ಷ ರೂ, ಎಸಿ ಸೆಕೆಂಡ್ ಕೋಚ್​ಗೆ 1.14 ಲಕ್ಷ ರೂ ನೀಡಬೇಕಾಗುತ್ತದೆ. ಈ ಪ್ರಯಾಣದ ಬುಕಿಂಗ್​ ಅನ್ನು ಐಆರ್​ಸಿಟಿಸಿಯ ವೆಬ್​ಸೈಟ್​ನಲ್ಲಿ ಮಾಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ