AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ.

Ramayana Yatra: ಏಪ್ರಿಲ್ 7ರಂದು ಆರಂಭವಾಗಲಿದೆ 18 ದಿನಗಳ ರಾಮಾಯಣ ಯಾತ್ರೆ: ಟಿಕೆಟ್ ಬುಕಿಂಗ್ ಶುರು
ಶ್ರೀ ರಾಮಾಯಣ ಯಾತ್ರೆ
ನಯನಾ ರಾಜೀವ್
|

Updated on: Mar 16, 2023 | 11:04 AM

Share

ಭಾರತೀಯ ರೈಲ್ವೆ(Indian Railway) ಇಲಾಖೆಯು ಏಪ್ರಿಲ್ 7 ರಿಂದ ಶ್ರೀ ರಾಮಾಯಣ ಯಾತ್ರೆಯನ್ನು ಆರಂಭಿಸಲಿದ್ದು, 18 ದಿನಗಳ ಕಾಲ ನಡೆಯಲಿದೆ. ಈ ಪ್ರಯಾಣದಲ್ಲಿ ಶ್ರೀರಾಮನಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡಲಾಗುವುದು, ರಾಮಾಯಣ ಯಾತ್ರೆಯ ಮೊದಲ ನಿಲ್ದಾಣ ಅಯೋಧ್ಯೆಯಾಗಿರಲಿದೆ. ಈ ರೈಲು ದೆಹಲಿಯ ಸಫ್ದರ್​ಜಂಗ್ ನಿಲ್ದಾಣದಿಂದ ಪ್ರಾರಂಭವಾಗಲಿದೆ, ಪ್ರಯಾಣಿಕರು ಗಾಜಿಯಾಬಾದ್, ಅಲಿಗಢ, ತುಂಡ್ಲಾ, ಇಟಾವಾ, ಕಾನ್ಪುರ ಮತ್ತು ಲಕ್ನೋದಿಂದ ರೈಲಿನಲ್ಲಿ ಪ್ರಯಾಣವನ್ನು ಪ್ರಾರಂಭಿಸಲು ಸಾಧ್ಯವಾಗುತ್ತದೆ.

ರೈಲು ಭೇಟಿ ನೀಡುವ ಸ್ಥಳ ಆಯೋಧ್ಯ: ರಾಮ ಜನ್ಮಭೂಮಿ ಮಂದಿರ, ಹನುಮಾನ್ ಗರ್ಹಿ, ಸರಯೂ ಘಾಟ್

ನಂದೀಗ್ರಾಮ:ಭಾರತ್ ಹನುಮಾನ್ ಮಂದಿರ,ಭಾರತ್ ಕುಂದ್

ಜನಕಪುರ: ರಾಮ ಜಾನಕಿ ಮಂದಿರ

ಸೀತಾಮರಾಹಿ: ಜಾನಕಿ ಮಂದಿರ ಹಾಗೂ ಪುನರ್ವ ಧಾಮ

ಬುಕ್ಸರ್ : ರಾಮ ರೇಖಾ ಘಾಟ್, ರಾಮೇಶ್ವರ ನಾಥ್ ದೇವಸ್ಥಾನ

ವಾರಾಣಸಿ : ತುಳಸಿ ಮಾನಸ ದೇವಸ್ಥಾನ, ಸಂಕಟ್ ಮೋಚನ್ ದೇವಸ್ಥಾನ, ವಿಶ್ವನಾಥ ದೇವಸ್ಥಾನ, ಗಂಗಾ ಆರತಿ

ಸೀತಾ ಸಮಾಹಿತಿ ಸ್ಥಳ್, ಸೀತಾಮರಾಹಿ: ಸೀತಾ ಮಾತಾ ದೇವಸ್ಥಾನ

ಪ್ರಯಾಗರಾಜ್ : ಭಾರದ್ವಾಜ ಆಶ್ರಮ, ಗಂಗಾ ಯಮುನಾ ಸಂಗಮ, ಹನುಮಾನ ದೇವಸ್ಥಾನ

ಶ್ರಿಂಗ್ವೆರ್ಪುರ್: ಶ್ರಿಂಗಿ ರಿಷಿ ಸಮಾಧಿ, ಶಾಂತಾ ದೇವಿ ದೇವಸ್ಥಾನ, ರಾಮಚೌರ

ಚಿತ್ರಕೂಟ: ಗುಪ್ತ ಗೋದಾವರಿ, ರಾಮ ಘಾಟ್, ಸತಿ ಅನಸೂಯ ದೇವಸ್ಥಾನ

ನಾಸಿಕ್ : ತ್ರಯಂಬಕೇಶ್ವರ ದೇವಸ್ಥಾನ, ಪಂಚವಟಿ, ಸೀತಾಗುಹ, ಕಲರಾಮ ಮಂದಿರ

ಹಂಪಿ: ಅಂಜನಾದ್ರಿ ಬೆಟ್ಟ, ವಿರೂಪಾಕ್ಷ ದೇವಸ್ಥಾನ, ವಿಠಲ ಮಂದಿರ

ರಾಮೇಶ್ವರಂ : ರಾಮನಾಥ ಸ್ವಾಮಿ ಮಂದಿರ, ಧನುಷ್ಕೋಡಿ

ಬದ್ರಾಚಲಂ: ಶ್ರೀ ಸೀತಾ ರಾಮಚಂದ್ರಸ್ವಾಮಿ ಮಂದಿರ, ಆಂಜನೇಯ ಸ್ವಾಮಿ ಮಂದಿರ

ನಾಗ್ಪುರ: ರಾಮತೇಕ್ ಕೋಟೆ ಹಾಗೂ ಮಂದಿರ

ಈ ರೈಲು ಎಸಿ ಫರ್ಸ್ಟ್​ ಹಾಗೂ ಎಸಿ ಸೆಕೆಂಡ್ ಕೋಚ್​ಗಳನ್ನು ಹೊಂದಿರುತ್ತದೆ. ಒಟ್ಟು 156 ಪ್ರಯಾಣಿಕರು ಶ್ರೀರಾಮಾಯಣ ಯಾತ್ರೆಗೆ ತೆರಳಲು ಸಾಧ್ಯವಾಗುತ್ತದೆ. ಈ ರೈಲುಗಳು ಎರಡು ರೈಲು ರೆಸ್ಟೋರೆಂಟ್​ಗಳನ್ನು ಸಹ ಒಳಗೊಂಡಿರುತ್ತದೆ. 7,500 ಕಿ,ಮೀ ನ ಪ್ರಯಾಣದಲ್ಲಿ ಹಲವು ಸೌಲಭ್ಯಗಳಿರುತ್ತವೆ. ಯಾತ್ರೆಯ ವೇಳೆ ಭಕ್ತರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

ಎಸಿ ಫರ್ಸ್ಟ್​ ಕೋಚ್​ನ ಪ್ರತಿ ಪ್ರಯಾಣಿಕರಿಗೆ 1.68 ಲಕ್ಷ ರೂ, ಕ್ಯಾಬಿನ್​ಗೆ 1.46 ಲಕ್ಷ ರೂ, ಎಸಿ ಸೆಕೆಂಡ್ ಕೋಚ್​ಗೆ 1.14 ಲಕ್ಷ ರೂ ನೀಡಬೇಕಾಗುತ್ತದೆ. ಈ ಪ್ರಯಾಣದ ಬುಕಿಂಗ್​ ಅನ್ನು ಐಆರ್​ಸಿಟಿಸಿಯ ವೆಬ್​ಸೈಟ್​ನಲ್ಲಿ ಮಾಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್