AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ, ಉತ್ತರಾಖಂಡದಲ್ಲಿ ರೈಲು ಹಳಿ ತಪ್ಪಿಸುವ ಯತ್ನ

ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬವನ್ನು ಅಡ್ಡವಾಗಿರಿಸಿ ರೈಲು ಹಳಿ ತಪ್ಪಿಸುವ ಪ್ರಯತ್ನ ವಿಫಲವಾಗಿದೆ. ಉತ್ತರ ಪ್ರದೇಶ ಉತ್ತರಾಖಂಡ ಗಡಿಯಲ್ಲಿರುವ ಬಿಲಾಸ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರ ಗ್ರಾಮದ ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬವೊಂದು ಪತ್ತೆಯಾಗಿದೆ.

ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ, ಉತ್ತರಾಖಂಡದಲ್ಲಿ ರೈಲು ಹಳಿ ತಪ್ಪಿಸುವ ಯತ್ನ
ರೈಲ್ವೆ ಹಳಿ
ನಯನಾ ರಾಜೀವ್
|

Updated on: Sep 20, 2024 | 11:50 AM

Share

ಉತ್ತರಾಖಂಡದಲ್ಲಿ ಕಿಡಿಗೇಡಿಗಳು ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ ಇರಿಸಿದ್ದರು. ಉತ್ತರ ಪ್ರದೇಶ ಉತ್ತರಾಖಂಡ ಗಡಿಯಲ್ಲಿರುವ ಬಿಲಾಸ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರ ಗ್ರಾಮದ ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬವೊಂದು ಪತ್ತೆಯಾಗಿದೆ.

ಲೋಕೊ ಪೈಲಟ್ ಈ ಕಂಬವನ್ನು ನೋಡಿ ಬ್ರೇಕ್ ಹಾಕಿದ್ದಾರೆ, ಇಲ್ಲದಿದ್ದರೆ ದೊಡ್ಡ ರೈಲು ಅಪಘಾತ ಸಂಭವಿಸುತ್ತಿತ್ತು. ಘಟನೆ ಕುರಿತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಅಧಿಕಾರಿಗಳು, ಪೊಲೀಸರು ಮತ್ತು ಜಿಆರ್‌ಪಿ ಸ್ಥಳಕ್ಕೆ ಆಗಮಿಸಿ ಪಿಲ್ಲರ್ ಅನ್ನು ಹಳಿಯಿಂದ ತೆಗೆದು ರೈಲನ್ನು ಕಳುಹಿಸಿದ್ದಾರೆ.

ರೈಲು ಸುಮಾರು 20 ನಿಮಿಷ ತಡವಾಗಿ ಪ್ರಯಾಣ ಆರಂಭಿಸಿತು. ಈ ಘಟನೆಯ ತನಿಖೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸಚಿವಾಲಯವೂ ವರದಿಯನ್ನು ಕೇಳಿದೆ. ರುದ್ರಪುರ ಬಿಲಾಸ್‌ಪುರ ಹೊರಠಾಣೆ ಉಸ್ತುವಾರಿ ಅಮಿತ್ ಕುಮಾರ್ ಘಟನೆಯನ್ನು ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್‌ ಅನ್ನು ಇರಿಸಿ, ಕಾಳಿಂದಿ ಎಕ್ಸ್‌ಪ್ರೆಸ್‌ ರೈಲನ್ನು ಹಳಿ ತಪ್ಪಿಸುವ ಪ್ರಯತ್ನವನ್ನು ದುಷ್ಕರ್ಮಿಗಳು ನಡೆಸಿದ್ದರು. ರೈಲು ಹಳಿಯ ಮೇಲೆ ಸಿಲಿಂಡರ್‌ ಇರುವುದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ತು ತುರ್ತು ಬ್ರೇಕ್‌ ಹಾಕಿದ್ದರಿಂದಾಗಿ ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿ ಹೋಗಿ ನೂರಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು.

ರಾಜಸ್ಥಾನದ ಅಜ್ಮೀರ್ ನಲ್ಲಿ ದುಷ್ಕರ್ಮಿಗಳು ರೈಲು ಹಳಿಗಳ ಮೇಲೆ ಸಿಮೆಂಟ್‌ ಬ್ಲಾಕ್‌ಗಳನ್ನು ಇರಿಸಿ, ರೈಲು ಹಳಿ ತಪ್ಪಿಸುವ ಯತ್ನ ನಡೆಸಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಅಜ್ಮೀರ್​ನ ಪಶ್ಚಿಮ ಮೀಸಲು ಸರಕು ಸಾಗಣೆ ಕಾರಿಡಾರ್‌ನ ರೈಲು ಹಳಿಗಳ ಮೇಲೆ ದೊಡ್ಡ ಗಾತ್ರದ ಎರಡು ಸಿಮೆಂಟ್‌ ಬ್ಲಾಕ್‌ಗಳು ಪತ್ತೆಯಾಗಿದ್ದವು. ಇದನ್ನು ಮೊದಲೇ ಇಲಾಖೆ ಸಿಬಂದಿ ಗಮನಿಸಿ, ರೈಲು ಹಳಿಗಳಿಂದ ತೆರವುಗೊಳಿಸಿದ್ದರಿಂದಾಗಿ ಇಲ್ಲೂ ಭಾರೀ ಅಪಘಾತವೊಂದು ತಪ್ಪಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​