ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ

ದೆಹಲಿಯ ಮನೆಯಲ್ಲಿ ಐಆರ್‌ಎಸ್ ಅಧಿಕಾರಿಯ 22 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ, ಮೊಬೈಲ್ ಚಾರ್ಜರ್​​ ವೈರ್​ನಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಈ ಕೊಲೆ ನಡೆದಾಗ ಆಕೆಯ ಪೋಷಕರು ಜಿಮ್‌ನಲ್ಲಿದ್ದರು. ದಕ್ಷಿಣ ದೆಹಲಿಯಲ್ಲಿ ಐಆರ್‌ಎಸ್ ಅಧಿಕಾರಿಯ ಮಗಳು ಕೊಲೆಯಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಈ ಹತ್ಯೆಯ ಹಿಂದೆ ಐಆರ್​ಎಸ್ ಅಧಿಕಾರಿಯ ಮನೆಯ ಮಾಜಿ ಕೆಲಸಗಾರನ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.

ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ
Girl Murder
Image Credit source: iStock

Updated on: Apr 22, 2026 | 4:41 PM

ನವದೆಹಲಿ, ಏಪ್ರಿಲ್ 22: ದೆಹಲಿಯ ಆದಾಯ ತೆರಿಗೆ ಇಲಾಖೆಯ (ಐಆರ್​ಎಸ್​) ಹಿರಿಯ ಅಧಿಕಾರಿಯೊಬ್ಬರ 22 ವರ್ಷದ ಮಗಳನ್ನು ಅವರ ಮನೆಯಲ್ಲಿಯೇ ಬರ್ಬರವಾಗಿ ಕೊಲೆ (Girl Killed) ಮಾಡಲಾಗಿದೆ. ಇಂದು ಬೆಳಿಗ್ಗೆ ದೆಹಲಿಯ ಅಮರ್ ಕಾಲೋನಿ ಪ್ರದೇಶದ ತನ್ನ ಮನೆಯಲ್ಲಿ ಆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಈ ವೇಳೆ ಐಆರ್​ಎಸ್​ ಅಧಿಕಾರಿ ಇದು ಪೊಲೀಸ್ ತನಿಖೆಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಗಳು ಪ್ರಕಾರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಘಟನೆ ನಡೆದಾಗ ಆ ಯುವತಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ಹೋಗಿದ್ದರು. ತನಿಖಾಧಿಕಾರಿಗಳು ಸುಮಾರು 6 ವಾರಗಳ ಹಿಂದೆ ಕೆಲಸದಿಂದ ತೆಗೆದುಹಾಕಲಾಗಿದ್ದ ಮಾಜಿ ಕೆಲಸಗಾರ ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.

ಆಗ್ನೇಯ ದೆಹಲಿಯ ಐಷಾರಾಮಿ ಪ್ರದೇಶವಾದ ಅಮರ್ ಕಾಲೋನಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ರಾಜಧಾನಿ ದೆಹಲಿಯ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮೃತ ಯುವತಿ 1997ರ ಬ್ಯಾಚ್‌ನ ಹಿರಿಯ ಐಆಅರ್​ಎಸ್ ಅಧಿಕಾರಿಯ ಮಗಳು. ಎಂಜಿನಿಯರಿಂಗ್ ಓದಿದ್ದ ಆಕೆ ಅಪ್ಪನಂತೆ ಆಫೀಸರ್ ಆಗಬೇಕೆಂಬ ಆಸೆಯಿಂದ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ಐಆರ್​ಎಸ್​ ಅಧಿಕಾರಿಯಾಗಿದ್ದರಿಂದ ಅವರ ಮನೆಗೆ ಭದ್ರತೆಯಿತ್ತು. ಆದರೂ ಆಕೆಯ ಮನೆಯೊಳಗೇ ನಡೆದಿರುವ ಈ ಅತ್ಯಾಚಾರ ಮತ್ತು ಕೊಲೆ ದೆಹಲಿಯನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ: ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್

ಕೊಲೆಗಾರ ಆ ಯುವತಿಗೆ ಚೇತರಿಸಿಕೊಳ್ಳಲು ಅವಕಾಶವನ್ನೇ ನೀಡಲಿಲ್ಲ ಎಂಬ ಅಂಶದಿಂದಲೇ ಅಪರಾಧದ ಕ್ರೌರ್ಯ ಎಷ್ಟಿತ್ತು ಎಂಬುದನ್ನು ಊಹಿಸಬಹುದು. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ಕೊಲೆಯಾಗುವ ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆ ಹೆಚ್ಚಾಗಿದೆ. ನಂತರ ಕೊಲೆಗಾರ ಮೊಬೈಲ್ ಫೋನ್ ಚಾರ್ಜರ್ ವೈರ್​​ನಿಂದ ಆಕೆಯ ಕುತ್ತಿಗೆ ಹಿಸುಕಿ ಕೊಂದಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ರಾಜಸ್ಥಾನದ ನಿವಾಸಿ ರಾಹುಲ್ ಎಂಬ ಮಾಜಿ ಕೆಲಸದಾಳು ಮೇಲೆ ಶಂಕೆ ವ್ಯಕ್ತವಾಗಿದೆ. ಸುಮಾರು 2 ತಿಂಗಳ ಹಿಂದೆ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾಹುಲ್ ಬೆಳಿಗ್ಗೆ 6ರ ಸುಮಾರಿಗೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದ. ರಾಹುಲ್ 8 ತಿಂಗಳಿನಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಸುಮಾರು 2 ತಿಂಗಳ ಹಿಂದೆ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ: ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು

ರಾಹುಲ್ ಗೃಹೋಪಯೋಗಿ ವಸ್ತುಗಳನ್ನು ಆರ್ಡರ್ ಮಾಡಲು ಬಳಸುವ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಕಾರಣಕ್ಕೆ ಆತನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಪೊಲೀಸರ ಪ್ರಕಾರ, ಬೆಳಿಗ್ಗೆ 6.30ರಿಂದ 7.30ರ ನಡುವೆ ಈ ಕೊಲೆ ನಡೆದಿದೆ. ದಿನವೂ ಈ ಸಮಯದಲ್ಲಿ ಐಆರ್‌ಎಸ್ ಅಧಿಕಾರಿ ತನ್ನ ಹೆಂಡತಿಯೊಂದಿಗೆ ಜಿಮ್‌ಗೆ ಹೋಗುತ್ತಿದ್ದರು. ಆ ಸಮಯದಲ್ಲಿ ಅವರ ಮಗಳು ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಇದು ರಾಹುಲ್‌ಗೆ ತಿಳಿದಿತ್ತು. ಮನೆಗೆ ಕೆಲಸದವರು ಬರುವ ಸಮಯ ಕೂಡ ಆತನಿಗೆ ತಿಳಿದಿತ್ತು. ಹೀಗಾಗಿ, ಅವನು ಪ್ಲಾನ್ ಮಾಡಿಯೇ ಅದೇ ಸಮಯಕ್ಕೆ ಬಂದು ಕೊಲೆ ಮಾಡಿದ್ದಾನೆ ಎಂಬ ಅನುಮಾನ ಪೊಲೀಸರದ್ದು. ಆ ವ್ಯಕ್ತಿ ಮನೆಯಿಂದ ಏನನ್ನಾದರೂ ಕದ್ದು ಪರಾರಿಯಾಗಿದ್ದಾನೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಆತನಿಗಾಗಿ ಹುಡುಕಾಟ ಮುಂದುವರೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆಗ್ನೇಯ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಆಗಮಿಸಿದವು. ಅತ್ಯಾಚಾರವನ್ನು ದೃಢೀಕರಿಸಲು ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us