AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಆರ್​ಎಸ್ ಅಧಿಕಾರಿಯ ಮಗಳ ಮೇಲೆ ಅತ್ಯಾಚಾರ, ಕೊಲೆ, ಆ ಅಕ್ಕ ಹಣ ಕೊಟ್ಟಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ಎಂದ ಆರೋಪಿ ರಾಹುಲ್

ದೆಹಲಿಯಲ್ಲಿ ನಡೆದ ಯುಪಿಎಸ್ಸಿ ಆಕಾಂಕ್ಷಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ. ಆರೋಪಿ ರಾಹುಲ್ ಮೀನಾ, ಹಣಕ್ಕಾಗಿ ಈ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮೃತ ಯುವತಿಯ ರಕ್ತಸಿಕ್ತ ಬೆರಳನ್ನು ಬಳಸಿ ಲಾಕರ್ ತೆರೆಯಲು ಯತ್ನಿಸಿದ್ದು ಆತನ ವಿಕೃತ ಮನಸ್ಥಿತಿಯನ್ನು ತೋರುತ್ತದೆ. ಈ ಹಿಂದೆ ಬೇರೆಡೆ ಲೈಂಗಿಕ ದೌರ್ಜನ್ಯ ಎಸಗಿ ಹಣಕ್ಕಾಗಿ ಬೆಟ್ಟಿಂಗ್ ಆಡಿದ್ದ ರಾಹುಲ್, ಯಾವುದೇ ಪಶ್ಚಾತ್ತಾಪವಿಲ್ಲದೆ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ.

ಐಆರ್​ಎಸ್ ಅಧಿಕಾರಿಯ ಮಗಳ ಮೇಲೆ ಅತ್ಯಾಚಾರ, ಕೊಲೆ, ಆ ಅಕ್ಕ ಹಣ ಕೊಟ್ಟಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ಎಂದ ಆರೋಪಿ ರಾಹುಲ್
ರಾಹುಲ್ Image Credit source: Aaj Tak
ನಯನಾ ರಾಜೀವ್
|

Updated on: Apr 24, 2026 | 2:29 PM

Share

ನವದೆಹಲಿ, ಏಪ್ರಿಲ್ 24: ದೆಹಲಿಯಲ್ಲಿ ನಡೆದ ಯುಪಿಎಸ್​ಸಿ ಆಕಾಂಕ್ಷಿಯ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿಚಾರಣೆ ವೇಳೆ ಆರೋಪಿ ರಾಹುಲ್ ಮೀನಾ ನೀಡುತ್ತಿರುವ ಹೇಳಿಕೆಗಳು ಆತನ ವಿಕೃತ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ರಾಹುಲ್ ಮೀನಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು, ಆ ಅಕ್ಕ ಹಣ ಕೊಟ್ಟಿದ್ದರೆ ಈ ರೀತಿ ಪರಿಸ್ಥಿತಿ ಬರುತ್ತಲೇ ಇರಲಿಲ್ಲ ಎಂದು ಆತ ಆ ಯುವತಿಯನ್ನು ಅಕ್ಕ ಎಂದು ಕರೆದಿದ್ದಾನೆ.

ದರೋಡೆ ಮಾಡುವ ಉದ್ದೇಶದಿಂದ ಬಂದಿದ್ದ ತನಗೆ, ಯುವತಿ ಪ್ರತಿರೋಧ ಒಡ್ಡಿದ್ದರಿಂದಲೇ ಈ ಕೃತ್ಯ ನಡೆದಿದೆ ಎಂದು ಆತ ವಾದಿಸಿದ್ದಾನೆ. ನಾನು ಹಣ ಮತ್ತು ಆಭರಣಕ್ಕಾಗಿ ಬಂದಿದ್ದೆ. ಆಕೆ ಕೂಗಾಡಲು ಶುರು ಮಾಡಿದಾಗ ದೀಪದಿಂದ ಹೊಡೆದೆ, ಆಗ ಆಕೆ ಪ್ರಜ್ಞೆ ತಪ್ಪಿದಳು ಎಂದು ಅವನು ವಿವರಿಸಿದ್ದಾನೆ.

ಮತ್ತಷ್ಟು ಓದಿ: ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು?

ಹತ್ಯೆಯ ನಂತರದ ಘಟನೆ ಮತ್ತಷ್ಟು ಭಯಾನಕವಾಗಿವೆ. ಯುವತಿಯ ಕತ್ತು ಹಿಸುಕಿ ಕೊಂದ ನಂತರ, ಆರೋಪಿ ಆಕೆಯನ್ನು ಕೆಳಮಹಡಿಗೆ ಎಳೆದುಕೊಂಡು ಹೋಗಿದ್ದಾನೆ. ಹಣದ ಹಪಾಹಪಿಯಿಂದಾಗಿ ಆತ ಮೃತ ಯುವತಿಯ ರಕ್ತಸಿಕ್ತ ಬೆರಳನ್ನು ಲಾಕರ್‌ನ ಸ್ಕ್ಯಾನರ್‌ಗೆ ಒತ್ತಿ ಅದನ್ನು ತೆರೆಯಲು ಪ್ರಯತ್ನಿಸಿದ್ದಾನೆ. ಆದರೆ ಯುವತಿ ಅಷ್ಟರಲ್ಲೇ ಮೃತಪಟ್ಟಿದ್ದರಿಂದ ಅದು ಸಾಧ್ಯವಾಗಲಿಲ್ಲ. ನಂತರ ಸ್ಕ್ರೂಡ್ರೈವರ್‌ನಿಂದ ಲಾಕರ್ ಒಡೆದು ಆಭರಣಗಳನ್ನು ದೋಚಿದ್ದಾನೆ.

ದೆಹಲಿಗೆ ಬರುವ ಮುನ್ನವೇ ರಾಹುಲ್ ಅಲ್ವಾರ್‌ನಲ್ಲಿ ತನ್ನ ಸ್ನೇಹಿತನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮೊಬೈಲ್ ಕದ್ದಿದ್ದ. ಪತ್ತೆಹಚ್ಚುವುದನ್ನು ತಡೆಯಲು ಮೊಬೈಲ್‌ಗಳನ್ನು ಮಾರಿ 6,000 ರೂ.ಗೆ ಕ್ಯಾಬ್ ಬಾಡಿಗೆಗೆ ಪಡೆದು ದೆಹಲಿಗೆ ಬಂದಿದ್ದ. ಆ ಹಣದ ಒಂದು ಭಾಗವನ್ನು ಆತ ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿದ್ದ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯಲ್ಲಿರುವ ಮೀನಾ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸುತ್ತಿಲ್ಲ. ಅ ಮನೆಯವರು ನನಗೆ ದೇವರಂತೆ ಇದ್ದರು, ತುಂಬಾ ಒಳ್ಳೆಯವರು. ಆದರೆ ನನಗೆ ಹಣ ಬೇಕಿತ್ತು, ಈ ಘಟನೆ ಬಳಿಕ ತಾನು ಸಿಕ್ಕಿ ಹಾಕಿಕೊಳ್ಳುತ್ತೇನೆ ಎಂದು ತನಗೆ ತಿಳಿದಿತ್ತು, ಆದರೆ ಹಣವನ್ನು ತನ್ನ ಕುಟುಂಬದವರಿಗೆ ತಲುಪಿಸುವ ಅಗತ್ಯ ಹೆಚ್ಚಿತ್ತು ಎಂದು ಹೇಳಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ