AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಮುಕ್ತ ಭಾರತದ ಭರದಲ್ಲಿ.. ಕಾಂಗ್ರೆಸ್‌ಯುಕ್ತ ಬಿಜೆಪಿಯಾಗುತ್ತಿದೆಯಾ ಬಿಜೆಪಿ?

ನವದೆಹಲಿ: ಭಾರತೀಯ ಜನತಾ ಪಾರ್ಟಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಅಡೆತಡೆಯಿಲ್ಲದೆ ಮುನ್ನುಗ್ಗುತ್ತಿದೆ. ಅದ್ರಲ್ಲೂ ‘ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುವ ಘೋಷವಾಕ್ಯದೊಂದಿಗೆ ಕಾಂಗ್ರೆಸ್‌ ಪಕ್ಷದ ನಿರ್ನಾಮವೇ ಗುರಿ ಎಂಬಂತೆ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದಲ್ಲದೇ, ಅದರ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ. ಆದ್ರೆ ಇದು ಈಗ ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆಯಾ ಎಂಬ ಸಂದೇಹಗಳು ಮೂಡುತ್ತಿವೆ. ಇದಕ್ಕೆ ಕಾರಣ ಪಕ್ಷದ ಮೂವರು ಪ್ರಮುಖ ನಾಯಕರ ಅಕಾಲಿಕ ನಿಧನ ಹಾಗೂ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ಯಾದಾಗಿನಿಂದ ತೆರವಾದ ಬಿಜೆಪಿಯ […]

ಕಾಂಗ್ರೆಸ್‌ ಮುಕ್ತ ಭಾರತದ ಭರದಲ್ಲಿ.. ಕಾಂಗ್ರೆಸ್‌ಯುಕ್ತ ಬಿಜೆಪಿಯಾಗುತ್ತಿದೆಯಾ ಬಿಜೆಪಿ?
Guru
| Edited By: |

Updated on: Aug 29, 2020 | 1:45 PM

Share

ನವದೆಹಲಿ: ಭಾರತೀಯ ಜನತಾ ಪಾರ್ಟಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಅಡೆತಡೆಯಿಲ್ಲದೆ ಮುನ್ನುಗ್ಗುತ್ತಿದೆ. ಅದ್ರಲ್ಲೂ ‘ಕಾಂಗ್ರೆಸ್‌ ಮುಕ್ತ ಭಾರತ’ ಎನ್ನುವ ಘೋಷವಾಕ್ಯದೊಂದಿಗೆ ಕಾಂಗ್ರೆಸ್‌ ಪಕ್ಷದ ನಿರ್ನಾಮವೇ ಗುರಿ ಎಂಬಂತೆ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದಲ್ಲದೇ, ಅದರ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.

ಆದ್ರೆ ಇದು ಈಗ ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆಯಾ ಎಂಬ ಸಂದೇಹಗಳು ಮೂಡುತ್ತಿವೆ. ಇದಕ್ಕೆ ಕಾರಣ ಪಕ್ಷದ ಮೂವರು ಪ್ರಮುಖ ನಾಯಕರ ಅಕಾಲಿಕ ನಿಧನ ಹಾಗೂ ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿ ಯಾದಾಗಿನಿಂದ ತೆರವಾದ ಬಿಜೆಪಿಯ ಕೇಂದ್ರ ಸಂಸದೀಯ ಬೋರ್ಡ್‌ನ ನಾಲ್ಕು ಸ್ಥಾನಗಳು ಇನ್ನೂ ಭರ್ತಿಯಾಗದೇ ಇರೋದು.

ಈ ಬಗ್ಗೆ ಈಗ ಬಿಜೆಪಿಯ ಆಂತರಿಕ ವಲಯದಲ್ಲಿ ಅಪಸ್ವರ ಮತ್ತು ಕಳವಳ ಕೇಳಿ ಬರಲಾರಂಭಿಸಿವೆ. ಅನಂತಕುಮಾರ್‌, ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌ ಮತ್ತು ವೆಂಕಯ್ಯ ನಾಯ್ಡು ಅವರಿಂದ ತೆರವಾದ ಸ್ಥಾನಗಳಿಗೆ ಹಲವಾರು ದಿನಗಳಾದ್ರೂ ಯಾರನ್ನೂ ನೇಮಕ ಮಾಡದೇ ಇರೋದು ಆಕಾಂಕ್ಷಿಗಳಲ್ಲಿ ಚಡಪಡಿಕೆ ಶುರುವಾಗುವಂತೆ ಮಾಡಿದೆ.

ಅಷ್ಟೇ ಅಲ್ಲ ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮತ್ತು ಬಿಜೆಪಿಯ ಸಂಸದೀಯ ಬೋರ್ಡ್‌ಗೆ ನೇಮಕ ಮಾಡುವಾಗ ಕಾಂಗ್ರೆಸ್‌ನಿಂದ ಬಂದಿರುವ ಹಿರಿಯ ನಾಯಕರಿಗೆ ಮಣೆ ಹಾಕಲಿದ್ದಾರೆ ಎನ್ನುವ ಗುಸುಗುಸು ಮಾಹಿತಿ.

ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್‌ನಿಂದ ಬಂದ ಜ್ಯೋತಿರಾದಿತ್ಯ ಸಿಂದಿಯಾ ಕೇಂದ್ರ ಸಂಪುಟಕ್ಕೆ ಸೇರುತ್ತಾರೆ ಎನ್ನಲಾಗುತ್ತಿದೆ. ಹಾಗೇನೇ ಆಸ್ಸಾಂನ ಹೀಮಂತ್‌ ಬಿಸ್ವ ಶರ್ಮಾ ಅಲ್ಲಿನ ಮುಖ್ಯಮಂತ್ರಿಗಿಂತ ಪ್ರಬಲವಾಗಿ ಬೆಳೆದು ಇಡೀ ಈಶಾನ್ಯ ರಾಜ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಹೀಗಾಗಿ ಕಟ್ಟಾ ಬಿಜಿಪಿ ನಾಯಕರು ಈಗ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಹೋಗಿ ‘ಕಾಂಗ್ರೆಸ್‌ಯುಕ್ತ ಬಿಜೆಪಿ’ಯಾಗಿದ್ದೇವೆ ಎಂದು ಖಾಸಗಿಯಾಗಿ ಅವಲತ್ತುಕೊಳ್ಳುತ್ತಿದ್ದಾರೆ. ಹೀಗೆ ಆದರೆ ಪ್ರಮುಖ ಸ್ಥಾನಗಳಲ್ಲಿ ಅವರೇ ನೇಮಕವಾಗುತ್ತಾರೆ. ಹಾಗಾದ್ರೆ ಮೊದಲಿನಿಂದಲೂ ಬಿಜಿಪಿಯಲ್ಲಿರುವ ನಾವು ಏನು ಮಾಡೋದು ಎಂಬ ಆತಂಕ ಈ ನಾಯಕರಲ್ಲಿ ಶುರುವಾಗಿದೆ ಎನ್ನಲಾಗ್ತಿದೆ.

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ