AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ರೈಲುಗಳಲ್ಲಿ ಉಚಿತ ನೀರಿನ ಬಾಟಲಿ ನೀಡುವುದಿಲ್ಲವೇ? ರೈಲ್ವೆ ಇಲಾಖೆ ಸ್ಪಷ್ಟನೆ

ಭಾರತೀಯ ರೈಲ್ವೆ ಇಲಾಖೆ ರೈಲುಗಳಲ್ಲಿ ಉಚಿತ ನೀರಿನ ಬಾಟಲಿಗಳನ್ನು ನೀಡುವ ಬಗ್ಗೆ ಸಂಪೂರ್ಣವಾದ ಸ್ಪಷ್ಟನೆ ನೀಡಿದೆ. ರೈಲುಗಳಲ್ಲಿ ಉಚಿತ ನೀರಿನ ಬಾಟಲಿಗಳ ಬಗ್ಗೆ ಪ್ರಯಾಣಿಕರಲ್ಲಿ ಗೊಂದಲವಿದೆ. ವಂದೇ ಭಾರತ್, ಶತಾಬ್ದಿ ಮತ್ತು ರಾಜಧಾನಿ ಎಕ್ಸ್​​ಪ್ರೆಸ್​​ನಂತಹ ಪ್ರೀಮಿಯಂ ರೈಲುಗಳಲ್ಲಿ ರೈಲ್ವೆ ಉಚಿತ ನೀರಿನ ಬಾಟಲಿಗಳನ್ನು ಒದಗಿಸುತ್ತಿದೆ. ಆದರೆ, ಆಹಾರವಿಲ್ಲದ ಆಯ್ಕೆಯನ್ನು ಹೊಂದುವ ಪ್ರಯಾಣಿಕರಿಗೆ ನೀರಿನ ಬಾಟಲಿ ನೀಡುವುದಿಲ್ಲ ಎಂಬ ಪ್ರಚಾರ ನಡೆಯುತ್ತಿದೆ.

ಭಾರತೀಯ ರೈಲುಗಳಲ್ಲಿ ಉಚಿತ ನೀರಿನ ಬಾಟಲಿ ನೀಡುವುದಿಲ್ಲವೇ? ರೈಲ್ವೆ ಇಲಾಖೆ ಸ್ಪಷ್ಟನೆ
Train
ಸುಷ್ಮಾ ಚಕ್ರೆ
|

Updated on: Dec 10, 2025 | 8:49 PM

Share

ನವದೆಹಲಿ, ಡಿಸೆಂಬರ್ 10: ಕೊವಿಡ್-19 ನಂತರ ಭಾರತೀಯ ರೈಲ್ವೆ (Indian Railway) ಇಲಾಖೆ ರೈಲುಗಳಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ವಿಶೇಷವಾಗಿ ಆಹಾರ ಸೇವೆಗಳ ವಿಷಯದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಹಿಂದೆ, ಪ್ರೀಮಿಯಂ ರೈಲುಗಳಲ್ಲಿ ರೈಲು ಟಿಕೆಟ್ ಜೊತೆಗೆ ಆಹಾರವನ್ನು ನೀಡಲಾಗುತ್ತಿತ್ತು. ಆದರೆ, ಕೊರೊನಾ ನಂತರ ಪ್ರಯಾಣಿಕರು ಟಿಕೆಟ್ ಜೊತೆಗೆ ಆಹಾರವನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಬೇಕಾಗುತ್ತದೆ. ನಿಮಗೆ ಆಹಾರ ಬೇಕೇ? ಅಥವಾ ಬೇಡವೇ? ಎಂದು ಐಆರ್‌ಸಿಟಿಸಿ ಪ್ರಯಾಣಿಕರ ಆಯ್ಕೆಗೆ ಬಿಟ್ಟಿದೆ.

ರಾಜಧಾನಿ ಎಕ್ಸ್​​ಪ್ರೆಸ್, ಶತಾಬ್ದಿ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್‌ನಂತಹ ಪ್ರೀಮಿಯಂ ರೈಲುಗಳಲ್ಲಿ ಈ ಆಯ್ಕೆಯನ್ನು ಜಾರಿಗೆ ತರಲಾಗುತ್ತಿದೆ. ನೀವು ಆಹಾರ ಆಯ್ಕೆಯನ್ನು ಆರಿಸಿದರೆ ಟಿಕೆಟ್ ಜೊತೆಗೆ ಅದಕ್ಕೆ ಹಣವನ್ನು ವಿಧಿಸಲಾಗುತ್ತದೆ. ನೀವು ಆಹಾರ ಬೇಡವೆಂದು ಹೇಳಿದರೆ ಆಹಾರದ ಆಯ್ಕೆಯನ್ನು ಟಿಕೆಟ್ ದರದಿಂ​ದ ತೆಗೆದುಹಾಕಲಾಗುತ್ತದೆ.

ಇದನ್ನೂ ಓದಿ: ಇದು ಭಾರತದ ಅತ್ಯಂತ ನಿಧಾನವಾಗಿ ಚಲಿಸುವ ರೈಲು: ಸೈಕಲ್‌ಗಿಂತ ನಿಧಾನವಾಗಿ ಓಡುವ ಟ್ರೈನ್ ಎಲ್ಲಿದೆ ಗೊತ್ತಾ?

ಆಹಾರ ಆಯ್ಕೆಯನ್ನು ಪ್ರಯಾಣಿಕರಿಗೆ ಬಿಡುವುದರಿಂದ ಪ್ರೀಮಿಯಂ ರೈಲುಗಳಲ್ಲಿ ಉಚಿತ ಲೀಟರ್ ನೀರಿನ ಬಾಟಲಿಯನ್ನು ನೀಡಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪ್ರಯಾಣಿಕರಲ್ಲಿ ಗೊಂದಲವಿದೆ. IRCTC ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಊಟದ ಆಯ್ಕೆಯನ್ನು ಆರಿಸಿದರೂ ಅಥವಾ ಇಲ್ಲದಿದ್ದರೂ ಪ್ರಯಾಣಿಕರಿಗೆ ರೈಲಿನಲ್ಲಿ ಉಚಿತ ನೀರಿನ ಬಾಟಲಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಲ್ಲಿ ಪ್ರೀಮಿಯಂ ರೈಲುಗಳಿಗೆ ಟಿಕೆಟ್ ಬುಕ್ ಮಾಡುವಾಗ ಆಹಾರದ ಆಯ್ಕೆಯನ್ನು ಆಯ್ಕೆ ಮಾಡಲು ಸೂಚಿಸಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಇದೆಲ್ಲಾ ಸುದ್ದಿಗಳು ಸುಳ್ಳು. ಆಹಾರದ ಆಯ್ಕೆಯನ್ನು ತೆಗೆದುಹಾಕಿಲ್ಲ ಎಂದು ಹೇಳಿದರು. ಬುಕಿಂಗ್ ಪುಟದಲ್ಲಿ ಅದರ ಸ್ಥಾನವನ್ನು ಬದಲಾಯಿಸುವುದರಿಂದ ಪ್ರಯಾಣಿಕರು ಗೊಂದಲಕ್ಕೊಳಗಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಚಿತ ಊಟ ನೀಡುವ ಭಾರತದ ಏಕೈಕ ರೈಲು ಎಲ್ಲಿದೆ ಗೊತ್ತಾ?

ಆಹಾರವಿಲ್ಲದ ಪ್ರಯಾಣ ಎಂಬ ಆಯ್ಕೆ ಎಲ್ಲಿದೆ?: -ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನೀವು ಬುಕ್ ಮಾಡಲು ಬಯಸುವ ರೈಲನ್ನು ಆಯ್ಕೆ ಮಾಡಿ

– ಪ್ರಯಾಣಿಕರ ವಿವರಗಳ ಪುಟಕ್ಕೆ ಹೋಗಿ

– ಅಡುಗೆ ಸೇವೆಗೆ ಹೋಗಿ ಮತ್ತು ಆಹಾರ ಬೇಡ ಎಂಬ ಆಯ್ಕೆಯನ್ನು ಆರಿಸಿ.

-ನಂತರ ನಿಮ್ಮ ಬುಕಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ