ನೇತಾರರು ಪಾಲ್ಗೊಳ್ಳುವ ರಾಷ್ಟ್ರೀಯ ಹಬ್ಬಗಳಲ್ಲಿ ಸಮವಸ್ತ್ರ ಧರಿಸಿದ ಶಾಲಾ ಮಕ್ಕಳು ಭಾಗವಹಿಸುವುದು ಸರಿನಾ? ತಪ್ಪಾ?

|

Updated on: Apr 19, 2024 | 4:06 PM

ಗಣ್ಯರ ರಾಜಕೀಯ ಕಾರ್ಯಕ್ರಮಗಳನ್ನು ವೀಕ್ಷಿಸಲು ಮಕ್ಕಳು ಬರುವುದರಲ್ಲಿ ತಪ್ಪಿಲ್ಲ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಹೀಗಾಗಿ ಅವರು ಕೂಡ ಗಣ್ಯರ ಮಾತುಗಳನ್ನು ಕೇಳಿಸಿಕೊಳ್ಳುವುದರಲ್ಲಿ ತಪ್ಪೇನಿದೆ ಎಂಬುದು ಇಂದಿರಾನಗರದ ಸರ್ಕಾರಿ ಶಾಲೆಯ ಶಿಕ್ಷಕಿ ಆಶಾ ಅವರ ಸ್ಪಷ್ಟ ಅಭಿಪ್ರಾಯ. ಆದರೆ ಮಕ್ಕಳು ಅವರಾಗಿಯೇ ಇಷ್ಟಪಟ್ಟು ರಾಜಕೀಯ ಗಣ್ಯರನ್ನು ನೋಡಲು ಹೋಗುವುದರಲ್ಲಿ ತಪ್ಪಿಲ್ಲ. ಇದರಿಂದ ಅವರಿಗೆ ಸ್ಟೇಜ್ ಫಿಯರ್ ದೂರವಾಗುತ್ತೆ. ಭಾಷಣ ಮಾಡುವ ಕೌಶಲ್ಯ ಬೆಳೆಯುತ್ತೆ. ರಾಜಕಾರಣಿಗಳಿಂದ ಪ್ರೇರಣೆಗೊಂಡು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುತ್ತಾರೆ ಎಂದು ಸರ್ಕಾರಿ ಶಾಲೆಯ ಹಿರಿಯ ಶಿಕ್ಷಕ ಸತೀಶ್ ಬಾಬು ಆಶಿಸಿದ್ದಾರೆ.

ನೇತಾರರು ಪಾಲ್ಗೊಳ್ಳುವ ರಾಷ್ಟ್ರೀಯ ಹಬ್ಬಗಳಲ್ಲಿ ಸಮವಸ್ತ್ರ ಧರಿಸಿದ ಶಾಲಾ ಮಕ್ಕಳು ಭಾಗವಹಿಸುವುದು ಸರಿನಾ? ತಪ್ಪಾ?
ಪ್ರಧಾನಿ, ಸಿಎಂ, ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುವ ರಾಷ್ಟ್ರೀಯ ಹಬ್ಬದ ದಿನಗಳಲ್ಲಿ ಸಮವಸ್ತ್ರ ಧರಿಸಿದ ಶಾಲಾ ಮಕ್ಕಳು ಭಾಗವಹಿಸುವುದು ಸರಿನಾ? ತಪ್ಪಾ?
Follow us on

ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾರ್ಚ್ 18ರಂದು ಬಿಜೆಪಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಸಮವಸ್ತ್ರ ಧರಿಸಿದ್ದ ಶಾಲಾ ಮಕ್ಕಳು ಭಾಗವಹಿಸಿದ್ದರು. ಈ ವಿಚಾರ ಚರ್ಚೆಗೆ ಗ್ರಾಸವೊದಗಿಸಿದೆ. ಸದ್ಯ ಈಗ ಇದಕ್ಕೆ ತೆರೆ ಬಿದ್ದಿದೆ. ಶಾಲಾ ಮಕ್ಕಳು ಸಮವಸ್ತ್ರದಲ್ಲಿ ಹಾಜರಿದ್ದರು ಎಂಬ ಕಾರಣಕ್ಕಾಗಿ ಸ್ಥಳೀಯ ಶಾಲೆಯ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕೊಯಮತ್ತೂರು ಪೊಲೀಸರ ಕ್ರಮವನ್ನು ಮದ್ರಾಸ್ ಹೈಕೋರ್ಟ್ ಪ್ರಶ್ನಿಸಿದೆ. ಪ್ರಧಾನಿ, ಸಿಎಂ, ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುವ ರಾಷ್ಟ್ರೀಯ ಹಬ್ಬದ ದಿನಗಳಲ್ಲಿ ಸಮವಸ್ತ್ರ ಧರಿಸಿದ ಶಾಲಾ ಮಕ್ಕಳು ಭಾಗವಹಿಸಿದರೆ ತಪ್ಪಿಲ್ಲ ಎಂದಿದೆ. ಹಾಗಾದ್ರೆ ಯಾವುದೇ ರಾಜಕೀಯ ಸಮಾರಂಭದಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಬಹುದಾ? ಇಷ್ಟಕ್ಕೂ ಮಕ್ಕಳು ಯಾಕೆ ಪಾಲ್ಗೊಳ್ಳಬಾರದು? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ನೋಡೋಣ ಬನ್ನಿ. ಮಾರ್ಚ್ 18 ರಂದು ಬಿಜೆಪಿ ಆಯೋಜಿಸಿದ್ದ ರೋಡ್ ಶೋಗೆ ವಿದ್ಯಾರ್ಥಿಗಳನ್ನು ಸಮವಸ್ತ್ರದಲ್ಲಿ ಕಳುಹಿಸಿದ ಆರೋಪದ ಮೇಲೆ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 75 ಸೇರಿದಂತೆ ಹಲವು ಆರೋಪಗಳಡಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೊಯಮತ್ತೂರಿನ ಶಾಲೆಯೊಂದರ ಪ್ರಾಂಶುಪಾಲರಾದ ಎಸ್ ಪುಕುಲ್ ವಡಿವು ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡಿನ ಪ್ರವಾಸದ ವೇಳೆ ಕೊಯಂಬತ್ತೂರಿನಲ್ಲಿ ಆಯೋಜಿಸಿದ್ದ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಕೊಯಂಬತ್ತೂರು ಜಿಲ್ಲಾಧಿಕಾರಿ ಕ್ರಾಂತಿ ಕುಮಾರ್ ಪಟಿ ಅವರು ಈ...

Published On - 1:35 pm, Thu, 18 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ