AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​​ 20ಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಬಹುಮತ ಸಾಬೀತು ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್​​​ 20ಕ್ಕೆ ಲೋಕಸಭೆಯಲ್ಲಿ ಬಹುಮತ ಸಾಬೀತು ಮಾಡುವ ಸಾಧ್ಯತೆ ಎಂದು ಹೇಳಲಾಗಿದೆ. ಈಗಾಗಲೇ ಮೋದಿ ನೇತೃತ್ವದಲ್ಲಿ ಎನ್​​ಡಿಎ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದ್ದು, ಮೋದಿ ಜತೆಗೆ 72 ಸಚಿವರು ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಇದೀಗ ಮೋದಿ ಅವರು ಲೋಕಸಭೆಯಲ್ಲಿ ತಮ್ಮ ಸರ್ಕಾರ ಬಲವನ್ನು ಸಾಬೀತು ಮಾಡಲಿದ್ದಾರೆ.

ಜೂನ್​​ 20ಕ್ಕೆ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಬಹುಮತ ಸಾಬೀತು ಸಾಧ್ಯತೆ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jun 11, 2024 | 3:57 PM

Share

ದೆಹಲಿ, ಜೂ.11: ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರು ಜೂನ್​​ 20ಕ್ಕೆ ಲೋಕಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗಾಗಲೇ ಮೋದಿ ನೇತೃತ್ವದಲ್ಲಿ ಎನ್​​ಡಿಎ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಾಗಿದೆ. ಭಾನುವಾರದಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ. ಇದರ ಜತೆಗೆ 72 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನೆನ್ನೆ (ಜೂ.9)  ಎಲ್ಲರಿಗೂ ಖಾತೆಯನ್ನು ಕೂಡ ನೀಡಿಲಾಗಿದೆ. ಇಂದು (ಜೂ.10) ಅನೇಕ ಸಚಿವರು ದೆಹಲಿ ಕಚೇರಿಗೆ ಬಂದು ಅಧಿಕೃತವಾಗಿ ಅಧಿಕಾರ ಸ್ವೀಕಾರಿಸಿದ್ದಾರೆ. ಇದರ ನಡುವೆ ಮೋದಿಗೆ ಮತ್ತೊಂದು ಅಗ್ನಿ ಪರೀಕ್ಷೆ ಮುಂದಾಗಿದೆ.

ಇನ್ನು ಈ ದಿನದಂದು ಸ್ಪೀಕರ್​​ನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರು ಜೂನ್ 18 ಮತ್ತು 19 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಜೂನ್ 21 ರಂದು ರಾಷ್ಟ್ರಪತಿ ಭಾಷಣ ಮಾಡುತ್ತಾರೆ. ಪ್ರಧಾನಿ ಮೋದಿ ಅವರು ಜೂನ್​​ 20ಕ್ಕೆ ಒಂದು ಬಾರಿ ತಮ್ಮ ಬಲವನ್ನು ಸಾಬೀತು ಮಾಡಿದ್ರೆ, ಮುಂದಿನ ಆರು ತಿಂಗಳು ಸರ್ಕಾರ ಭದ್ರವಾಗಿರುತ್ತದೆ.

ಪ್ರಧಾನಿ ಮೋದಿ ಅವರು ಭಾನುವಾರ ಮೂರನೇ ಬಾರಿ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದರು. ಇನ್ನು ಇದರ ಜತೆಗೆ 72 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದರಲ್ಲಿ ಕರ್ನಾಟಕಕ್ಕೂ ದೊಡ್ಡ ಪಾಲು ಸಿಕ್ಕಿದೆ. ಕರ್ನಾಟಕದಿಂದ 5 ಜನ ಕೇಂದ್ರ ಮಂತ್ರಿಗಳಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಸ್ಟರ್​​ ಪ್ಲಾನ್: ಆಂಧ್ರದ ಪುರಂದೇಶ್ವರಿಗೆ ಲೋಕಸಭೆ ಸ್ಪೀಕರ್‌ ಹುದ್ದೆ? ಟಿಡಿಪಿಗೆ ತೃಪ್ತಿಯಾಗುವುದು ಖಂಡಿತ

ಇನ್ನು ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಹೇಳಿಕೊಳ್ಳುವಷ್ಟು ದೊಡ್ಡ ಸಾಧನೆ ಮಾಡಿಲ್ಲ. 240 ಸ್ಥಾನಗಳನ್ನು ಪಡೆದುಕೊಂಡು ತೃಪ್ತಿಪಟ್ಟಿದೆ. ಆದರೆ ಎನ್​​ಡಿಎ ಮೈತ್ರಿಕೂಟ ಒಟ್ಟು ಹೆಚ್ಚು ಸ್ಥಾನ ಪಡೆದಿದೆ. ಸರ್ಕಾರ ರಚನೆಗೆ 36 ಸ್ಥಾನಗಳು ಅಗತ್ಯ ಇದ್ದ ಕಾರಣ ಬಿಜೆಪಿ ಚಂದ್ರಬಾಬು ನಾಯ್ಡು ನೇತೃತ್ವದ ಡಿಟಿಪಿ ಹಾಗೂ ಬಿಹಾರ್​​​​ ಮುಖ್ಯಮಂತ್ರಿ ನೀತಿಶ್​​​ ಕುಮಾರ್​​ ಅವರ ಜೆಡಿಯು ಪಕ್ಷದ ಬೆಂಬಲ ಪಡೆದಿದ್ದಾರೆ. ಇದೀಗ ಈ ಮೈತ್ರಿಕೂಟದ ಬೆಂಬಲ ಮೋದಿ ಸರ್ಕಾರಕ್ಕೆ ಇದೆ ಎಂಬುದನ್ನು ಲೋಕಸಭೆಯಲ್ಲಿ ಜೂನ್​​ 20ಕ್ಕೆ ಸಾಬೀತು ಮಾಡುವ ಸಾಧ್ಯತೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:15 pm, Tue, 11 June 24

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ