AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atul Subhash: ನನ್ನ ಮೊಮ್ಮಗ ಬದುಕಿದ್ದಾನಾ ಇಲ್ಲವೋ ಎಂಬುದೂ ಗೊತ್ತಿಲ್ಲ: ಅತುಲ್ ತಂದೆ

ನನ್ನ ಮೊಮ್ಮಗ ಬದುಕಿದ್ದಾನಾ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಮೃತ ಟೆಕ್ಕಿ ಅತುಲ್ ಸುಭಾಷ್ ತಂದೆ ಪವನ್ ಕುಮಾರ್ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಅತುಲ್ ಸುಭಾಷ್ ಪತ್ನಿಯ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್ ಬರೆದಿಟ್ಟಿದ್ದಾರೆ ಹಾಗೆಯೇ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದರು. ಅತುಲ್ ಮಗನಿಗೆ ನಾಲ್ಕೂವರೆ ವರ್ಷವಾಗಿದ್ದು, 2021ರ ಬಳಿಕ ಮಗನ ಮುಖವನ್ನೇ ನಾನು ನೋಡಿಲ್ಲ, ಆತ ಹೇಗಿದ್ದಾನೆ ಎಂಬುದೂ ಮರೆತು ಹೋಗಿದೆ ಎಂದು ಡೆತ್​ನೋಟ್​ನಲ್ಲಿ ಬರೆದಿದ್ದರು.

Atul Subhash: ನನ್ನ ಮೊಮ್ಮಗ ಬದುಕಿದ್ದಾನಾ ಇಲ್ಲವೋ ಎಂಬುದೂ ಗೊತ್ತಿಲ್ಲ: ಅತುಲ್ ತಂದೆ
ಅತುಲ್ ಸುಭಾಷ್ Image Credit source: India Today
ನಯನಾ ರಾಜೀವ್
|

Updated on: Dec 15, 2024 | 2:39 PM

Share

ನನ್ನ ಮೊಮ್ಮಗ ಬದುಕಿದ್ದಾನಾ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಮೃತ ಟೆಕ್ಕಿ ಅತುಲ್ ಸುಭಾಷ್ ತಂದೆ ಪವನ್ ಕುಮಾರ್ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಅತುಲ್ ಸುಭಾಷ್ ಪತ್ನಿಯ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ 24 ಪುಟಗಳ ಡೆತ್​ನೋಟ್ ಬರೆದಿಟ್ಟಿದ್ದಾರೆ ಹಾಗೆಯೇ 90 ನಿಮಿಷಗಳ ವಿಡಿಯೋವನ್ನು ಕೂಡ ಮಾಡಿಟ್ಟಿದ್ದರು. ಅತುಲ್ ಮಗನಿಗೆ ನಾಲ್ಕೂವರೆ ವರ್ಷವಾಗಿದ್ದು, 2021ರ ಬಳಿಕ ಮಗನ ಮುಖವನ್ನೇ ನಾನು ನೋಡಿಲ್ಲ, ಆತ ಹೇಗಿದ್ದಾನೆ ಎಂಬುದೂ ಮರೆತು ಹೋಗಿದೆ ಎಂದು ಡೆತ್​ನೋಟ್​ನಲ್ಲಿ ಬರೆದಿದ್ದರು.

ಇದೀಗ ಅತುಲ್ ಪತ್ನಿ, ಆಕೆಯ ತಾಯಿ ಹಾಗೂ ಸಹೋದರನನ್ನು ಪೊಲೀಸರು ಬಂಧಿಸಿದ್ದು, ಮಗುವನ್ನು ನೋಡಿಕೊಳ್ಳುವವರ್ಯಾರು ಎನ್ನುವ ಪ್ರಶ್ನೆ ಉದ್ಭವವಾಗಿತ್ತು. ಆದರೆ ಸಾಯುವ ಮುನ್ನ ಟೆಕ್ಕಿ ತನ್ನ ಮಗುವನ್ನು ಪೋಷಕರಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಇದೀಗ ಅತುಲ್ ತಂದೆ ಪವನ್ ಕುಮಾರ್ ಮೋದಿ ಮಾತನಾಡಿ, ನನ್ನ ಮೊಮ್ಮಗ ಎಲ್ಲಿದ್ದಾನೆ, ಹೇಗಿದ್ದಾನೆ, ಬದುಕಿದ್ದಾನಾ ಇಲ್ಲವೋ ಎಂಬುದು ಕೂಡ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನನ್ನ ಮೊಮ್ಮಗನೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ, ಕೆಲವೊಮ್ಮೆ ವಿಡಿಯೋ ಕರೆ ಮಾಡಿ ಮಾತನಾಡಿದ್ದಿದೆ, ನಿಕಿತಾ ಕುಟುಂಬವು ತನ್ನ ಮೊಮ್ಮಗನ ಹೆಸರಿನಲ್ಲಿ ನಮ್ಮ ಮೇಲೆ ಹೊಸ ಪ್ರಕರಣವನ್ನು ದಾಖಲಿಸಿದೆ ಎಂದು ತಿಳಿದಾಗ ಮತ್ತಷ್ಟು ಆಘಾತವಾಗಿತ್ತು ಎಂದರು.

ಮತ್ತಷ್ಟು ಓದಿ: Atul Subhash Case: ತಂದೆ ಇಲ್ಲ, ತಾಯಿ, ಅಜ್ಜಿ, ಮಾವ ಎಲ್ಲರೂ ಜೈಲುಪಾಲು, ಮಗು ನೋಡಿಕೊಳ್ಳೋದ್ಯಾರು?

ಅತುಲ್ ಸುಭಾಷ್ ವಿರುದ್ಧ ನಿಕಿತಾ ವರದಕ್ಷಿಣೆ ಕಿರುಕುಳ ಸೇರಿ 9 ಪ್ರಕರಣಗಳನ್ನು ದಾಖಲಿಸಿದ್ದರು, ಅದರ ವಿಚಾರಣೆಗಾಗಿ ಅತುಲ್ ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ 40 ಬಾರಿ ಪ್ರಯಾಣಿಸಿದ್ದ ಎಂದು ಆತನ ಪೋಷಕರು ತಿಳಿಸಿದ್ದಾರೆ. 6 ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ, 3 ಪ್ರಕರಣಗಳು ಹೈಕೋರ್ಟ್​ನಲ್ಲಿವೆ.

ನಿಕಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮ್‌ನಿಂದ ಬಂಧಿಸಲಾಗಿದ್ದು, ಆಕೆಯ ತಾಯಿ ಮತ್ತು ಸಹೋದರನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಸುಭಾಷ್‌ನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಸುಭಾಷ್ ಅವರು ಡಿಸೆಂಬರ್ 9 ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು