AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​
ಐಎಸ್​​ ವಿಡಿಯೋದಲ್ಲಿ ಕಾಣಿಸಿಕೊಂಡವರು
TV9 Web
| Edited By: |

Updated on:Mar 27, 2022 | 5:36 PM

Share

ಇಸ್ಲಾಮಿಕ್​ ಸ್ಟೇಟ್​ ಭಯೋತ್ಪಾದಕ ಸಂಘಟನೆ (IS) ಇತ್ತೀಚೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಒಟ್ಟು ಮೂರು ಭಯೋತ್ಪಾದಕ ಘಟಕಗಳ (modules)ನ್ನು ಸಿದ್ಧಪಡಿಸಲಾಗುತ್ತಿದೆ. ಮೂರು ವಿಭಿನ್ನ ಗುಂಪುಗಳಲ್ಲಿ ಇಸ್ಲಾಮಿಕ್​ ಸ್ಟೇಟ್ಸ್​​​ನ ಸದಸ್ಯತ್ವ ತೆಗೆದುಕೊಳ್ಳಲಾಗುತ್ತಿದೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ. ಸುಮಾರು 4 ನಿಮಿಷಗಳ ವಿಡಿಯೋ ಇದಾಗಿದ್ದು, ಮಾರ್ಚ್​ 25ರಂದು ಟೆಲಿಗ್ರಾಂನಲ್ಲಿ ಬಿಡುಗಡೆಗೊಂಡಿದೆ. ಐಎಸ್​ ಹೋರಾಟಗಾರರು ಭಾರತದಲ್ಲಿ ಜಿಹಾದ್ ಪ್ರತಿಜ್ಞೆ ಮಾಡಿದ್ದಾಗಿಯೂ ಹೇಳಲಾಗಿದೆ.

ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಭಾರತದಲ್ಲಿನ ಐಎಸ್​ ಫೈಟರ್ಸ್​ ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ. ವಿಡಿಯೋ ಎಡಿಟ್​ ಮಾಡಲಾಗಿದ್ದು, ಕಣ್ಣುಗಳನ್ನು ಕೂಡ ಬ್ಲರ್​ ಮಾಡಲಾಗಿದೆ. ಅಷ್ಟೇ ಅಲ್ಲ ಮಾತನಾಡುತ್ತಿರುವವರ ಸ್ವರದಲ್ಲೂ ಬದಲಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯವರು ಟ್ರ್ಯಾಕ್​ ಮಾಡಬಾರದು, ಗುರುತು ಪತ್ತೆ ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಈ ವಿಧಾನಗಳನ್ನು ಐಎಸ್​ ಅನುಸರಿಸಿದೆ.  ಇನ್ನು ವಿಡಿಯೋದಲ್ಲಿ ಮಾತನಾಡಿದ ಐಎಸ್​ ಉಗ್ರ ಅಬು ತುರಬ್​ ಅಲ್​ ಹಿಂದಿ, ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ ಎಂದು ಹೇಳಿದ್ದಾನೆ.

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ. ಇವರೆಲ್ಲ ಐಎಸ್​​ ಸಂಘಟನೆಯೊಟ್ಟಿಗೆ ಸಂಪರ್ಕ ಹೊಂದಿರುವವರಾಗಿದ್ದರು. ಇವರನ್ನೆಲ್ಲ ಬಂಧಿಸುವ ಮೂಲಕ ಐಎಸ್​ ಯೋಜನೆಯನ್ನು ವಿಫಲಗೊಳಿಸಲಾಗುತ್ತಿದೆ.  ಮಾರ್ಚ್​ 25ರಂದು ಬಿಡುಗಡೆಯಾಗಿರುವ ವಿಡಿಯೋವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಪ್ರಕಾರ ಕಾಶ್ಮೀರದಲ್ಲಿಯೇ ಈ ವಿಡಿಯೋ ಚಿತ್ರೀಕರಣವಾಗಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಇದನ್ನು ಬಿಡುಗಡೆ ಮಾಡಿದ್ದು ಪಾಕಿಸ್ತಾನದಿಂದ ಎಂಬುದನ್ನು ಸೈಬರ್​ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Tilak Varma: ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಐಪಿಎಲ್​ಗೆ ಪದಾರ್ಪಣೆ ಮಾಡಿದ ಬಡ ಪ್ರತಿಭೆ

Published On - 5:32 pm, Sun, 27 March 22

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!