AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​
ಐಎಸ್​​ ವಿಡಿಯೋದಲ್ಲಿ ಕಾಣಿಸಿಕೊಂಡವರು
TV9 Web
| Updated By: Lakshmi Hegde|

Updated on:Mar 27, 2022 | 5:36 PM

Share

ಇಸ್ಲಾಮಿಕ್​ ಸ್ಟೇಟ್​ ಭಯೋತ್ಪಾದಕ ಸಂಘಟನೆ (IS) ಇತ್ತೀಚೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಒಟ್ಟು ಮೂರು ಭಯೋತ್ಪಾದಕ ಘಟಕಗಳ (modules)ನ್ನು ಸಿದ್ಧಪಡಿಸಲಾಗುತ್ತಿದೆ. ಮೂರು ವಿಭಿನ್ನ ಗುಂಪುಗಳಲ್ಲಿ ಇಸ್ಲಾಮಿಕ್​ ಸ್ಟೇಟ್ಸ್​​​ನ ಸದಸ್ಯತ್ವ ತೆಗೆದುಕೊಳ್ಳಲಾಗುತ್ತಿದೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ. ಸುಮಾರು 4 ನಿಮಿಷಗಳ ವಿಡಿಯೋ ಇದಾಗಿದ್ದು, ಮಾರ್ಚ್​ 25ರಂದು ಟೆಲಿಗ್ರಾಂನಲ್ಲಿ ಬಿಡುಗಡೆಗೊಂಡಿದೆ. ಐಎಸ್​ ಹೋರಾಟಗಾರರು ಭಾರತದಲ್ಲಿ ಜಿಹಾದ್ ಪ್ರತಿಜ್ಞೆ ಮಾಡಿದ್ದಾಗಿಯೂ ಹೇಳಲಾಗಿದೆ.

ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಭಾರತದಲ್ಲಿನ ಐಎಸ್​ ಫೈಟರ್ಸ್​ ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ. ವಿಡಿಯೋ ಎಡಿಟ್​ ಮಾಡಲಾಗಿದ್ದು, ಕಣ್ಣುಗಳನ್ನು ಕೂಡ ಬ್ಲರ್​ ಮಾಡಲಾಗಿದೆ. ಅಷ್ಟೇ ಅಲ್ಲ ಮಾತನಾಡುತ್ತಿರುವವರ ಸ್ವರದಲ್ಲೂ ಬದಲಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯವರು ಟ್ರ್ಯಾಕ್​ ಮಾಡಬಾರದು, ಗುರುತು ಪತ್ತೆ ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಈ ವಿಧಾನಗಳನ್ನು ಐಎಸ್​ ಅನುಸರಿಸಿದೆ.  ಇನ್ನು ವಿಡಿಯೋದಲ್ಲಿ ಮಾತನಾಡಿದ ಐಎಸ್​ ಉಗ್ರ ಅಬು ತುರಬ್​ ಅಲ್​ ಹಿಂದಿ, ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ ಎಂದು ಹೇಳಿದ್ದಾನೆ.

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ. ಇವರೆಲ್ಲ ಐಎಸ್​​ ಸಂಘಟನೆಯೊಟ್ಟಿಗೆ ಸಂಪರ್ಕ ಹೊಂದಿರುವವರಾಗಿದ್ದರು. ಇವರನ್ನೆಲ್ಲ ಬಂಧಿಸುವ ಮೂಲಕ ಐಎಸ್​ ಯೋಜನೆಯನ್ನು ವಿಫಲಗೊಳಿಸಲಾಗುತ್ತಿದೆ.  ಮಾರ್ಚ್​ 25ರಂದು ಬಿಡುಗಡೆಯಾಗಿರುವ ವಿಡಿಯೋವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಪ್ರಕಾರ ಕಾಶ್ಮೀರದಲ್ಲಿಯೇ ಈ ವಿಡಿಯೋ ಚಿತ್ರೀಕರಣವಾಗಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಇದನ್ನು ಬಿಡುಗಡೆ ಮಾಡಿದ್ದು ಪಾಕಿಸ್ತಾನದಿಂದ ಎಂಬುದನ್ನು ಸೈಬರ್​ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Tilak Varma: ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಐಪಿಎಲ್​ಗೆ ಪದಾರ್ಪಣೆ ಮಾಡಿದ ಬಡ ಪ್ರತಿಭೆ

Published On - 5:32 pm, Sun, 27 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್