AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ.

ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ; ವಿಡಿಯೋ ಬಿಡುಗಡೆ ಮಾಡಿದ ಐಎಸ್​
ಐಎಸ್​​ ವಿಡಿಯೋದಲ್ಲಿ ಕಾಣಿಸಿಕೊಂಡವರು
TV9 Web
| Edited By: |

Updated on:Mar 27, 2022 | 5:36 PM

Share

ಇಸ್ಲಾಮಿಕ್​ ಸ್ಟೇಟ್​ ಭಯೋತ್ಪಾದಕ ಸಂಘಟನೆ (IS) ಇತ್ತೀಚೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಒಟ್ಟು ಮೂರು ಭಯೋತ್ಪಾದಕ ಘಟಕಗಳ (modules)ನ್ನು ಸಿದ್ಧಪಡಿಸಲಾಗುತ್ತಿದೆ. ಮೂರು ವಿಭಿನ್ನ ಗುಂಪುಗಳಲ್ಲಿ ಇಸ್ಲಾಮಿಕ್​ ಸ್ಟೇಟ್ಸ್​​​ನ ಸದಸ್ಯತ್ವ ತೆಗೆದುಕೊಳ್ಳಲಾಗುತ್ತಿದೆ ಎಂದು ಈ ವಿಡಿಯೋದಲ್ಲಿ ಹೇಳಲಾಗಿದೆ. ಸುಮಾರು 4 ನಿಮಿಷಗಳ ವಿಡಿಯೋ ಇದಾಗಿದ್ದು, ಮಾರ್ಚ್​ 25ರಂದು ಟೆಲಿಗ್ರಾಂನಲ್ಲಿ ಬಿಡುಗಡೆಗೊಂಡಿದೆ. ಐಎಸ್​ ಹೋರಾಟಗಾರರು ಭಾರತದಲ್ಲಿ ಜಿಹಾದ್ ಪ್ರತಿಜ್ಞೆ ಮಾಡಿದ್ದಾಗಿಯೂ ಹೇಳಲಾಗಿದೆ.

ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಭಾರತದಲ್ಲಿನ ಐಎಸ್​ ಫೈಟರ್ಸ್​ ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ. ವಿಡಿಯೋ ಎಡಿಟ್​ ಮಾಡಲಾಗಿದ್ದು, ಕಣ್ಣುಗಳನ್ನು ಕೂಡ ಬ್ಲರ್​ ಮಾಡಲಾಗಿದೆ. ಅಷ್ಟೇ ಅಲ್ಲ ಮಾತನಾಡುತ್ತಿರುವವರ ಸ್ವರದಲ್ಲೂ ಬದಲಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯವರು ಟ್ರ್ಯಾಕ್​ ಮಾಡಬಾರದು, ಗುರುತು ಪತ್ತೆ ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಈ ವಿಧಾನಗಳನ್ನು ಐಎಸ್​ ಅನುಸರಿಸಿದೆ.  ಇನ್ನು ವಿಡಿಯೋದಲ್ಲಿ ಮಾತನಾಡಿದ ಐಎಸ್​ ಉಗ್ರ ಅಬು ತುರಬ್​ ಅಲ್​ ಹಿಂದಿ, ಭಾರತದಲ್ಲಿ ಹಲವು ಯುವಕರು ಇಸ್ಲಾಮಿಕ್ ಸ್ಟೇಟ್ಸ್​ ಸಂಘಟನೆ ಸೇರುತ್ತಿದ್ದಾರೆ ಎಂದು ಹೇಳಿದ್ದಾನೆ.

ಭಾರತದಲ್ಲಿ ಐಎಸ್ ಪ್ರಾಬಲ್ಯ ಕಡಿಮೆ ಮಾಡಲು ರಾಷ್ಟ್ರೀಯ ತನಿಖಾ ದಳ ಕಾರ್ಯಾಚರಣೆಯನ್ನೂ ತೀವ್ರಗೊಳಿಸಿದೆ. ಗುಪ್ತಚರ ದಳಗಳ ಅಧಿಕಾರಿಗಳೊಂದಿಗೆ ಸೇರಿ ಎನ್​ಐಎ, ಭಾರತದಲ್ಲಿ ಕಳೆದ 2ವರ್ಷಗಳಲ್ಲಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದೆ. ಇವರೆಲ್ಲ ಐಎಸ್​​ ಸಂಘಟನೆಯೊಟ್ಟಿಗೆ ಸಂಪರ್ಕ ಹೊಂದಿರುವವರಾಗಿದ್ದರು. ಇವರನ್ನೆಲ್ಲ ಬಂಧಿಸುವ ಮೂಲಕ ಐಎಸ್​ ಯೋಜನೆಯನ್ನು ವಿಫಲಗೊಳಿಸಲಾಗುತ್ತಿದೆ.  ಮಾರ್ಚ್​ 25ರಂದು ಬಿಡುಗಡೆಯಾಗಿರುವ ವಿಡಿಯೋವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಪ್ರಕಾರ ಕಾಶ್ಮೀರದಲ್ಲಿಯೇ ಈ ವಿಡಿಯೋ ಚಿತ್ರೀಕರಣವಾಗಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಇದನ್ನು ಬಿಡುಗಡೆ ಮಾಡಿದ್ದು ಪಾಕಿಸ್ತಾನದಿಂದ ಎಂಬುದನ್ನು ಸೈಬರ್​ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Tilak Varma: ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿ ನಿಂತು ಐಪಿಎಲ್​ಗೆ ಪದಾರ್ಪಣೆ ಮಾಡಿದ ಬಡ ಪ್ರತಿಭೆ

Published On - 5:32 pm, Sun, 27 March 22

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!