Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ

ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು ಎಂದು ಹೇಳಿದ್ದರು.

ಬಿಜೆಪಿಯಲ್ಲಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರಿದ್ದಾರೆ? ಮುಂದಿನ ಪ್ರಧಾನಿ ಯಾರು?-ನವಾಬ್​ ಮಲ್ಲಿಕ್​ ಪ್ರಶ್ನೆ
ನವಾಬ್​ ಮಲ್ಲಿಕ್​
Follow us
TV9 Web
| Updated By: Lakshmi Hegde

Updated on:Dec 13, 2021 | 8:22 AM

ಮುಂಬೈ:  ಕಾಂಗ್ರೆಸ್​, ಎನ್​ಸಿಪಿ ಮತ್ತು ಶಿವಸೇನೆ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತವೆ ಅಂತಾದರೆ ಕೇಂದ್ರದಲ್ಲೂ ಯಾಕೆ ಮಾಡಬಾರದು. 2024ರ ಲೋಕಸಭಾ ಚುನಾವಣೆಯಲ್ಲಿ ಕೂಡ ಈ ಪಕ್ಷಗಳು ಒಟ್ಟಾಗಬೇಕು. ಕೇಂದ್ರದಲ್ಲಿ ಶರದ್​ ಪವಾರ್​ ನೇತೃತ್ವದ ಸರ್ಕಾರ ರಚನೆ ಮಾಡಬೇಕು ಎಂದು ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಹೇಳಿದ್ದಾರೆ. 

ಶರದ್​ ಪವಾರ್​ 81ನೇ ಜನ್ಮನದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಏಳುವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ನರೇಂದ್ರ ಮೋದಿಯವರೇ ಪ್ರಧಾನಿಯಾಗಿದ್ದಾರೆ. ಆದರೆ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಅಭ್ಯರ್ಥಿ ಯಾರು? ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಅಲ್ಲಿ ಯಾರಿದ್ದಾರೆ? ಎಂದು ಪ್ರಶ್ನಿಸಿದರು.

ಇನ್ನು ಇದೇ ಸಮಾರಂಭದಲ್ಲಿ ಭಾಗವಹಿಸಿದ್ದ ಶಿವಸೇನೆ ಸಂಸದ ಸಂಜಯ್​ ರಾವತ್​ ಕೂಡ ಎನ್​ಸಿಪಿ ನಾಯಕ ಶರದ್​ ಪವಾರ್​ರನ್ನು ಹೊಗಳಿದ್ದಾರೆ. ಶರದ್​ ಪವಾರ್​ ಬಿಜೆಪಿಯನ್ನು ತುಂಬ ಚೆನ್ನಾಗಿ ಅರಿತುಕೊಂಡವರು. ಬಿಜೆಪಿ ಈ ದೇಶದ ಒಗ್ಗಟ್ಟನ್ನು ಎಂದಿಗೂ ಬಯಸುವುದಿಲ್ಲ ಎಂದು ಕಳೆದ 25ವರ್ಷಗಳ ಹಿಂದೆಯೇ ಅವರು ಹೇಳಿದ್ದಾರೆ. ಆದರೆ ನಮಗೆ ಈ ಸತ್ಯ 2019ರಲ್ಲಿ ಅರ್ಥವಾಯಿತು. ಬಿಜೆಪಿಯನ್ನು ಅರ್ಥ ಮಾಡಿಕೊಳ್ಳಲು ಶಿವಸೇನೆಗೆ ತುಂಬ ದಿನ ಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬ್ರೇಕಪ್ ನಂತರ ಇನ್ನೊಂದು ಸಂಬಂಧದ ನಿರೀಕ್ಷೆಯಲ್ಲಿದ್ದೀರಾ? ಈ ಸಲಹೆಗಳು ನಿಮಗಾಗಿ

Published On - 8:14 am, Mon, 13 December 21

ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ