AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆಯಲ್ಲಿ ಮೋದಿ- ಜೋ ಬಿಡೆನ್ ಫೋಟೊ ಟ್ವೀಟ್ ಮಾಡಿ ಇದು ನಿಜವೇ? ಎಂದು ಕೇಳಿದ ಸುಬ್ರಮಣಿಯನ್ ಸ್ವಾಮಿ; ನೆಟ್ಟಿಗರ ಉತ್ತರ ಹೀಗಿತ್ತು

ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಜೊ ಬಿಡೆನ್ ಜತೆಗಿರುವ ಫೋಟೊವನ್ನು ಟ್ವೀಟ್ ಮಾಡಿ, ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ ಕೇಳಿದ್ದಾರೆ

ಜಿ20 ಶೃಂಗಸಭೆಯಲ್ಲಿ ಮೋದಿ- ಜೋ ಬಿಡೆನ್ ಫೋಟೊ ಟ್ವೀಟ್ ಮಾಡಿ ಇದು ನಿಜವೇ? ಎಂದು ಕೇಳಿದ ಸುಬ್ರಮಣಿಯನ್ ಸ್ವಾಮಿ; ನೆಟ್ಟಿಗರ ಉತ್ತರ ಹೀಗಿತ್ತು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 22, 2022 | 2:33 PM

Share

ದೆಹಲಿ:ಈ ಫೋಟೋ ಮಾರ್ಫ್ ಮಾಡಿದ್ದೋ ಅಥವಾ ನಿಜವಾದುದೋ? ಖಾಸಗಿ ಮಾತುಕತೆಗಳ ನಡುವೆ ಅಮೆರಿಕದ ಅಧಿಕಾರಿಗಳು ಮೋದಿ ಎಷ್ಟು ಫೇಕ್ ಎಂದು ಬಹಳಷ್ಟು ಜೋಕ್  ಮಾಡುತ್ತಾರೆ. ಆದರೆ ಭಾರತೀಯರಿಗೆ ಇವುಗಳನ್ನು ಕೇಳುವುದು ನೋವಿನ ಸಂಗತಿ. ಈ ಬೂಮರಾಂಗ್‌ಗಳಿಂದಾಗಿಯೇ ಮೋದಿ (Narendra Modi) ಫೋಟೊಗಳಿಗಾಗಿ ಹಂಬಲಿಸುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ (Subramanian Swamy) ಟ್ವೀಟ್ ಮಾಡಿದ್ದಾರೆ. ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಜೊ ಬಿಡೆನ್ ಜತೆಗಿರುವ ಫೋಟೊವನ್ನು ಟ್ವೀಟ್ ಮಾಡಿ, ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ ಕೇಳಿದ್ದಾರೆ.  ಸುಬ್ರಮಣಿಯನ್ ಸ್ವಾಮಿ ಅವರ ಈ ಟ್ವೀಟ್ 1,503 ಬಾರಿ ರೀಟ್ವೀಟ್ ಆಗಿದ್ದು ನೆಟ್ಟಿಗರು  ಹಲವು ಚಿತ್ರ, ವಿಡಿಯೊಗಳೊಂದಿಗೆ ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.

ಈ ಟ್ವೀಟ್ ಗೆ  ಪ್ರತಿಕ್ರಿಯಿಸಿದ ಬಿಷ್ಣು ಪ್ರಸಾದ್ ಮಿಶ್ರಾ ಎಂಬ ಟ್ವೀಟಿಗರು ಜೋ ಬಿಡೆನ್  ಮತ್ತು ಮೋದಿ ಪರಸ್ಪರ ಭೇಟಿಯಾದಾಗ ಯಾವ ರೀತಿ ಪ್ರತಿಕ್ರಿಯಿಸಿದರು ಎಂಬುದಕ್ಕೆ ಫೋಟೊವೊಂದನ್ನು ಟ್ವೀಟಿಸಿದ್ದಾರೆ. ಆದಿತ್ಯ ಎಂಬ ಬಳಕೆದಾರರು ಎಎನ್ಐ ಸುದ್ದಿಸಂಸ್ಥೆಯ ಟ್ವೀಟ್  ಲಿಂಕ್ ಶೇರ್ ಮಾಡಿದ್ದು ಇದರಲ್ಲಿ ಭಾರತವು ನಾವು ಹೊಂದಿರುವ ಅತ್ಯಂತ ಮಹತ್ವದ ಸಂಬಂಧವಾಗಿದೆ. ಕಳೆದ ವಾರವಷ್ಟೇ ಪ್ರಧಾನಿ ಮೋದಿಯವರು ಬಾಲಿಯಲ್ಲಿದ್ದಾಗ ಅಧ್ಯಕ್ಷರು ಅವರನ್ನು  ಸ್ವಾಗತಿಸಿ, ಭೇಟಿಯಾಗಿರುವುದನ್ನು ನೀವು ನೋಡಿದ್ದೀರಿ. ಆದ್ದರಿಂದ  ಇದು ನಾವು ನಿಜವಾಗಿಯೂ ಗೌರವಿಸುವ ಪ್ರಮುಖ ಸಂಬಂಧವಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿರುವುದು ಈ ಟ್ವೀಟ್ ನಲ್ಲಿದೆ.

ಅಂದಹಾಗೆ ಜಿ 20 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಫೋಟೊವನ್ನು ಬಿಡೆನ್ ಅವರೇ ಟ್ವೀಟ್ ಮಾಡಿದ್ದರು. ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಮಂಗಳವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ನಡೆದ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಆಸ್ಟ್ರೇಲಿಯಾ ಮತ್ತು ಜಪಾನ್ ಅನ್ನು ಒಳಗೊಂಡಿರುವ ಕ್ವಾಡ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಅನ್ನು ಒಳಗೊಂಡಿರುವ I2U2 ನಂತಹ ಹೊಸ ಗುಂಪುಗಳಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ನಿಕಟ ಸಹಕಾರದ ಬಗ್ಗೆ ಮೋದಿ ಮತ್ತು ಬಿಡೆನ್ ತೃಪ್ತಿ ವ್ಯಕ್ತಪಡಿಸಿದ್ದಾರೆ. ಅವರು ಭಾರತ-ಯುಎಸ್‌ನ ಮುಂದುವರಿದ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದರು ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಶಿಷ್ಟಾಚಾರ ಪಕ್ಕಕ್ಕಿಟ್ಟು ಮೋದಿ ಕೈಕುಲುಕಲು ಹಾತೊರೆದ ಅಮೆರಿಕ ಅಧ್ಯಕ್ಷ ಜೋ ಬಿಡೆನ್!

ಸೋಮವಾರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇತರ ನಾಯಕರೊಂದಿಗೆ ಮಾತನಾಡುತ್ತಿದ್ದಾಗ, ಯುಎಸ್ ಅಧ್ಯಕ್ಷ ಜೋ ಬಿಡನ್ ಎಲ್ಲಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿದರು. ಪ್ರಧಾನಿ ಅವರ ಭುಜ ತಟ್ಟಿ ಆತ್ಮೀಯವಾಗಿ ಮಾತನಾಡಿದರು. ಆ ಬಳಿಕ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿದರು. ಅಧ್ಯಕ್ಷ ಜೋ ಬಿಡನ್ ಸೇರಿದಂತೆ ವಿಶ್ವದ ಇತರೆ ಹಲವು ಪ್ರಬಲ ನಾಯಕರು ಸಹ ಪ್ರಧಾನಿ ಮೋದಿ ಅವರನ್ನು ಇದೇ ರೀತಿ ಆತ್ಮೀಯವಾಗಿ ಭೇಟಿಯಾದರು. ಅಲ್ಲಿಗೆ ಬಂದಿದ್ದ ಮುಖಂಡರು ಪ್ರಧಾನಿ ಮೋದಿ ಅವರನ್ನು ಮಾತನಾಡಿಸಲು ಪೈಪೋಟಿ ನಡೆಸಿದಂತಿತ್ತು.

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ಶಿಷ್ಟಾಚಾರವನ್ನು ಬದಿಗಿಟ್ಟು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಸಭೆಯಲ್ಲಿದ್ದವರನ್ನು ಮೆಚ್ಚಿಸಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ನಡುವಿನ ಸೌಹಾರ್ದ ಸಂಭಾಷಣೆಯನ್ನು ಟ್ವಿಟರ್ ವಿಡಿಯೊದಲ್ಲಿ ನೋಡಬಹುದು.

Published On - 2:31 pm, Tue, 22 November 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!